<p><strong>ವಿಜಯಪುರ:</strong> ಕರ್ತವ್ಯದ ವೇಳೆ ದರ್ಪ, ದೌರ್ಜನ್ಯ ತೋರದೆ ನ್ಯಾಯಬದ್ಧವಾಗಿ ಯಾವುದೇ ರಾಗ, ದ್ವೇಷವಿಲ್ಲದೆ ಉತ್ತಮ ಕೆಲಸ ನಿರ್ವಹಿಸಬೇಕು ಎಂದುಬೆಳಗಾವಿ ಉತ್ತರ ವಲಯದ ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್ ಹೇಳಿದರು.</p>.<p>ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದವಿಜಯಪುರ ತಾತ್ಕಾಲಿಕ ಪೊಲೀಸ್ ತರಬೇತಿ ಕೇಂದ್ರದ ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಪ್ರಶಿಕ್ಷಣಾರ್ಥಿಗಳು ಹಾಗೂ ಬಾಗಲಕೋಟೆ ತಾತ್ಕಾಲಿಕ ಪೊಲೀಸ್ ತರಬೇತಿಶಾಲೆಯ ಕಾರಾಗೃಹ ವೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸರ್ಕಾರಿ ಕೆಲಸ ದೇವರ ಕೆಲಸ ಎಂದು ನಂಬಿ ನಡೆಯಬೇಕು, ಕೆಲಸವನ್ನು ಪ್ರೀತಿಸಬೇಕು. ಖಾಕಿ ಬಟ್ಟೆ ಧರಿಸುವ ಗೌರವ ಎಲ್ಲರಿಗೂ ಸಿಗುವುದಿಲ್ಲ. ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನಿಮಗೆ ಖಾಕಿ ಬಟ್ಟೆ ಹಾಕಲು ಪ್ರೇರೇಪಿಸಿದ ನಿಮ್ಮ ಪರಿವಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದರು.</p>.<p>ಕಾರಾಗೃಹ ಇಲಾಖೆಗೆ ನೇಮಕವಾದವರು ಕರ್ತವ್ಯದ ವೇಳೆ ಕಾರಾಗೃಹ ಬಂಧಿಗಳ ಮನಪರಿವರ್ತನೆ ಮಾಡುವ ಮೂಲಕ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದರು.</p>.<p>ಪೊಲೀಸ್ ಇಲಾಖೆಗೆ ಹೊಸದಾಗಿ ಸೇರ್ಪಡೆಯಾದವರಿಗೆ ನಾಲ್ಕೈದು ವರ್ಷಗಳಲ್ಲಿ ಕ್ವಾಟರ್ಸ್ ಲಭಿಸಲಿದೆ. ಆ ಸಂದರ್ಭದಲ್ಲಿ ತಮ್ಮ ಪರಿವಾರ ಮತ್ತು ಕೆಲಸವನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ಇಲಾಖೆ ಮತ್ತು ಕುಟುಂಬಕ್ಕೆ ಗೌರವ ತರುವ ಕೆಲಸ ಮಾಡಬೇಕು ಎಂದು ಹೇಳಿದರು.</p>.<p>ತರಬೇತಿ ಅವಧಿಯಲ್ಲಿ ಪ್ರತಿಯೊಬ್ಬರ ಮಾನಸಿಕ, ದೈಹಿಕ ಮತ್ತು ವ್ಯಕ್ತಿತ್ವ ವಿಕಸನದ ಕೊರತೆಯನ್ನು ನೀಗಿಸಲಾಗಿದೆ. ಇನ್ನು ಮುಂದೆ ಹೊಸದಾಗಿ ಯಾವುದೇ ಕೊರತೆ ಬೆಳೆಸಿಕೊಳ್ಳಬಾರದು. ನಿಮ್ಮ ವ್ಯಕ್ತಿತ್ವ ಮತ್ತು ನಿಮ್ಮ ನೌಕರಿ ನಿಮ್ಮ ಕೈಯಲ್ಲೇ ಇರುತ್ತದೆ ಎಂದರು.</p>.<p>ಟಿಪಿಟಿಎಸ್ ಪ್ರಾಂಶುಪಾಲ ಡಾ.ರಾಮ ಅರಸಿದ್ದಿ ಅವರುಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ತರಬೇತಿ ಅವಧಿಯಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ತೋರಿದವರಿಗೆ ಐಜಿಪಿ ರಾಘವೇಂದ್ರ ಸುಹಾಸ್ಬಹುಮಾನ ವಿತರಿಸಿದರು.</p>.<p>ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕರ್ತವ್ಯದ ವೇಳೆ ದರ್ಪ, ದೌರ್ಜನ್ಯ ತೋರದೆ ನ್ಯಾಯಬದ್ಧವಾಗಿ ಯಾವುದೇ ರಾಗ, ದ್ವೇಷವಿಲ್ಲದೆ ಉತ್ತಮ ಕೆಲಸ ನಿರ್ವಹಿಸಬೇಕು ಎಂದುಬೆಳಗಾವಿ ಉತ್ತರ ವಲಯದ ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್ ಹೇಳಿದರು.</p>.<p>ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದವಿಜಯಪುರ ತಾತ್ಕಾಲಿಕ ಪೊಲೀಸ್ ತರಬೇತಿ ಕೇಂದ್ರದ ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಪ್ರಶಿಕ್ಷಣಾರ್ಥಿಗಳು ಹಾಗೂ ಬಾಗಲಕೋಟೆ ತಾತ್ಕಾಲಿಕ ಪೊಲೀಸ್ ತರಬೇತಿಶಾಲೆಯ ಕಾರಾಗೃಹ ವೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸರ್ಕಾರಿ ಕೆಲಸ ದೇವರ ಕೆಲಸ ಎಂದು ನಂಬಿ ನಡೆಯಬೇಕು, ಕೆಲಸವನ್ನು ಪ್ರೀತಿಸಬೇಕು. ಖಾಕಿ ಬಟ್ಟೆ ಧರಿಸುವ ಗೌರವ ಎಲ್ಲರಿಗೂ ಸಿಗುವುದಿಲ್ಲ. ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನಿಮಗೆ ಖಾಕಿ ಬಟ್ಟೆ ಹಾಕಲು ಪ್ರೇರೇಪಿಸಿದ ನಿಮ್ಮ ಪರಿವಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದರು.</p>.<p>ಕಾರಾಗೃಹ ಇಲಾಖೆಗೆ ನೇಮಕವಾದವರು ಕರ್ತವ್ಯದ ವೇಳೆ ಕಾರಾಗೃಹ ಬಂಧಿಗಳ ಮನಪರಿವರ್ತನೆ ಮಾಡುವ ಮೂಲಕ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದರು.</p>.<p>ಪೊಲೀಸ್ ಇಲಾಖೆಗೆ ಹೊಸದಾಗಿ ಸೇರ್ಪಡೆಯಾದವರಿಗೆ ನಾಲ್ಕೈದು ವರ್ಷಗಳಲ್ಲಿ ಕ್ವಾಟರ್ಸ್ ಲಭಿಸಲಿದೆ. ಆ ಸಂದರ್ಭದಲ್ಲಿ ತಮ್ಮ ಪರಿವಾರ ಮತ್ತು ಕೆಲಸವನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ಇಲಾಖೆ ಮತ್ತು ಕುಟುಂಬಕ್ಕೆ ಗೌರವ ತರುವ ಕೆಲಸ ಮಾಡಬೇಕು ಎಂದು ಹೇಳಿದರು.</p>.<p>ತರಬೇತಿ ಅವಧಿಯಲ್ಲಿ ಪ್ರತಿಯೊಬ್ಬರ ಮಾನಸಿಕ, ದೈಹಿಕ ಮತ್ತು ವ್ಯಕ್ತಿತ್ವ ವಿಕಸನದ ಕೊರತೆಯನ್ನು ನೀಗಿಸಲಾಗಿದೆ. ಇನ್ನು ಮುಂದೆ ಹೊಸದಾಗಿ ಯಾವುದೇ ಕೊರತೆ ಬೆಳೆಸಿಕೊಳ್ಳಬಾರದು. ನಿಮ್ಮ ವ್ಯಕ್ತಿತ್ವ ಮತ್ತು ನಿಮ್ಮ ನೌಕರಿ ನಿಮ್ಮ ಕೈಯಲ್ಲೇ ಇರುತ್ತದೆ ಎಂದರು.</p>.<p>ಟಿಪಿಟಿಎಸ್ ಪ್ರಾಂಶುಪಾಲ ಡಾ.ರಾಮ ಅರಸಿದ್ದಿ ಅವರುಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ತರಬೇತಿ ಅವಧಿಯಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ತೋರಿದವರಿಗೆ ಐಜಿಪಿ ರಾಘವೇಂದ್ರ ಸುಹಾಸ್ಬಹುಮಾನ ವಿತರಿಸಿದರು.</p>.<p>ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>