<p>ಬಸವನಬಾಗೇವಾಡಿ : ಬಸವನಬಾಗೇವಾಡಿ, ವಿಜಯಪುರ ಹಾಗೂ ಇಂಡಿ ಮೂರೂ ತಾಲ್ಲೂಕುಗಳಲ್ಲಿ ₹1,300 ಕೋಟಿ ವೆಚ್ಚದಲ್ಲಿ 2050ರವರೆಗೂ ಅವಶ್ಯವಿರುಷ್ಟು ನಿರಂತರ 24X7 ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಕಾರ್ಯಕ್ಕೆ ಬರುವ ವರ್ಷದಲ್ಲೇ ಉದ್ಘಾಟನೆ ನೆರವೇರಿಸಲಿದ್ದೇವೆ ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.</p>.<p>ತಾಲ್ಲೂಕಿನ ಡೋಣೂರು ಗ್ರಾಮದಲ್ಲಿ ಕಟ್ಟಿಮನಿ ಹಿರೇಮಠದ ಶ್ರೀಗುರು ಮರುಳಸಿದ್ದೇಶ್ವರ ಜಾತ್ರೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಹಾಗೂ ಅಭಿನಂದನಾ ಗೌರವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಡೋಣೂರು ಸರ್ವಾಂಗೀಣ ಅಭಿವೃದ್ಧಿ ಆಗಬೇಕೆಂಬುದು ನಮ್ಮೆಲ್ಲರ ಕನಸು. ಶಿಥಿಲಾವಸ್ಥೆಯಲ್ಲಿರುವ ಡೋಣೂರು ಸೇತುವೆ ನಿರ್ಮಿಸಲು ಸಚಿವ ಸಂಪುಟದಲ್ಲಿ ₹ 35 ಕೋಟಿ ಅನುದಾನಕ್ಕೆ ಅನುಮೋದನೆ ಸಿಕ್ಕಿದೆ. ನೇಗಿನಾಳ ಸೇತುವೆ ಸಹ ಕಟ್ಟುತ್ತಿದ್ದೇವೆ. ಪೂಜ್ಯ ಮರುಳಸಿದ್ದೇಶ್ವರ ಜಾತ್ರೆ ನಿಮಿತ್ತ ಸಿದ್ದಲಿಂಗ ಪೂಜ್ಯರು ಸಾಮೂಹಿಕ ವಿವಾಹ, ಸರ್ವಧರ್ಮ ಸಮ್ಮೇಳನದಂತಹ ಅನೇಕ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಊರಿನಲ್ಲಿ ಹೊಸತನ ಸೃಷ್ಟಿಸಿ ಮೆರುಗು ತಂದುಕೊಟ್ಟಿದ್ದಾರೆ.</p>.<p>ಜಾಲಹಳ್ಳಿ ಸಂಸ್ಥಾನಮಠದ ಜಯಶಾಂತಲಿಂಗ ಶಿವಾಚಾರ್ಯರು ಮಾತನಾಡಿದರು.</p>.<p>ಬಂಥನಾಳದ ವೃಷಭಲಿಂಗ ಶಿವಯೋಗಿಗಳು, ಬೆಂಗಳೂರು ಶಿವಗಂಗಾ ಕ್ಷೇತ್ರದ ಮಲಯ ಶಾಂತಮುನಿ ಮಹಾಸ್ವಾಮಿಗಳು, ಶಿರಶ್ಯಾಡದ ಮುರುಘಂದ್ರ ಸ್ವಾಮೀಜಿಗಳು, ಮನಗೂಳಿ ಮತ್ತು ಬೆಂಗಳೂರಿನ ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯರು, ಕವಲಗಿಯ ಅಭಿನವ ಸಿದ್ದರಾಮೇಶ್ವರ ಪೂಜ್ಯರು ಸೇರಿದಂತೆ ಅನೇಕ ಪರಮಪೂಜ್ಯರು ಆಶೀರ್ವಚನ ನೀಡಿದರು.</p>.<p>ಸಮಾರಂಭದಲ್ಲಿ ಜೈನಾಪೂರದ ರೇಣುಕ ಶಿವಾಚಾರ್ಯರು, ಚಿಮ್ಮಲಗಿಯ ಸಿದ್ದ ರೇಣುಕ ಶಿವಾಚಾರ್ಯರು, ತಡವಲಗಾದ ರಾಯಚೋಟೇಶ್ವರ ಶ್ರೀಗಳು, ಇಂಗಳೇಶ್ವರ ಬೃಂಗೀಶ್ವರಲಿಂಗ ಶಿವಾಚಾರ್ಯರು, ಕವಲಗಿಯ ಅಭಿನವ ಸಿದ್ದರಾಮೇಶ್ವರ ಶ್ರೀಗಳು ಸೇರಿದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹಾಗೂ ಅನೇಕ ಪೂಜ್ಯರು, ಪ್ರಮುಖರು ಭಾಗಿಯಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-26-707395533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವನಬಾಗೇವಾಡಿ : ಬಸವನಬಾಗೇವಾಡಿ, ವಿಜಯಪುರ ಹಾಗೂ ಇಂಡಿ ಮೂರೂ ತಾಲ್ಲೂಕುಗಳಲ್ಲಿ ₹1,300 ಕೋಟಿ ವೆಚ್ಚದಲ್ಲಿ 2050ರವರೆಗೂ ಅವಶ್ಯವಿರುಷ್ಟು ನಿರಂತರ 24X7 ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಕಾರ್ಯಕ್ಕೆ ಬರುವ ವರ್ಷದಲ್ಲೇ ಉದ್ಘಾಟನೆ ನೆರವೇರಿಸಲಿದ್ದೇವೆ ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.</p>.<p>ತಾಲ್ಲೂಕಿನ ಡೋಣೂರು ಗ್ರಾಮದಲ್ಲಿ ಕಟ್ಟಿಮನಿ ಹಿರೇಮಠದ ಶ್ರೀಗುರು ಮರುಳಸಿದ್ದೇಶ್ವರ ಜಾತ್ರೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಹಾಗೂ ಅಭಿನಂದನಾ ಗೌರವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಡೋಣೂರು ಸರ್ವಾಂಗೀಣ ಅಭಿವೃದ್ಧಿ ಆಗಬೇಕೆಂಬುದು ನಮ್ಮೆಲ್ಲರ ಕನಸು. ಶಿಥಿಲಾವಸ್ಥೆಯಲ್ಲಿರುವ ಡೋಣೂರು ಸೇತುವೆ ನಿರ್ಮಿಸಲು ಸಚಿವ ಸಂಪುಟದಲ್ಲಿ ₹ 35 ಕೋಟಿ ಅನುದಾನಕ್ಕೆ ಅನುಮೋದನೆ ಸಿಕ್ಕಿದೆ. ನೇಗಿನಾಳ ಸೇತುವೆ ಸಹ ಕಟ್ಟುತ್ತಿದ್ದೇವೆ. ಪೂಜ್ಯ ಮರುಳಸಿದ್ದೇಶ್ವರ ಜಾತ್ರೆ ನಿಮಿತ್ತ ಸಿದ್ದಲಿಂಗ ಪೂಜ್ಯರು ಸಾಮೂಹಿಕ ವಿವಾಹ, ಸರ್ವಧರ್ಮ ಸಮ್ಮೇಳನದಂತಹ ಅನೇಕ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಊರಿನಲ್ಲಿ ಹೊಸತನ ಸೃಷ್ಟಿಸಿ ಮೆರುಗು ತಂದುಕೊಟ್ಟಿದ್ದಾರೆ.</p>.<p>ಜಾಲಹಳ್ಳಿ ಸಂಸ್ಥಾನಮಠದ ಜಯಶಾಂತಲಿಂಗ ಶಿವಾಚಾರ್ಯರು ಮಾತನಾಡಿದರು.</p>.<p>ಬಂಥನಾಳದ ವೃಷಭಲಿಂಗ ಶಿವಯೋಗಿಗಳು, ಬೆಂಗಳೂರು ಶಿವಗಂಗಾ ಕ್ಷೇತ್ರದ ಮಲಯ ಶಾಂತಮುನಿ ಮಹಾಸ್ವಾಮಿಗಳು, ಶಿರಶ್ಯಾಡದ ಮುರುಘಂದ್ರ ಸ್ವಾಮೀಜಿಗಳು, ಮನಗೂಳಿ ಮತ್ತು ಬೆಂಗಳೂರಿನ ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯರು, ಕವಲಗಿಯ ಅಭಿನವ ಸಿದ್ದರಾಮೇಶ್ವರ ಪೂಜ್ಯರು ಸೇರಿದಂತೆ ಅನೇಕ ಪರಮಪೂಜ್ಯರು ಆಶೀರ್ವಚನ ನೀಡಿದರು.</p>.<p>ಸಮಾರಂಭದಲ್ಲಿ ಜೈನಾಪೂರದ ರೇಣುಕ ಶಿವಾಚಾರ್ಯರು, ಚಿಮ್ಮಲಗಿಯ ಸಿದ್ದ ರೇಣುಕ ಶಿವಾಚಾರ್ಯರು, ತಡವಲಗಾದ ರಾಯಚೋಟೇಶ್ವರ ಶ್ರೀಗಳು, ಇಂಗಳೇಶ್ವರ ಬೃಂಗೀಶ್ವರಲಿಂಗ ಶಿವಾಚಾರ್ಯರು, ಕವಲಗಿಯ ಅಭಿನವ ಸಿದ್ದರಾಮೇಶ್ವರ ಶ್ರೀಗಳು ಸೇರಿದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹಾಗೂ ಅನೇಕ ಪೂಜ್ಯರು, ಪ್ರಮುಖರು ಭಾಗಿಯಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-26-707395533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>