ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ವೇಳೆ ನಗರದಲ್ಲಿ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ನಡೆದಿದ್ದ ದಾಂದಲೆ ಬಳಿಕ ಕೋಮು ಸಂಘರ್ಷದ ರೂಪ ಪಡೆದುಕೊಂಡಿತ್ತು. ಎರಡು ಕೋಮುಗಳ ಮಧ್ಯೆ ಕಲ್ಲು ತೂರಾಟ ನಡೆದು, ಬೈಕ್ ಹಾಗೂ ಇತರೆ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಸಂಬಂಧ ನಗರದ ಗಾಂಧಿಚೌಕ್ ಪೊಲೀಸರು, ಶಾಸಕ ಯತ್ನಾಳ ಸೇರಿದಂತೆ 134 ಜನರ ಮೇಲೆ ವಿರುದ್ಧ 29 ಪ್ರಕರಣ ದಾಖಲಿಸಿಕೊಂಡಿದ್ದರು.