ಇವರೆಲ್ಲ ಜೆಸಿಬಿ ಹಾಗೂ ಟಿಪ್ಪರ್ ನಡೆಸುವ ಕೆಲಸ ಮಾಡುತ್ತಿದ್ದು ಅತ್ಯಂತ ಬಡತನದ ಕುಟುಂಬದವರು. ಪ್ರಕರಣ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಯ ನಂತರ ಸಂಬಂಧಿಕರಿಗೆ ಒಪ್ಪಿಸಲಾಗಿದೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ತಡರಾತ್ರಿ ನಡೆಯಲಿದೆ ಎಂದು ಗ್ರಾಮದ ಗಣ್ಯರಾದ ಶಾಂತಗೌಡ ತಿಳಿಸಿದರು.