ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ನೆರವು, ಮಾರ್ಗದರ್ಶನ ನೀಡುತ್ತಾ ಸ್ಥಳದಲ್ಲೇ ಇದ್ದ ಇಂಡಿ ಶಾಸಕ ಯಶವಂತ ರಾಯಗೌಡ ಪಾಟೀಲ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿ.ಪಂ.ಸಿಇಒ ರಿಷಿ ಆನಂದ ಅವರು, ಮಗು ಜೀವಂತ ಹೊರಬಂದಿರುವುದಕ್ಕೆ ನಿಟ್ಟುಸಿರು ಬಿಟ್ಟರು.
ಇಷ್ಡೊಂದು ದೀರ್ಘಕಾಲ ಮಗು ಕೊಳವೆ ಬಾವಿಯೊಳಗೆ ಸಿಲುಕಿ ಜೀವಂತಾಗಿ ಹೊರ ಬಂದಿರುವುದು ಪವಾಡವೇ ಸರಿ ಎಂದು ಜನ ಮಾತನಾಡಿಕೊಳ್ಳುತ್ತಿದ್ದರು.
ಸುದ್ದಿ ತಿಳಿದು ಜಿಲ್ಲೆಯ ಮೂಲೆ ಮೂಲೆಗಳಿಂದ ರಕ್ಷಣಾ ಕಾರ್ಯಾಚರಣೆ ವೀಕ್ಷಿಸಲು ಬಂದಿದ್ದ ಜನರು ಖುಷಿಯಿಂದ ಮನೆಯತ್ತ ಹೆಜ್ಜೆ ಹಾಕಿದರು.