<p><strong>ಇಂಡಿ:</strong> ತಾಲ್ಲೂಕಿನ ಲಚ್ಯಾಣ ಗ್ರಾಮದ ವೀರಭದ್ರೇಶ್ವರ ಜಾತ್ರೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ.29 ಹಾಗೂ 30ರಂದು ಆಯೋಜಿಸಲಾಗಿದೆ.</p>.<p>ಮೇ 29 ರಂದು ಬೆಳ್ಳಿಗೆ 5 ಗಂಟೆಗೆ ದೇವಸ್ಥಾನದಲ್ಲಿ ವೀರಭದ್ರ ದೇವರ ಮೂರ್ತಿಗೆ ಭಕ್ತರಿಂದ ಅಭಿಷೇಕ, ವಿಶೇಷ ಪೂಜೆ ನೆರವೇರಲಿದೆ. ಬಳಿಕ ಇದೇ ದಿನ ರಾತ್ರಿ 8 ಗಂಟೆಗೆ ದೇವಸ್ಥಾನದ ಎದುರು ಅಗ್ನಿ ಪ್ರಜ್ವಲನ ಕಾರ್ಯಕ್ರಮ ನಡೆಯಲಿದೆ. ನಂತರ ರಂಗು ರಂಗಿನ ಮದ್ದು ಸುಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಮೇ 30 ರಂದು ಬೆಳಗಿನ ಜಾವ 5 ಗಂಟೆಗೆವೀರಭದ್ರ ದೇವರ ಮೂರ್ತಿಗೆ ಭಕ್ತರಿಂದ ರುದ್ರಾಭಿಷೇಕ ನೆರವೇರಲಿದೆ. ಬಳಿಕ 8 ಗಂಟೆಗೆ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಭದ್ರ ದೇವರ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆಯು ಸಂಬಾಳ ವಾದ್ಯ ಮೇಳದೊಂದಿಗೆ ಜರುಗಲಿದೆ. ಬಳಿಕ ಈ ಮೆರವಣಿಗೆಯು ಊರ ಹೊರಗಿನ ಪಾದಗಟ್ಟಿ ತಲುಪಿದ ಬಳಿಕ ಪಾದಗಟ್ಟಿ ಪೂಜೆ, ಮಹಾ ಮಂಗಳಾರತಿಯೊಂದಿಗೆ ಮರಳಿ ಮೂಲ ದೇವಸ್ಥಾನ ತಲುಪಿದ ಕೂಡಲೇ ಅಗ್ನಿ ಪ್ರವೇಶ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಲಿದೆ. </p>.<p>ಬಳಿಕ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ:</strong> ತಾಲ್ಲೂಕಿನ ಲಚ್ಯಾಣ ಗ್ರಾಮದ ವೀರಭದ್ರೇಶ್ವರ ಜಾತ್ರೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ.29 ಹಾಗೂ 30ರಂದು ಆಯೋಜಿಸಲಾಗಿದೆ.</p>.<p>ಮೇ 29 ರಂದು ಬೆಳ್ಳಿಗೆ 5 ಗಂಟೆಗೆ ದೇವಸ್ಥಾನದಲ್ಲಿ ವೀರಭದ್ರ ದೇವರ ಮೂರ್ತಿಗೆ ಭಕ್ತರಿಂದ ಅಭಿಷೇಕ, ವಿಶೇಷ ಪೂಜೆ ನೆರವೇರಲಿದೆ. ಬಳಿಕ ಇದೇ ದಿನ ರಾತ್ರಿ 8 ಗಂಟೆಗೆ ದೇವಸ್ಥಾನದ ಎದುರು ಅಗ್ನಿ ಪ್ರಜ್ವಲನ ಕಾರ್ಯಕ್ರಮ ನಡೆಯಲಿದೆ. ನಂತರ ರಂಗು ರಂಗಿನ ಮದ್ದು ಸುಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಮೇ 30 ರಂದು ಬೆಳಗಿನ ಜಾವ 5 ಗಂಟೆಗೆವೀರಭದ್ರ ದೇವರ ಮೂರ್ತಿಗೆ ಭಕ್ತರಿಂದ ರುದ್ರಾಭಿಷೇಕ ನೆರವೇರಲಿದೆ. ಬಳಿಕ 8 ಗಂಟೆಗೆ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಭದ್ರ ದೇವರ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆಯು ಸಂಬಾಳ ವಾದ್ಯ ಮೇಳದೊಂದಿಗೆ ಜರುಗಲಿದೆ. ಬಳಿಕ ಈ ಮೆರವಣಿಗೆಯು ಊರ ಹೊರಗಿನ ಪಾದಗಟ್ಟಿ ತಲುಪಿದ ಬಳಿಕ ಪಾದಗಟ್ಟಿ ಪೂಜೆ, ಮಹಾ ಮಂಗಳಾರತಿಯೊಂದಿಗೆ ಮರಳಿ ಮೂಲ ದೇವಸ್ಥಾನ ತಲುಪಿದ ಕೂಡಲೇ ಅಗ್ನಿ ಪ್ರವೇಶ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಲಿದೆ. </p>.<p>ಬಳಿಕ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>