ಬಾಗಲಕೋಟೆಗಿಂತಲೂ ವಿಜಯಪುರ ಹೆಚ್ಚು ಒಣಭೂಮಿಯನ್ನು ಹೊಂದಿದ ಜಿಲ್ಲೆಯಾಗಿದ್ದು, ಇಲ್ಲಿನ ರೈತರ ಸ್ಥಿತಿ ತೀವ್ರ ಶೋಚನೀಯವಾಗಿತ್ತು. ಇಲ್ಲಿ ನಮಗೆ ಕನ್ಯೆ ಕೊಡಲು ಸಹ ಯಾರು ಮುಂದೆ ಬರುತ್ತಿರಲ್ಲಿಲ್ಲ. ಅಂತಹ ಪರಿಸ್ಥಿತಿಯಲ್ಲಿದ್ದ ವಿಜಯಪುರದ ಸ್ಥಿತಿ ಇಂದು ಸುಧಾರಣೆಯಾಗಿದೆ. ಹೆಚ್ಚು ನೀರಾವರಿ ಯೋಜನೆಗಳು ಜಾರಿಯಾಗಿವೆ. ನಮ್ಮ ಜಿಲ್ಲೆಯಿಂದ ಗಡಿಭಾಗದ ಮಹಾರಾಷ್ಟ್ರದ ಕನ್ನಡಿಗರು ವಾಸಿಸುವ ಹಳ್ಳಿಗಳಿಗೂ ನೀರು ಹರಿದು, ಅಂತರ್ಜಲ ಹೆಚ್ಚಿದೆ ಎಂದು ಹೇಳಿದರು.