ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಸಿಡಿಲಾಘಾತಕ್ಕೆ ಇಬ್ಬರು ಸಾವನಪ್ಪಿದ್ದಾರೆ.
ಇಂಡಿ ಪಟ್ಟಣದಲ್ಲಿ ಬೀರಪ್ಪ ನಿಂಗಪ್ಪ ಅವರಾದಿ(15) ಹಾಗೂ ಮಸಳಿ ಬಿ.ಕೆ.ಗ್ರಾಮದ ಸೋಮಶೇಖರ ಪಟ್ಟಣಶೆಟ್ಟಿ (45)ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.
ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಉತ್ತಮ ಮಳೆಯಾಗಿದೆ.
ತಿಕೋಟಾ,ಆಲಮಟ್ಟಿ, ಮುದ್ದೇಬಿಹಾಳ, ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದೆ. ವಿಜಯಪುರ ನಗರದಲ್ಲಿ ತುಂತುರು ಮಳೆಯಾಗಿದೆ.