<p><strong>ವಿಜಯಪುರ:</strong> ಚಲಿಸುತ್ತಿದ್ದ ಅಟೋ ರಿಕ್ಷಾದ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಆಟೋದಲ್ಲಿದ್ದ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ನಗರದ ಸೋಲಾಪುರ ರಸ್ತೆಯ ಪೊಲೀಸ್ ತರಬೇತಿ ಕೇಂದ್ರದ ಆವರಣದಲ್ಲಿದ್ದ ಮರ ಏಕಾಏಕಿ ಉರುಳಿ ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಸಿದ್ದಾರೂಢ ಕಾಲೊನಿಯ ನಿವಾಸಿ ಯಲ್ಲಮ್ಮ ಕೊಂಡಗೂಳಿ (45) ಸಾವಿಗೀಡಾಗಿದ್ದಾರೆ.</p>.<p>ಇಂದುತಾಯಿ ಕುಲಕರ್ಣಿ, ಚಂದ್ರಕಲಾ ವಾಲೀಕಾರ, ಮಂದಾಕಿನಿ ಬಡಿಗೇರ, ಸುವರ್ಣಾ ಮಜ್ಜಿಗಿ, ವಿಜಯಪುರ ತಾಲ್ಲೂಕಿನ ಮದಬಾವಿ ತಾಂಡಾದ ಅಟೋ ಚಾಲಕ ಸಚಿನ್ ರಾಠೋಡಗೆ ಗಾಯವಾಗಿದೆ.</p>.<p>ಗಾಯಾಳುಗಳಿಗೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಸ್ಥಿತಿ ಗಂಭೀರವಾಗಿದೆ.</p>.<p>ಮರ ರಸ್ತೆ ಮೇಲೆ ಬಿದ್ದಿರುವುದರಿಂದ ಈ ಮಾರ್ಗದಲ್ಲಿ ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಮರವನ್ನು ತೆರವುಗೊಳಿಸಿದರು.</p>.<p>ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ ಹಾಗೂ ಗಾಂಧಿ ಚೌಕಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಚಲಿಸುತ್ತಿದ್ದ ಅಟೋ ರಿಕ್ಷಾದ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಆಟೋದಲ್ಲಿದ್ದ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ನಗರದ ಸೋಲಾಪುರ ರಸ್ತೆಯ ಪೊಲೀಸ್ ತರಬೇತಿ ಕೇಂದ್ರದ ಆವರಣದಲ್ಲಿದ್ದ ಮರ ಏಕಾಏಕಿ ಉರುಳಿ ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಸಿದ್ದಾರೂಢ ಕಾಲೊನಿಯ ನಿವಾಸಿ ಯಲ್ಲಮ್ಮ ಕೊಂಡಗೂಳಿ (45) ಸಾವಿಗೀಡಾಗಿದ್ದಾರೆ.</p>.<p>ಇಂದುತಾಯಿ ಕುಲಕರ್ಣಿ, ಚಂದ್ರಕಲಾ ವಾಲೀಕಾರ, ಮಂದಾಕಿನಿ ಬಡಿಗೇರ, ಸುವರ್ಣಾ ಮಜ್ಜಿಗಿ, ವಿಜಯಪುರ ತಾಲ್ಲೂಕಿನ ಮದಬಾವಿ ತಾಂಡಾದ ಅಟೋ ಚಾಲಕ ಸಚಿನ್ ರಾಠೋಡಗೆ ಗಾಯವಾಗಿದೆ.</p>.<p>ಗಾಯಾಳುಗಳಿಗೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಸ್ಥಿತಿ ಗಂಭೀರವಾಗಿದೆ.</p>.<p>ಮರ ರಸ್ತೆ ಮೇಲೆ ಬಿದ್ದಿರುವುದರಿಂದ ಈ ಮಾರ್ಗದಲ್ಲಿ ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಮರವನ್ನು ತೆರವುಗೊಳಿಸಿದರು.</p>.<p>ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ ಹಾಗೂ ಗಾಂಧಿ ಚೌಕಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>