ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ವೀಣಾ ಮಾತನಾಡಿ, ಮೆಣಸಿನಕಾಯಿ ಬೆಳೆಯಲ್ಲಿ ಬಾಧಿತ ಎಲೆಯ ಕುಡಿಗಳನ್ನು ಕತ್ತರಿಸಿ ನಾಶಪಡಿಸುವುದು, ಇಲ್ಲವೆ ಪ್ರತಿ ಎಕರೆಗೆ 25-30 ನೀಲಿ ಅಂಟು ಬಲೆಗಳನ್ನು ಮೆಣಸಿನಕಾಯಿ ಬೆಳೆಯಲ್ಲಿ ನೇತು ಹಾಕಿ ಕೀಟಗಳನ್ನು ಆಕರ್ಷಿಸಿ ನಾಶಪಡಿಸಬಹುದು, ಇಲ್ಲವೆ ಸಾವಯುವ ಕ್ರಮವಾಗಿ ಬೇವಿನ ಬೀಜದ ಕಷಾಯ ಶೇ 5 ಅಥವಾ ಶೇ 3 ರ ಬೇವಿನ ಎಣ್ಣೆ ಪ್ರತಿ ಲೀಟರ್ ನೀರಿಗೆ 2 ಮೀ.ಲೀ ನಂತೆ ಬೆರೆಸಿ ಸಿಂಪಡಿಸಬಹುದು ಎಂದು ತಿಳಿಸಿದರು.