<p><strong>ನಾಲತವಾಡ:</strong> ನಾರಾಯಣಪುರದಿಂದ ಮುದ್ದೇಬಿಹಾಳ ಕಡೆಗೆ ಸಾಗುತ್ತಿದ್ದ ಈಶಾನ್ಯ ಕರ್ನಾಟಕ ಸಾರಿಗೆ ಬಸ್, ಬುಧವಾರ ಸಂಜೆ ಆರೇಶಂಕರ ಕ್ರಾಸ್ ಹತ್ತಿರ ಬೈಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>.<p>ಪಟ್ಟಣ ಪಂಚಾಯ್ತಿಯಲ್ಲಿ ಪೌರ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿದ್ದ ನಾಲತವಾಡ ಪಟ್ಟಣದ 5ನೇ ವಾರ್ಡ್ ನಿವಾಸಿ ಸಂಗಪ್ಪ ಬಸಪ್ಪ ಗೌಡೂರ (28) ಮೃತರು. ಅವರು, ಪರಿಚಯದ ಮಹಿಳೆಯೊಂದಿಗೆ ಬೈಕ್ನಲ್ಲಿ ಆರೇಶಂಕರ ಗ್ರಾಮಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್ನಲ್ಲಿ ದ್ದ ಮಹಿಳೆಗೆ ಲಘುವಾಗಿ ಗಾಯಗಳಾಗಿವೆ.</p>.<p>ಮುದ್ದೇಬಿಹಾಳ ಪಿಎಸ್ಐ ಸಂಜೀವ ತಿಪ್ಪಾರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. </p>.<p>ಸೋಮವಾರ ದಿನವೇ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇದು ಮಾಸುವ ಮುನ್ನವೇ ಬುಧವಾರ ಮತ್ತೇ ಈ ಸರಣಿ ಅಪಘಾತ ನಡೆದಿದೆ. ಮೂರು ದಿನಗಳಲ್ಲಿ ನಾಲತವಾಡ ಪಟ್ಟಣದಲ್ಲಿ ಮೂವರು ರಸ್ತೆ ಅಪಘಾತದಿಂದ ದುರ್ಮರಣಕ್ಕೆ ಈಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಲತವಾಡ:</strong> ನಾರಾಯಣಪುರದಿಂದ ಮುದ್ದೇಬಿಹಾಳ ಕಡೆಗೆ ಸಾಗುತ್ತಿದ್ದ ಈಶಾನ್ಯ ಕರ್ನಾಟಕ ಸಾರಿಗೆ ಬಸ್, ಬುಧವಾರ ಸಂಜೆ ಆರೇಶಂಕರ ಕ್ರಾಸ್ ಹತ್ತಿರ ಬೈಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p>.<p>ಪಟ್ಟಣ ಪಂಚಾಯ್ತಿಯಲ್ಲಿ ಪೌರ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿದ್ದ ನಾಲತವಾಡ ಪಟ್ಟಣದ 5ನೇ ವಾರ್ಡ್ ನಿವಾಸಿ ಸಂಗಪ್ಪ ಬಸಪ್ಪ ಗೌಡೂರ (28) ಮೃತರು. ಅವರು, ಪರಿಚಯದ ಮಹಿಳೆಯೊಂದಿಗೆ ಬೈಕ್ನಲ್ಲಿ ಆರೇಶಂಕರ ಗ್ರಾಮಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್ನಲ್ಲಿ ದ್ದ ಮಹಿಳೆಗೆ ಲಘುವಾಗಿ ಗಾಯಗಳಾಗಿವೆ.</p>.<p>ಮುದ್ದೇಬಿಹಾಳ ಪಿಎಸ್ಐ ಸಂಜೀವ ತಿಪ್ಪಾರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. </p>.<p>ಸೋಮವಾರ ದಿನವೇ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇದು ಮಾಸುವ ಮುನ್ನವೇ ಬುಧವಾರ ಮತ್ತೇ ಈ ಸರಣಿ ಅಪಘಾತ ನಡೆದಿದೆ. ಮೂರು ದಿನಗಳಲ್ಲಿ ನಾಲತವಾಡ ಪಟ್ಟಣದಲ್ಲಿ ಮೂವರು ರಸ್ತೆ ಅಪಘಾತದಿಂದ ದುರ್ಮರಣಕ್ಕೆ ಈಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>