<p><strong>ಇಂಡಿ:</strong> ಬಕ್ರೀದ್ ಮುಸ್ಲಿಮರ ತ್ಯಾಗ ಮತ್ತು ಬಲಿದಾನದ ಪ್ರಮುಖ ಹಬ್ಬವಾಗಿದೆ. ಅಲ್ಲಾಹನ ಮೇಲಿನ ಭಕ್ತಿಯಿಂದ ಪ್ರವಾದಿ ಮಹಮ್ಮದ ಇಬ್ರಾಹಿಂ ತಮ್ಮ ಮಗನನ್ನೇ ಬಲಿ ಕೊಡಲು ಮುಂದಾದಾಗ ಅವರ ತ್ಯಾಗಕ್ಕೆ ಮೆಚ್ಚಿ ಅಲ್ಲಾಹ ಮಗನ ಬದಲಾಗಿ ಕುರಿಯನ್ನು ಬಲಿ ನೀಡುವಂತೆ ಮಾಡಿದ ಪವಾಡ ನೆನಪಿಸುತ್ತದೆ ಈ ಆಚರಣೆ ಎಂದು ಧರ್ಮಗುರು ಮೌಲಾನಾ ಶಾಕೀರ ಹುಸೇನ ಕಾಶ್ಮಿ ಹೇಳಿದರು.</p>.<p>ಅವರು ಗುರುವಾರ ನಗರದ ಹಂಜಗಿ ರಸ್ತೆಯ ಈದಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ನಡೆದ ನಮಾಜ್ ಕಾರ್ಯಕ್ರಮದ ಮೊದಲು ಮಾತನಾಡಿದರು.</p>.<p>ಧರ್ಮಗುರುಗಳಾದ ಮುಫ್ತಿ ಅಬ್ದುಲ್ ರಹಮಾನ್, ಹಾಫೀಜ, ಫಯರೋಜ ಬಾಗವಾನ, ಜಾವೇದ ಮೋಮಿನ, ಅಬ್ದುಲ್ ರಹಮಾನ ಬಾಗವಾನ , ಅಬ್ದುಲ್ ರಶಿದ ಮುಗಳಿ, ಷರೀಪ ಪಟೇಲ, ಹಸನ ಮುಜಾವರ, ಯುನುಶ ರೇವೂರಕರ, ಫಯಾಜ ಬಾಗವಾನ ಭಾಗವಹಿಸಿದ್ದರು.</p>.<p>ನಗರದ ಅಂಜುಮನ್ ಮೈದಾನದಲ್ಲಿ ಪ್ರಾರ್ಥನೆ ಮಾಡಿದರು. ಝಿಯಾ ಉಲ್ ಹಕ್ ಉಮರಿ ನಮಾಜ ಬೋಧಿಸಿದರು. ತಾಲ್ಲೂಕಿನ ತಾಂಬಾ, ಸಾತಲಗಾಂವ, ಇಂಗಳಗಿ, ಸಾಲೋಟಗಿ, ಭತಗುಣಕಿ ಈದಗಾ ಮೈದಾನದಲ್ಲಿ ನಮಾಜ ಮಾಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-26-1487829399</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ:</strong> ಬಕ್ರೀದ್ ಮುಸ್ಲಿಮರ ತ್ಯಾಗ ಮತ್ತು ಬಲಿದಾನದ ಪ್ರಮುಖ ಹಬ್ಬವಾಗಿದೆ. ಅಲ್ಲಾಹನ ಮೇಲಿನ ಭಕ್ತಿಯಿಂದ ಪ್ರವಾದಿ ಮಹಮ್ಮದ ಇಬ್ರಾಹಿಂ ತಮ್ಮ ಮಗನನ್ನೇ ಬಲಿ ಕೊಡಲು ಮುಂದಾದಾಗ ಅವರ ತ್ಯಾಗಕ್ಕೆ ಮೆಚ್ಚಿ ಅಲ್ಲಾಹ ಮಗನ ಬದಲಾಗಿ ಕುರಿಯನ್ನು ಬಲಿ ನೀಡುವಂತೆ ಮಾಡಿದ ಪವಾಡ ನೆನಪಿಸುತ್ತದೆ ಈ ಆಚರಣೆ ಎಂದು ಧರ್ಮಗುರು ಮೌಲಾನಾ ಶಾಕೀರ ಹುಸೇನ ಕಾಶ್ಮಿ ಹೇಳಿದರು.</p>.<p>ಅವರು ಗುರುವಾರ ನಗರದ ಹಂಜಗಿ ರಸ್ತೆಯ ಈದಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ನಡೆದ ನಮಾಜ್ ಕಾರ್ಯಕ್ರಮದ ಮೊದಲು ಮಾತನಾಡಿದರು.</p>.<p>ಧರ್ಮಗುರುಗಳಾದ ಮುಫ್ತಿ ಅಬ್ದುಲ್ ರಹಮಾನ್, ಹಾಫೀಜ, ಫಯರೋಜ ಬಾಗವಾನ, ಜಾವೇದ ಮೋಮಿನ, ಅಬ್ದುಲ್ ರಹಮಾನ ಬಾಗವಾನ , ಅಬ್ದುಲ್ ರಶಿದ ಮುಗಳಿ, ಷರೀಪ ಪಟೇಲ, ಹಸನ ಮುಜಾವರ, ಯುನುಶ ರೇವೂರಕರ, ಫಯಾಜ ಬಾಗವಾನ ಭಾಗವಹಿಸಿದ್ದರು.</p>.<p>ನಗರದ ಅಂಜುಮನ್ ಮೈದಾನದಲ್ಲಿ ಪ್ರಾರ್ಥನೆ ಮಾಡಿದರು. ಝಿಯಾ ಉಲ್ ಹಕ್ ಉಮರಿ ನಮಾಜ ಬೋಧಿಸಿದರು. ತಾಲ್ಲೂಕಿನ ತಾಂಬಾ, ಸಾತಲಗಾಂವ, ಇಂಗಳಗಿ, ಸಾಲೋಟಗಿ, ಭತಗುಣಕಿ ಈದಗಾ ಮೈದಾನದಲ್ಲಿ ನಮಾಜ ಮಾಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-26-1487829399</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>