ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಜ್ಯೋತಿ ಹಾಗೂ ಕಾರು ಚಾಲಕನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಜಯಪುರ ನಗರದಲ್ಲಿ ಗುರುವಾರ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವೆ ಬಳಿಕ ಬಾಗಲಕೋಟೆಯತ್ತ ಪ್ರಯಾಣಿಸುತ್ತಿದ್ದ ವೇಳೆ ಅಪಘಾತವಾಗಿದೆ.