ವಿಜಯಪುರ: ವಿಜಯಪುರ–ಅಥಣಿ ಹೆದ್ದಾರಿಯಲ್ಲಿ ಸಂಚರಿಸುವ ಲಾರಿಗಳನ್ನು ವಿನಾಕಾರಣ ತಡೆದು ನಿಲ್ಲಿಸಿ, ಚಾಲಕರಿಗೆ ತೊಂದರೆ ನೀಡಿ ಅವರಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಮೇರೆಗೆ ಹೈವೇ ಪೆಟ್ರೋಲಿಂಗ್ ವಾಹನದಲ್ಲಿ ಕಾರ್ಯ ನಿರ್ವಹಿಸುವ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ್ ಅಗರವಾಲ್ ತಿಳಿಸಿದ್ದಾರೆ.