ಶಾಸಕ ಸವಾಲನ್ನು ಅಷ್ಟೇ ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು, ಕಾರ್ಯಕರ್ತರು, ಬಂದ್ ಯಶಸ್ವಿಗೊಳಿಸಲು ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ನಗರದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಅಂಗಡಿ, ಮಳಿಗೆಗಳನ್ನು ಭೇಟಿ ಮಾಡಿ, ಬಂದ್ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ. ಬಂದ್ ಅಂಗವಾಗಿ ನಗರದಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.