ವಿಜಯಪುರ: ಜಮಖಂಡಿ ತಾಲ್ಲೂಕಿನ ಕವಟಗಿಯಲ್ಲಿ ದುಷ್ಕರ್ಮಿಗಳ ಕಲ್ಲೇಟಿನಿಂದ ಸಾವಿಗೀಡಾದಚಾಲಕ ನಬಿ ರಸೂಲ್ ಆವಟಿ ಅವರಿಗೆ ವಿಜಯಪುರ ಘಟಕ ಒಂದರಲ್ಲಿ ಸಾರಿಗೆ ಸಿಬ್ಬಂದಿ ಮೌನಾಚರಣೆ ಮೂಲಕ ಸಂತಾಪ ವ್ಯಕ್ತಪಡಿಸಿದರು.
ಆವಟಿ ಅವರು 2015ರಲ್ಲಿ ಮುಖ್ಯಮಂತ್ರಿ ಪದಕ ಪಡೆದಾಗ ವಿಜಯಪುರದಲ್ಲೇ ಕಾರ್ಯನಿರ್ವಹಿಸುತ್ತಿದ್ದರು. ಅವರ ಸೇವೆ ಶ್ಲಾಘನೀಯ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸ್ಮರಿಸಿದರು.
111 ಬಸ್ ಕಾರ್ಯಾಚರಣೆ
ಜಿಲ್ಲೆಯಲ್ಲಿ ಶನಿವಾರವೂ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಈ ನಡುವೆ ಜಿಲ್ಲೆಯಲ್ಲಿ 111 ಬಸ್ಗಳು ವಿವಿಧ ಮಾರ್ಗಗಳಲ್ಲಿ ಸಂಚರಿಸಿವೆ ಎಂದು ನಾರಾಯಣಪ್ಪ ಕುರುಬರ ತಿಳಿಸಿದರು.
ಬೆಳಗಾವಿ ಚುನಾವಣಾ ಕರ್ತವ್ಯಕ್ಕೆ ತೆರಳಿರುವ ಬಸ್ಗಳು ಭಾನುವಾರ ಜಿಲ್ಲೆಗೆ ಮರಳಲಿವೆ. ಸೋಮವಾರದಿಂದ ಜಿಲ್ಲೆಯಲ್ಲಿ ಸಾರಿಗೆ ಸಂಚಾರ ಪೂರ್ಣ ಪ್ರಮಾಣದಲ್ಲಿ ಸರಿಹೋಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.