ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ 10 ರಂದು ನಡೆಯಲಿರುವ ಮತದಾನಕ್ಕೆ ಮತಗಟ್ಟೆ ಸಿಬ್ಬಂದಿಯನ್ನು ಕರೆದೊಯ್ಯಲು ಮತ್ತು ಕರೆದುಕೊಂಡು ಬರಲು ಒಟ್ಟು 280 ವಾಹನಗಳನ್ನು ಒಪ್ಪಂದದ ಮೇಲೆ ಒದಗಿಸಲಾಗಿದೆ. ಇದರಿಂದಾಗಿ ವಿಭಾಗದ ಸ್ಥಳೀಯ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯವಾಗಲಿದ್ದು, ಪ್ರಯಾಣಿಕರು ಸಹಕರಿಸುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.