‘ತನುವ ತೋಟವ ಮಾಡಿ, ಮನವ ಗುದ್ದಲಿ ಮಾಡಿ, ಅಗೆದು ಕಳೆದನಯ್ಯಾ ಭ್ರಾಂತಿ ಎಂಬ ಬೇರ, ಒಡೆದು ಸಂಸಾರದ ಹೆಂಟೆಯ ಬಗಿದು ಬಿತ್ತಿದೆನಯ್ಯಾ ಬ್ರಹ್ಮ ಬೀಜವ. ಅಖಂಡ ಮಂಡಲವೆಂಬ ಬಾವಿ, ಪವನವೆ ರಾಟಾಳ ಸುಷುಮ್ನನಾಳದಿಂದ ಉದಕವ ತಿದ್ದಿ, ಬಸವಗಳೈವರು ಹಸನಗೆಡಿಸಿಹವೆಂದು ಸಮೇತ ಸೈರಣೆಯೆಂಬ ಬೇಲಿಯನಿಕ್ಕಿ ಅವಾಗಳೂ ಈ ತೋಟದಲ್ಲಿ ಜಾಗವಿದ್ದು ಸಸಿಯ ಸಲಹಿದೆನು ಕಾಣಾ ಗುಹೇಶ್ವರಾ..’