<p><strong>ಸಿಂದಗಿ:</strong> ನಗರದ ಸಾರಂಗಮಠ-ಗಚ್ಚಿನಮಠದ ಪೂಜ್ಯ ಚೆನ್ನವೀರ ಸ್ವಾಮೀಜಿ 35ನೆಯ ಪುಣ್ಯಸ್ಮರಣೋತ್ಸವ ಮೇ 22ರಂದು ಸಾರಂಗಮಠದ ಆವರಣದಲ್ಲಿ ನಡೆಯಲಿದೆ.</p>.<p>ಸ್ಮರಣೋತ್ಸವದ ಅಂಗವಾಗಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಲಿಂಗೈಕ್ಯ ಎನ್. ಚೆನ್ನಯ್ಯಸ್ವಾಮಿ, ಲಿಂಗೈಕ್ಯ ಶಾರದಾದೇವಿ ಜನಕಲ್ಯಾಣ ಫೌಂಡೇಷನ್ ಹಾಗೂ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ.</p>.<p>ಸಂಜೆ 6.30ಕ್ಕೆ ಸಾರಂಗಮಠದ ಆವರಣದಲ್ಲಿನ ಲಿಂಗೈಕ್ಯ ಸಿದ್ಧಲಿಂಗಸ್ವಾಮೀಜಿ ಸಭಾಂಗಣದಲ್ಲಿ ಸ್ಮರಣೋತ್ಸವ ಸಮಾರಂಭ ನಡೆಯಲಿದೆ. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾರಂಗಮಠ-ಗಚ್ಚಿನಮಠದ ಉತ್ತರಾಧಿಕಾರಿ ವಿಶ್ವ ದೇವ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸುವರು. ಮಾಡಬಾಳ ಸಮುದಾಯ ಆರೋಗ್ಯಾಧಿಕಾರಿ ಚಂದ್ರಕಾಂತ ಬಿರಾದಾರ ‘ಕಾಯಕಯೋಗಿ ಚೆನ್ನವೀರ ಸ್ವಾಮೀಜಿ’ ವಿಷಯ ಕುರಿತು ಉಪನ್ಯಾಸ ನೀಡುವರು.</p>.<p>ಸಮಾರಂಭದ ನಂತರ ಮಹಾಪ್ರಸಾದ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-26-879198198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ನಗರದ ಸಾರಂಗಮಠ-ಗಚ್ಚಿನಮಠದ ಪೂಜ್ಯ ಚೆನ್ನವೀರ ಸ್ವಾಮೀಜಿ 35ನೆಯ ಪುಣ್ಯಸ್ಮರಣೋತ್ಸವ ಮೇ 22ರಂದು ಸಾರಂಗಮಠದ ಆವರಣದಲ್ಲಿ ನಡೆಯಲಿದೆ.</p>.<p>ಸ್ಮರಣೋತ್ಸವದ ಅಂಗವಾಗಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ, ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಲಿಂಗೈಕ್ಯ ಎನ್. ಚೆನ್ನಯ್ಯಸ್ವಾಮಿ, ಲಿಂಗೈಕ್ಯ ಶಾರದಾದೇವಿ ಜನಕಲ್ಯಾಣ ಫೌಂಡೇಷನ್ ಹಾಗೂ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ.</p>.<p>ಸಂಜೆ 6.30ಕ್ಕೆ ಸಾರಂಗಮಠದ ಆವರಣದಲ್ಲಿನ ಲಿಂಗೈಕ್ಯ ಸಿದ್ಧಲಿಂಗಸ್ವಾಮೀಜಿ ಸಭಾಂಗಣದಲ್ಲಿ ಸ್ಮರಣೋತ್ಸವ ಸಮಾರಂಭ ನಡೆಯಲಿದೆ. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾರಂಗಮಠ-ಗಚ್ಚಿನಮಠದ ಉತ್ತರಾಧಿಕಾರಿ ವಿಶ್ವ ದೇವ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸುವರು. ಮಾಡಬಾಳ ಸಮುದಾಯ ಆರೋಗ್ಯಾಧಿಕಾರಿ ಚಂದ್ರಕಾಂತ ಬಿರಾದಾರ ‘ಕಾಯಕಯೋಗಿ ಚೆನ್ನವೀರ ಸ್ವಾಮೀಜಿ’ ವಿಷಯ ಕುರಿತು ಉಪನ್ಯಾಸ ನೀಡುವರು.</p>.<p>ಸಮಾರಂಭದ ನಂತರ ಮಹಾಪ್ರಸಾದ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-26-879198198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>