2018ರ ಜೂನ್ 4ರಂದು ಆರೋಪಿ ಪತಿಯು ಗುಡಿಸಿಲಿಗೆ ಬೆಂಕಿ ಹಚ್ಚಿ ಪತ್ನಿ ಕೊಲೆಗೆ ಯತ್ನಿಸಿದ್ದನು. ಈ ಸಂದರ್ಭದಲ್ಲಿ ಪ್ರಶ್ನಿಸಲು ಹೋದ ಮಗನಿಗೆ ಮಚ್ಚಿನಿಂದ ಹೊಡೆದು ತೀವ್ರವಾಗಿ ಗಾಯಗೊಳಿಸಿದ್ದನು. ಗುಡಿಸಿಲಿಗೆ ಬೆಂಕಿ ಹಚ್ಚಿದ್ದರಿಂದ ₹ 2ಸಾವಿರ ನಗದು, ₹ 10 ಸಾವಿರ ಮೌಲ್ಯದ ಆಹಾರ ಸಾಮಗ್ರಿಗಳು, ಪಾತ್ರೆಗಳು ಸುಟ್ಟು ಹೋಗಿದ್ದವು. ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.