<p><strong>ವಿಜಯಪುರ:</strong> ಕೋವಿಡ್ನ ಪೀಡಿತ ನಗರದ ಅಕ್ಕಿ ಕಾಲೊನಿ ನಿವಾಸಿ 72 ವರ್ಷದ ವೃದ್ಧ(ಪಿ 31920) ಚಿಕಿತ್ಸೆ ಫಲಕಾರಿಯಾಗದೆ ಜುಲೈ 9 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ತೀವ್ರ ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಐಎಚ್ಡಿ ಕಾಯಿಲೆಗಳಿಂದ ವೃದ್ಧ ಬಳಲಿದ್ದರು. ಇವರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿವರ ಗುರುತಿಸುವ ಕಾರ್ಯ ನಡೆದಿದೆ ಎಂದರು.</p>.<p>ಇಂಡಿ ತಾಲ್ಲೂಕಿನ ಗುಬ್ಬೇವಾಡ ಗ್ರಾಮದ 65 ವರ್ಷದ ವೃದ್ಧ ಆಸ್ಪತ್ರೆಗೆ ದಾಖಲಾಗುವ ಮುಂಚೆಯೇ ಜುಲೈ 7 ರಂದು ಮೃತಪಟ್ಟಿದ್ದು, ಗಂಟಲುದ್ರವ ಪರೀಕ್ಷಾ ವರದಿ ನಂತರ ಬಂದಿದ್ದು, ಈ ವೃದ್ಧನಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ಹೇಳಿದರು.</p>.<p><strong>ವೃದ್ಧರು ಗುಣಮುಖ: </strong>ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ 95 ವರ್ಷದ(ಪಿ 16,965) ಹಾಗೂ 90 ವರ್ಷದ (ಪಿ12,457) ಇಬ್ಬರು ವೃದ್ಧೆಯರನ್ನು ವೈದ್ಯರು ಗುಣಪಡಿಸಿದ್ದು, ಜುಲೈ 5 ರಂದು ಇಬ್ಬರೂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಶಂಸೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೋವಿಡ್ನ ಪೀಡಿತ ನಗರದ ಅಕ್ಕಿ ಕಾಲೊನಿ ನಿವಾಸಿ 72 ವರ್ಷದ ವೃದ್ಧ(ಪಿ 31920) ಚಿಕಿತ್ಸೆ ಫಲಕಾರಿಯಾಗದೆ ಜುಲೈ 9 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ತೀವ್ರ ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಐಎಚ್ಡಿ ಕಾಯಿಲೆಗಳಿಂದ ವೃದ್ಧ ಬಳಲಿದ್ದರು. ಇವರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿವರ ಗುರುತಿಸುವ ಕಾರ್ಯ ನಡೆದಿದೆ ಎಂದರು.</p>.<p>ಇಂಡಿ ತಾಲ್ಲೂಕಿನ ಗುಬ್ಬೇವಾಡ ಗ್ರಾಮದ 65 ವರ್ಷದ ವೃದ್ಧ ಆಸ್ಪತ್ರೆಗೆ ದಾಖಲಾಗುವ ಮುಂಚೆಯೇ ಜುಲೈ 7 ರಂದು ಮೃತಪಟ್ಟಿದ್ದು, ಗಂಟಲುದ್ರವ ಪರೀಕ್ಷಾ ವರದಿ ನಂತರ ಬಂದಿದ್ದು, ಈ ವೃದ್ಧನಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ಹೇಳಿದರು.</p>.<p><strong>ವೃದ್ಧರು ಗುಣಮುಖ: </strong>ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ 95 ವರ್ಷದ(ಪಿ 16,965) ಹಾಗೂ 90 ವರ್ಷದ (ಪಿ12,457) ಇಬ್ಬರು ವೃದ್ಧೆಯರನ್ನು ವೈದ್ಯರು ಗುಣಪಡಿಸಿದ್ದು, ಜುಲೈ 5 ರಂದು ಇಬ್ಬರೂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಶಂಸೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>