ವಿಜಯಪುರ: ಇಲ್ಲಿನ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಆದಿಲ್ ಶಾಹಿ ಅರಸರ ಕಾಲದ ಐತಿಹಾಸಿಕ ಸ್ಮಾರಕ ಮೆಹತರ್ ಮಹಲ್ಗೆ ಗುರುವಾರ ಸಂಜೆ ಸಿಡಿಲು ಬಡಿದು, ಮಿನಾರ್ನ ಗೋಪುರಕ್ಕೆ ಹಾನಿಯಾಗಿದೆ.
ಮೆಹತರ್ ಮಹಲ್ ಎದುರು ರಸ್ತೆಯಲ್ಲಿ ನಿಲ್ಲಿಸಿದ್ದ ಒಂದು ಕಾರು, ಎರಡು ಬೈಕುಗಳ ಮೇಲೆ ಮಿನಾರ್ನ ಕಲ್ಲುಗಳು ಬಿದ್ದು, ಜಖಂ ಆಗಿವೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ಯಾರೂ ಇರದ ಕಾರಣ ಭಾರೀ ಅನಾಹುತ ತಪ್ಪಿದೆ.