ಜಿಲ್ಲೆಯಿಂದ ವರ್ಗಾವಣೆಯಾಗಿರುವ ಸುನೀಲ್ ಕುಮಾರ್ ಅವರಿಗೆ ಇನ್ನೂ ಯಾವುದೇ ಸ್ಥಳ ಸೂಚಿಸಿಲ್ಲ. ಸುನೀಲ್ ಕುಮಾರ್ ಅವರು ವಿಜಯಪುರ ನಗರದ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗಾಗಿ ವಿಶೇಷ ಆಸಕ್ತಿ ವಹಿಸಿದ್ದರು. ಪ್ರತಿ ತಿಂಗಳಿಗೊಮ್ಮೆ ‘ಹೆರಿಟೇಜ್ ವಾಕ್’ ಹೆಸರಲ್ಲಿ ಸ್ಮಾರಕಗಳಿಗೆ ಭೇಟಿ ನೀಡಿ, ಅಲ್ಲಿ ಸ್ವಚ್ಛತೆ, ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿದ್ದರು. ಅಲ್ಲದೇ, ಜನಪರ ಕಾರ್ಯಗಳಿಂದ ಮೆಚ್ಚುಗೆಗೆ ಪಾತ್ರವಾಗಿದ್ದರು.