<p><strong>ವಿಜಯಪುರ</strong>: ‘ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ ವಹಿಸುತ್ತಿವೆ’ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಹಾಗೂ ಅಜೀಂ ಪ್ರೇಮ್ ಜಿಫೌಂಡೇಷನ್ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಮಂದಿರದಲ್ಲಿ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರಿಗೆ ಹಮ್ಮಿಕೊಂಡಿದ್ದ ‘ಬುನಾದಿ’ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳ ಆರೋಗ್ಯ, ಶಿಕ್ಷಣ ಮತ್ತು ಉತ್ತಮ ಸಂಸ್ಕಾರಗಳ ಬುನಾದಿ ಬಾಲ್ಯಾವಸ್ಥೆಯಲ್ಲೇ ನಿರ್ಮಾಣವಾಗುತ್ತದೆ. ಹಾಗಾಗಿ ಅಂಗನವಾಡಿ ಶಿಕ್ಷಕಿಯರು ಹಾಗೂ ಸಹಾಯಕಿಯರು ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕು’ ಎಂದರು.</p>.<p>‘ಸರ್ಕಾರ ಮಕ್ಕಳ ಹಾಗೂ ಮಹಿಳೆಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ.ಅಂಗನವಾಡಿ ಶಿಕ್ಷಕಿಯರು ಅಂಗನ ವಾಡಿ ಕೇಂದ್ರಕ್ಕೆ ಸೀಮಿತವಾಗದೆ, ಗ್ರಾಮಮತ್ತು ಸಮುದಾಯ ಮಟ್ಟದಲ್ಲಿಯೂ ಜನರಿಗೆ ಯೋಜನೆಗಳ ಮಾಹಿತಿ ತಲುಪಿಸಬೇಕು. ಅವುಗಳ ಸದುಪಯೋಗ ಪಡೆಯಲು ಪ್ರೇರಣೆ ನೀಡಬೇಕು’ ಎಂದು ತಿಳಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ಹಾಣ, ಕಾರ್ಯಕ್ರಮಾಧಿಕಾರಿನಿರ್ಮಲಾ ಸುರಪುರ, ದೀಪಾಕ್ಷಿ, ಜಾನಕಿ, ಅಜೀಂ ಪ್ರೇಮ್ ಜಿಫೌಂಡೇಷನ್ ಜಿಲ್ಲಾ ಸಂಯೋಜಕ ಹರೀಶ ಕೆ.ಆರ್. ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-26-1056103110</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ ವಹಿಸುತ್ತಿವೆ’ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಹಾಗೂ ಅಜೀಂ ಪ್ರೇಮ್ ಜಿಫೌಂಡೇಷನ್ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಮಂದಿರದಲ್ಲಿ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರಿಗೆ ಹಮ್ಮಿಕೊಂಡಿದ್ದ ‘ಬುನಾದಿ’ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳ ಆರೋಗ್ಯ, ಶಿಕ್ಷಣ ಮತ್ತು ಉತ್ತಮ ಸಂಸ್ಕಾರಗಳ ಬುನಾದಿ ಬಾಲ್ಯಾವಸ್ಥೆಯಲ್ಲೇ ನಿರ್ಮಾಣವಾಗುತ್ತದೆ. ಹಾಗಾಗಿ ಅಂಗನವಾಡಿ ಶಿಕ್ಷಕಿಯರು ಹಾಗೂ ಸಹಾಯಕಿಯರು ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕು’ ಎಂದರು.</p>.<p>‘ಸರ್ಕಾರ ಮಕ್ಕಳ ಹಾಗೂ ಮಹಿಳೆಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ.ಅಂಗನವಾಡಿ ಶಿಕ್ಷಕಿಯರು ಅಂಗನ ವಾಡಿ ಕೇಂದ್ರಕ್ಕೆ ಸೀಮಿತವಾಗದೆ, ಗ್ರಾಮಮತ್ತು ಸಮುದಾಯ ಮಟ್ಟದಲ್ಲಿಯೂ ಜನರಿಗೆ ಯೋಜನೆಗಳ ಮಾಹಿತಿ ತಲುಪಿಸಬೇಕು. ಅವುಗಳ ಸದುಪಯೋಗ ಪಡೆಯಲು ಪ್ರೇರಣೆ ನೀಡಬೇಕು’ ಎಂದು ತಿಳಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ಹಾಣ, ಕಾರ್ಯಕ್ರಮಾಧಿಕಾರಿನಿರ್ಮಲಾ ಸುರಪುರ, ದೀಪಾಕ್ಷಿ, ಜಾನಕಿ, ಅಜೀಂ ಪ್ರೇಮ್ ಜಿಫೌಂಡೇಷನ್ ಜಿಲ್ಲಾ ಸಂಯೋಜಕ ಹರೀಶ ಕೆ.ಆರ್. ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-26-1056103110</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>