<p><strong>ಸಿಂದಗಿ</strong>: ‘ಪಟ್ಟಣದಲ್ಲಿ ₹2 ಕೋಟಿ ವೆಚ್ಚದಲ್ಲಿ ಟ್ರೀ ಪಾರ್ಕ್ ನಿರ್ಮಾಣಗೊಳ್ಳಲಿದೆ. ಅರಣ್ಯ ಸಚಿವರು ಈಗಾಗಲೇ ₹1ಕೋಟಿ ಮಂಜೂರು ಮಾಡಿದ್ದಾರೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಇಲ್ಲಿಯ ಹೊನ್ನಪ್ಪಗೌಡ ಬಿರಾದಾರ ಬಡಾವಣೆಯ 2 ಎಕರೆ 36 ಗುಂಟೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಟ್ರೀಪಾರ್ಕ್ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಪಟ್ಟಣದಲ್ಲಿರುವ ಎಲ್ಲ ಬಡಾವಣೆಗಳಲ್ಲಿ ಹಿರಿಯ ನಾಗರಿಕರು, ಮಕ್ಕಳಿಗಾಗಿ ವಾಯುವಿಹಾರಕ್ಕಾಗಿ ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ತಿಳಿಸಿದರು.</p>.<p>‘ಕಂದಾಯ ಇಲಾಖೆಗೆ ಸಂಬಂಧಿಸಿದ ಇಲ್ಲಿಯ ಹಳೆಯ ಪೊಲೀಸ್ ಠಾಣೆಯ ಜಾಗವನ್ನು ಪುರಸಭೆಗೆ ವರ್ಗಾಯಿಸಿ ಅಲ್ಲಿ ₹27 ಕೋಟಿ ವೆಚ್ಚದಲ್ಲಿ ಮೆಗಾ ಮಾರ್ಕೆಟ್ ನಿರ್ಮಾಣ ಪ್ರಸ್ತಾವವನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ನೂತನ ತಾಲ್ಲೂಕು ಆಡಳಿತ ಸೌಧ ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿದೆ. ಕಟ್ಟಡದ ಮೇಲಂತಸ್ತಿನ ಕಾಮಗಾರಿಗಾಗಿ ಹೆಚ್ಚುವರಿ ₹5 ಕೋಟಿ ರೂಪಾಯಿ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಹೊಸ ತಾಲ್ಲೂಕು ಆಡಳಿತ ಸೌಧಕ್ಕೆ ಕಚೇರಿಗಳು ಸ್ಥಳಾಂತರಗೊಂಡ ನಂತರ ಹಳೆಯ ತಾಲ್ಲೂಕು ಆಡಳಿತ ಸೌಧ ಕಟ್ಟಡಕ್ಕೆ ಪುರಸಭೆ ಕಾರ್ಯಾಲಯ ವರ್ಗಾಯಿಸಲಾಗುತ್ತದೆ’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಪ್ರಭು ಸಾರಂಗದೇವ ಶಿವಾಚಾರ್ಯ, ಅರಣ್ಯೀಕರಣಕ್ಕೆ ಆದ್ಯತೆ ನೀಡಬೇಕು ಎಂದರು.</p>.<p>ಪುರಸಭೆ ಆಡಳಿತಾಧಿಕಾರಿ ಅಬೀದ್ ಗದ್ಯಾಳ, ಡಿಎಫ್ಒ ಶಿವಶರಣಯ್ಯ, ಆರ್ಎಫ್ಒ ಭಾಗ್ಯವಂತ ಮಸೂತಿ, ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ದಯಾನಂದಗೌಡ ಬಿರಾದಾರ, ಡಾ.ಚನ್ನವೀರ ಮನಗೂಳಿ, ಗುತ್ತಿಗೆದಾರ ಮುತ್ತು ಮುಂಡೇವಾಡಗಿ, ಸತೀಶ ಬಿರಾದಾರ, ಸೋಮು ಕೊಪ್ಪಾ, ಹಾಸಿಂಪೀರ ಆಳಂದ, ಮಂಜುನಾಥ ಬಿಜಾಪೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ‘ಪಟ್ಟಣದಲ್ಲಿ ₹2 ಕೋಟಿ ವೆಚ್ಚದಲ್ಲಿ ಟ್ರೀ ಪಾರ್ಕ್ ನಿರ್ಮಾಣಗೊಳ್ಳಲಿದೆ. ಅರಣ್ಯ ಸಚಿವರು ಈಗಾಗಲೇ ₹1ಕೋಟಿ ಮಂಜೂರು ಮಾಡಿದ್ದಾರೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಇಲ್ಲಿಯ ಹೊನ್ನಪ್ಪಗೌಡ ಬಿರಾದಾರ ಬಡಾವಣೆಯ 2 ಎಕರೆ 36 ಗುಂಟೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಟ್ರೀಪಾರ್ಕ್ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಪಟ್ಟಣದಲ್ಲಿರುವ ಎಲ್ಲ ಬಡಾವಣೆಗಳಲ್ಲಿ ಹಿರಿಯ ನಾಗರಿಕರು, ಮಕ್ಕಳಿಗಾಗಿ ವಾಯುವಿಹಾರಕ್ಕಾಗಿ ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ತಿಳಿಸಿದರು.</p>.<p>‘ಕಂದಾಯ ಇಲಾಖೆಗೆ ಸಂಬಂಧಿಸಿದ ಇಲ್ಲಿಯ ಹಳೆಯ ಪೊಲೀಸ್ ಠಾಣೆಯ ಜಾಗವನ್ನು ಪುರಸಭೆಗೆ ವರ್ಗಾಯಿಸಿ ಅಲ್ಲಿ ₹27 ಕೋಟಿ ವೆಚ್ಚದಲ್ಲಿ ಮೆಗಾ ಮಾರ್ಕೆಟ್ ನಿರ್ಮಾಣ ಪ್ರಸ್ತಾವವನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ನೂತನ ತಾಲ್ಲೂಕು ಆಡಳಿತ ಸೌಧ ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿದೆ. ಕಟ್ಟಡದ ಮೇಲಂತಸ್ತಿನ ಕಾಮಗಾರಿಗಾಗಿ ಹೆಚ್ಚುವರಿ ₹5 ಕೋಟಿ ರೂಪಾಯಿ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಹೊಸ ತಾಲ್ಲೂಕು ಆಡಳಿತ ಸೌಧಕ್ಕೆ ಕಚೇರಿಗಳು ಸ್ಥಳಾಂತರಗೊಂಡ ನಂತರ ಹಳೆಯ ತಾಲ್ಲೂಕು ಆಡಳಿತ ಸೌಧ ಕಟ್ಟಡಕ್ಕೆ ಪುರಸಭೆ ಕಾರ್ಯಾಲಯ ವರ್ಗಾಯಿಸಲಾಗುತ್ತದೆ’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಪ್ರಭು ಸಾರಂಗದೇವ ಶಿವಾಚಾರ್ಯ, ಅರಣ್ಯೀಕರಣಕ್ಕೆ ಆದ್ಯತೆ ನೀಡಬೇಕು ಎಂದರು.</p>.<p>ಪುರಸಭೆ ಆಡಳಿತಾಧಿಕಾರಿ ಅಬೀದ್ ಗದ್ಯಾಳ, ಡಿಎಫ್ಒ ಶಿವಶರಣಯ್ಯ, ಆರ್ಎಫ್ಒ ಭಾಗ್ಯವಂತ ಮಸೂತಿ, ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ದಯಾನಂದಗೌಡ ಬಿರಾದಾರ, ಡಾ.ಚನ್ನವೀರ ಮನಗೂಳಿ, ಗುತ್ತಿಗೆದಾರ ಮುತ್ತು ಮುಂಡೇವಾಡಗಿ, ಸತೀಶ ಬಿರಾದಾರ, ಸೋಮು ಕೊಪ್ಪಾ, ಹಾಸಿಂಪೀರ ಆಳಂದ, ಮಂಜುನಾಥ ಬಿಜಾಪೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>