<p><strong>ವಿಜಯಪುರ:</strong> ನಗರದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ವಿಷಯದಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದ ಅಥಣಿ ರಸ್ತೆ ತಡೆದು, ಗುಂಡಿಗಳಲ್ಲಿ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸಿದರು.</p>.<p>ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಅಥಣಿ ರಸ್ತೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿದರು.</p>.<p>‘ಕಾಂಗ್ರೆಸ್ ಸರ್ಕಾರ - ಜೀವಕ್ಕೆ ಸಂಚಕಾರ’ ‘ಗುಂಡಿ ಮುಚ್ಚದೇ ರಾಜ್ಯದ ರಸ್ತೆ ಹಾಳು ಮಾಡಿದ ಸರ್ಕಾರಕ್ಕೆ ಧಿಕ್ಕಾರ’, ‘ಗುಂಡಿಗಳ ಜನಕ ಡಿ.ಕೆ. ಶಿವಕುಮಾರ’ ಎಂಬ ಫಲಕಗಳನ್ನು ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಮಾತನಾಡಿ, ರಾಜ್ಯ ಸರ್ಕಾರ ಒಂದೇ ಒಂದು ಸುಸಜ್ಜಿತ ರಸ್ತೆ ನಿರ್ಮಿಸಿಲ್ಲ, ರಸ್ತೆಗಳ ಅವ್ಯವಸ್ಥೆ ಖಂಡಿಸಿ ಅನೇಕ ಉದ್ಯಮಿಗಳು ರಾಜ್ಯ ಬಿಟ್ಟು ಹೋಗುತ್ತೇವೆ ಎಂದು ಹೇಳಿದರೆ ನಮ್ಮ ಉಪಮುಖ್ಯಮಂತ್ರಿಗಳು ಇದನ್ನು ಬ್ಲಾಕ್ ಮೇಲ್ ಎಂದು ಕರೆದರು, ರಸ್ತೆ ನಿರ್ಮಿಸಿಕೊಡಿ ಎಂದು ಹೇಳುವುದು ಬ್ಲಾಕ್ ಮೇಲ್ ಎಂದಾದರೇ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಕೇವಲ ಗ್ಯಾರಂಟಿ ಎಂದು ಹೇಳಿ ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಅನುದಾನವನ್ನು ಈ ರಾಜ್ಯ ಸರ್ಕಾರ ನೀಡಿಲ್ಲ, ಕರ್ನಾಟಕದ ರಸ್ತೆಗಳು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಸರ್ವನಾಶವಾಗಿವೆ, ರಾಜ್ಯದ ಘನತೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಧಕ್ಕೆ ತರುತ್ತಿದೆ ಎಂದು ಆರೋಪಿಸಿದರು.</p>.<p>ರಾಜ್ಯ ಸರ್ಕಾರ ರಸ್ತೆಗಳ ಅಭಿವೃದ್ಧಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದರು.</p>.<p>ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಫಾಸಾಹೇಬ ಪಟ್ಟಣಶೆಟ್ಟಿ, ಮುಖಂಡರಾದ ಚಂದ್ರಶೇಖರ ಕವಟಗಿ, ಉಮೇಶ್ ಕಾರಜೋಳ, ಗೋಪಾಲ್ ಘಟಕಾಂಬಳೆ, ಚಿದಾನಂದ್ ಛಲವಾದಿ, ಮಳುಗೌಡ ಪಾಟೀಲ, ಮಲ್ಲಿಕಾರ್ಜುನ ಜೋಗುರ, ಎಸ್.ಎ. ಪಾಟೀಲ, ಡಾ.ಸುರೇಶ ಬಿರಾದಾರ, ಉಮೇಶ್ ಕೊಳಕೂರ, ರಾಹುಲ್ ಜಾಧವ, ಬಸವರಾಜ್ ಬೈಚಬಾಳ, ರಾಜೇಶ ತಾವಸೆ, ಭೀಮಾಶಂಕರ ಹದನೂರ, ರಾಹುಲ್ ಜಾಧವ, ಭೀಮಸಿಂಗ್ ರಾಠೋಡ, ಬಾಲರಾಜ್ ರೆಡ್ಡಿ, ರಾಘವೇಂದ್ರ ಕಾಪಸೆ, ಸಚಿನ್ ಬೊಂಬ್ಳೆ, ಶ್ರೀಕಾಂತ್ ಶಿಂಧೆ, ರವಿಕಾಂತ್ ಬಗಲಿ, ರಾಜು ಬಿರಾದಾರ, ಸಂದೀಪ್ ಪಾಟೀಲ, ಪಾಪುಸಿಂಗ್ ರಾಜಪೂತ, ಚಿನ್ನು ಚಿನಗುಂಡಿ, ರಾಮಚಂದ್ರ ಚವ್ಹಾಣ, ಬಸವರಾಜ ಹಳ್ಳಿ, ಆನಂದ ಮುಚ್ಚಂಡಿ, ಅಪ್ಪು ಕುಂಬಾರ, ಪ್ರಮೋದ ಬಡಿಗೇರ, ಸಂತೋಷ ನಿಂಬರಗಿ, ಜಗದೀಶ ಮುಚ್ಚಂಡಿ, ರಾಜೇಂದ್ರ ವಾಲಿ, ವಿನಾಯಕ ದಹಿಂಡೆ, ವಿಜಯ ಜೋಶಿ, ರವಿ ಬಿರಾದಾರ, ಭೀಮು ಸಾರವಾಡ, ಸ್ವಪ್ನಾ ಕಣಮುಚನಾಳ, ಮಲ್ಲಮ್ಮ ಜೋಗೂರ, ಗೀತಾ ಚೌಧರಿ, ಸುಷ್ಮಿತಾ ವಾಡಕರ, ರಾಜೇಶ್ವರಿ ಅವಟಿ, ಸಂಪತ್ ಕೋವಳ್ಳಿ, ಶಿವಾನಂದ ಮಖಣಾಪುರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><blockquote>ವಿಜಯಪುರದಲ್ಲಂತೂ ರಸ್ತೆಗಳು ಹಾಳಾಗಿ ಹೋಗಿವೆ ಗುಂಡಿಗಳನ್ನು ಮಚ್ಚುವ ಕನಿಷ್ಠ ಕಾರ್ಯವನ್ನು ಈ ಕಾಂಗ್ರೆಸ್ ಸರ್ಕಾರ ಮಾಡುತ್ತಿಲ್ಲ ಈ ಎಲ್ಲ ರಸ್ತೆಗಳು ನಿತ್ಯ ಅಪಾಯಕ್ಕೆ ಆಹ್ವಾನ ನೀಡುತ್ತಿವೆ </blockquote><span class="attribution">-ಅರುಣ ಶಹಾಪುರ ವಿಧಾನ ಪರಿಷತ್ ಮಾಜಿ ಸದಸ್ಯ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನಗರದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ವಿಷಯದಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದ ಅಥಣಿ ರಸ್ತೆ ತಡೆದು, ಗುಂಡಿಗಳಲ್ಲಿ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸಿದರು.</p>.<p>ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಅಥಣಿ ರಸ್ತೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿದರು.</p>.<p>‘ಕಾಂಗ್ರೆಸ್ ಸರ್ಕಾರ - ಜೀವಕ್ಕೆ ಸಂಚಕಾರ’ ‘ಗುಂಡಿ ಮುಚ್ಚದೇ ರಾಜ್ಯದ ರಸ್ತೆ ಹಾಳು ಮಾಡಿದ ಸರ್ಕಾರಕ್ಕೆ ಧಿಕ್ಕಾರ’, ‘ಗುಂಡಿಗಳ ಜನಕ ಡಿ.ಕೆ. ಶಿವಕುಮಾರ’ ಎಂಬ ಫಲಕಗಳನ್ನು ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಮಾತನಾಡಿ, ರಾಜ್ಯ ಸರ್ಕಾರ ಒಂದೇ ಒಂದು ಸುಸಜ್ಜಿತ ರಸ್ತೆ ನಿರ್ಮಿಸಿಲ್ಲ, ರಸ್ತೆಗಳ ಅವ್ಯವಸ್ಥೆ ಖಂಡಿಸಿ ಅನೇಕ ಉದ್ಯಮಿಗಳು ರಾಜ್ಯ ಬಿಟ್ಟು ಹೋಗುತ್ತೇವೆ ಎಂದು ಹೇಳಿದರೆ ನಮ್ಮ ಉಪಮುಖ್ಯಮಂತ್ರಿಗಳು ಇದನ್ನು ಬ್ಲಾಕ್ ಮೇಲ್ ಎಂದು ಕರೆದರು, ರಸ್ತೆ ನಿರ್ಮಿಸಿಕೊಡಿ ಎಂದು ಹೇಳುವುದು ಬ್ಲಾಕ್ ಮೇಲ್ ಎಂದಾದರೇ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಕೇವಲ ಗ್ಯಾರಂಟಿ ಎಂದು ಹೇಳಿ ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಅನುದಾನವನ್ನು ಈ ರಾಜ್ಯ ಸರ್ಕಾರ ನೀಡಿಲ್ಲ, ಕರ್ನಾಟಕದ ರಸ್ತೆಗಳು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಸರ್ವನಾಶವಾಗಿವೆ, ರಾಜ್ಯದ ಘನತೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಧಕ್ಕೆ ತರುತ್ತಿದೆ ಎಂದು ಆರೋಪಿಸಿದರು.</p>.<p>ರಾಜ್ಯ ಸರ್ಕಾರ ರಸ್ತೆಗಳ ಅಭಿವೃದ್ಧಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದರು.</p>.<p>ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಫಾಸಾಹೇಬ ಪಟ್ಟಣಶೆಟ್ಟಿ, ಮುಖಂಡರಾದ ಚಂದ್ರಶೇಖರ ಕವಟಗಿ, ಉಮೇಶ್ ಕಾರಜೋಳ, ಗೋಪಾಲ್ ಘಟಕಾಂಬಳೆ, ಚಿದಾನಂದ್ ಛಲವಾದಿ, ಮಳುಗೌಡ ಪಾಟೀಲ, ಮಲ್ಲಿಕಾರ್ಜುನ ಜೋಗುರ, ಎಸ್.ಎ. ಪಾಟೀಲ, ಡಾ.ಸುರೇಶ ಬಿರಾದಾರ, ಉಮೇಶ್ ಕೊಳಕೂರ, ರಾಹುಲ್ ಜಾಧವ, ಬಸವರಾಜ್ ಬೈಚಬಾಳ, ರಾಜೇಶ ತಾವಸೆ, ಭೀಮಾಶಂಕರ ಹದನೂರ, ರಾಹುಲ್ ಜಾಧವ, ಭೀಮಸಿಂಗ್ ರಾಠೋಡ, ಬಾಲರಾಜ್ ರೆಡ್ಡಿ, ರಾಘವೇಂದ್ರ ಕಾಪಸೆ, ಸಚಿನ್ ಬೊಂಬ್ಳೆ, ಶ್ರೀಕಾಂತ್ ಶಿಂಧೆ, ರವಿಕಾಂತ್ ಬಗಲಿ, ರಾಜು ಬಿರಾದಾರ, ಸಂದೀಪ್ ಪಾಟೀಲ, ಪಾಪುಸಿಂಗ್ ರಾಜಪೂತ, ಚಿನ್ನು ಚಿನಗುಂಡಿ, ರಾಮಚಂದ್ರ ಚವ್ಹಾಣ, ಬಸವರಾಜ ಹಳ್ಳಿ, ಆನಂದ ಮುಚ್ಚಂಡಿ, ಅಪ್ಪು ಕುಂಬಾರ, ಪ್ರಮೋದ ಬಡಿಗೇರ, ಸಂತೋಷ ನಿಂಬರಗಿ, ಜಗದೀಶ ಮುಚ್ಚಂಡಿ, ರಾಜೇಂದ್ರ ವಾಲಿ, ವಿನಾಯಕ ದಹಿಂಡೆ, ವಿಜಯ ಜೋಶಿ, ರವಿ ಬಿರಾದಾರ, ಭೀಮು ಸಾರವಾಡ, ಸ್ವಪ್ನಾ ಕಣಮುಚನಾಳ, ಮಲ್ಲಮ್ಮ ಜೋಗೂರ, ಗೀತಾ ಚೌಧರಿ, ಸುಷ್ಮಿತಾ ವಾಡಕರ, ರಾಜೇಶ್ವರಿ ಅವಟಿ, ಸಂಪತ್ ಕೋವಳ್ಳಿ, ಶಿವಾನಂದ ಮಖಣಾಪುರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><blockquote>ವಿಜಯಪುರದಲ್ಲಂತೂ ರಸ್ತೆಗಳು ಹಾಳಾಗಿ ಹೋಗಿವೆ ಗುಂಡಿಗಳನ್ನು ಮಚ್ಚುವ ಕನಿಷ್ಠ ಕಾರ್ಯವನ್ನು ಈ ಕಾಂಗ್ರೆಸ್ ಸರ್ಕಾರ ಮಾಡುತ್ತಿಲ್ಲ ಈ ಎಲ್ಲ ರಸ್ತೆಗಳು ನಿತ್ಯ ಅಪಾಯಕ್ಕೆ ಆಹ್ವಾನ ನೀಡುತ್ತಿವೆ </blockquote><span class="attribution">-ಅರುಣ ಶಹಾಪುರ ವಿಧಾನ ಪರಿಷತ್ ಮಾಜಿ ಸದಸ್ಯ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>