<p><strong>ವಿಜಯಪುರ</strong>: ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್ ಏಳು ಸದಸ್ಯರ ಪೀಠ ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ಹಾಗೂ ಕಳೆದ 30 ವರ್ಷಗಳ ನಿರಂತರ ಹೋರಾಟಕ್ಕೆ ಸಂದ ಜಯ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.</p>.<p>ಒಳಮೀಸಲಾತಿ ಜಾರಿಗಾಗಿ ಅನೇಕ ದಶಕಗಳ ಹೋರಾಟವೇ ನಡೆದಿತ್ತು. ಈಗ ಸುಪ್ರೀಂಕೋರ್ಟ್ ಸಹ ಈ ಒಳ ಮೀಸಲಾತಿ ಜಾರಿಗೊಳಿಸಲು ಅನುಮತಿ ನೀಡಿರುವುದು ಮತ್ತಷ್ಟು ಸಂತಸ ತರಿಸಿದೆ. ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಸಾಮಾಜಿಕ ನ್ಯಾಯಕ್ಕೆ ನವ ಶಕ್ತಿ ಹಾಗೂ ಭಾರತೀಯ ಸಂವಿಧಾನದ ಆಶಯವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ತಿಳಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ನ ಏಳು ನ್ಯಾಯಾಧೀಶರ ಪೀಠವು ಚಿನ್ನಯ್ಯ ತೀರ್ಪನ್ನು ರದ್ದುಗೊಳಿಸಿದ್ದು, ದೇವೀಂದ್ರ ಸಿಂಗ್ ಪ್ರಕರಣದ ತೀರ್ಪನ್ನು ಎತ್ತಿಹಿಡಿದಿದೆ. ಭಾರತದ ಸಂವಿಧಾನವು ಎಸ್ಸಿಗಳಲ್ಲಿ ಒಳ ಮೀಸಲಾತಿಯನ್ನು ಅನುಮತಿಸುತ್ತದೆ ಎಂದು ತೀರ್ಪು ಪ್ರಕಟಿಸಿದೆ. ನ್ಯಾಯಾಲಯದ ಈ ಆದೇಶ ಸಮಸ್ತ ಎಸ್.ಸಿ. ಸಮುದಾಯಗಳಲ್ಲಿ ಹರುಷ ತರಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಮಾದಿಗ ಸಮಾಜಕ್ಕೆ ನ್ಯಾಯ: ಜಿಗಜಿಣಗಿ</strong> </p>.<p>ವಿಜಯಪುರ: ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ. ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಸಮರ್ಥನೀಯ ಎಂದು ಒಳಮೀಸಲಾತಿ ಪರ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಸುಮಾರು 3 ದಶಕಗಳ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹರ್ಷ ವ್ಯಕ್ತಪಡಿಸಿದರು.</p>.<p>ಮಾದಿಗ ಸಮಾಜದ ಬೇಡಿಕೆಯನ್ನು ಪರಿಗಣಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ವಿಶೇಷ ಪೀಠ ಸ್ಥಾಪನೆಗೆ ಕಾರಣರಾಗುವ ಮೂಲಕ ಬೇಡಿಕೆ ಸ್ಪಂದಿಸಿದ್ದಾರೆ. ನೀಡಿದ ಭರವಸೆಯಂತೆ ಕಾಲಮಿತಿ ಒಳಗೆ ಆದೇಶ ಹೊರಬರಲು ಕಾರಣವಾಗಿದ್ದಾರೆ. ಈ ತೀರ್ಪಿನಿಂದ ಇಡೀ ದೇಶದ ಮಾದಿಗ ಸಮಾಜದ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದರು.</p>.<p>ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶವನ್ನು ಕೂಡಲೇ ತಕ್ಷಣ ಜಾರಿಗೆ ಮಾಡಬೇಕು. ಮುಖ್ಯಮಂತ್ರಿಗಳು ಹಾಗೂ ಕಾನೂನು ಮಂತ್ರಿಗಳು ಈ ನಿಟ್ಟಿನಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಿ ಕೆಲಸ ಮಾಡಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್ ಏಳು ಸದಸ್ಯರ ಪೀಠ ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ಹಾಗೂ ಕಳೆದ 30 ವರ್ಷಗಳ ನಿರಂತರ ಹೋರಾಟಕ್ಕೆ ಸಂದ ಜಯ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.</p>.<p>ಒಳಮೀಸಲಾತಿ ಜಾರಿಗಾಗಿ ಅನೇಕ ದಶಕಗಳ ಹೋರಾಟವೇ ನಡೆದಿತ್ತು. ಈಗ ಸುಪ್ರೀಂಕೋರ್ಟ್ ಸಹ ಈ ಒಳ ಮೀಸಲಾತಿ ಜಾರಿಗೊಳಿಸಲು ಅನುಮತಿ ನೀಡಿರುವುದು ಮತ್ತಷ್ಟು ಸಂತಸ ತರಿಸಿದೆ. ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಸಾಮಾಜಿಕ ನ್ಯಾಯಕ್ಕೆ ನವ ಶಕ್ತಿ ಹಾಗೂ ಭಾರತೀಯ ಸಂವಿಧಾನದ ಆಶಯವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ತಿಳಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ನ ಏಳು ನ್ಯಾಯಾಧೀಶರ ಪೀಠವು ಚಿನ್ನಯ್ಯ ತೀರ್ಪನ್ನು ರದ್ದುಗೊಳಿಸಿದ್ದು, ದೇವೀಂದ್ರ ಸಿಂಗ್ ಪ್ರಕರಣದ ತೀರ್ಪನ್ನು ಎತ್ತಿಹಿಡಿದಿದೆ. ಭಾರತದ ಸಂವಿಧಾನವು ಎಸ್ಸಿಗಳಲ್ಲಿ ಒಳ ಮೀಸಲಾತಿಯನ್ನು ಅನುಮತಿಸುತ್ತದೆ ಎಂದು ತೀರ್ಪು ಪ್ರಕಟಿಸಿದೆ. ನ್ಯಾಯಾಲಯದ ಈ ಆದೇಶ ಸಮಸ್ತ ಎಸ್.ಸಿ. ಸಮುದಾಯಗಳಲ್ಲಿ ಹರುಷ ತರಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಮಾದಿಗ ಸಮಾಜಕ್ಕೆ ನ್ಯಾಯ: ಜಿಗಜಿಣಗಿ</strong> </p>.<p>ವಿಜಯಪುರ: ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ. ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಸಮರ್ಥನೀಯ ಎಂದು ಒಳಮೀಸಲಾತಿ ಪರ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಸುಮಾರು 3 ದಶಕಗಳ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹರ್ಷ ವ್ಯಕ್ತಪಡಿಸಿದರು.</p>.<p>ಮಾದಿಗ ಸಮಾಜದ ಬೇಡಿಕೆಯನ್ನು ಪರಿಗಣಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ವಿಶೇಷ ಪೀಠ ಸ್ಥಾಪನೆಗೆ ಕಾರಣರಾಗುವ ಮೂಲಕ ಬೇಡಿಕೆ ಸ್ಪಂದಿಸಿದ್ದಾರೆ. ನೀಡಿದ ಭರವಸೆಯಂತೆ ಕಾಲಮಿತಿ ಒಳಗೆ ಆದೇಶ ಹೊರಬರಲು ಕಾರಣವಾಗಿದ್ದಾರೆ. ಈ ತೀರ್ಪಿನಿಂದ ಇಡೀ ದೇಶದ ಮಾದಿಗ ಸಮಾಜದ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದರು.</p>.<p>ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶವನ್ನು ಕೂಡಲೇ ತಕ್ಷಣ ಜಾರಿಗೆ ಮಾಡಬೇಕು. ಮುಖ್ಯಮಂತ್ರಿಗಳು ಹಾಗೂ ಕಾನೂನು ಮಂತ್ರಿಗಳು ಈ ನಿಟ್ಟಿನಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಿ ಕೆಲಸ ಮಾಡಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>