<p><strong>ವಿಜಯಪುರ</strong>: ಹತ್ತಿ ಖರೀದಿ ಕೇಂದ್ರದಲ್ಲಿ ಮೋಸ ಮಾಡಲಾಗುತ್ತಿದೆ, ರೈತರೊಂದಿಗೆ ಅಗೌರವವಾಗಿ ನಡೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಹತ್ತಿ ಸುರಿವಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ರೈತರೊಂದಿಗೆ ಹೋರಾಟ ನಡೆಸಿದರು.</p>.<p>ಯಾವುದೇ ರೈತರಿಗೆ ಅನ್ಯಾಯ ಮಾಡಬಾರದು ಹಾಗೂ ಮರ್ಯಾದೆ ಕೊಟ್ಟು ಮಾತನಾಡಬೇಕು, ರೈತರ ಜೀವನದ ಜೊತೆ ಚಲ್ಲಾಟ ಮಾಡಬಾರದು. ತೂಕದಲ್ಲಿ ಮೋಸ ಮಾಡದೇ ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡಬೇಕು ಎಂದು ರೈತ ಮುಖಂಡರು ಅಗ್ರಹಿಸಿದರು.</p>.<p>ರೈತರ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಅವರು, ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆಯಿಸಿ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದರು.</p>.<p>ರೈತ ಮುಖಂಡರಾದ ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಸಗರ ಸೇರಿದಂತೆ ಹಲವಾರು ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಹತ್ತಿ ಖರೀದಿ ಕೇಂದ್ರದಲ್ಲಿ ಮೋಸ ಮಾಡಲಾಗುತ್ತಿದೆ, ರೈತರೊಂದಿಗೆ ಅಗೌರವವಾಗಿ ನಡೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಹತ್ತಿ ಸುರಿವಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ರೈತರೊಂದಿಗೆ ಹೋರಾಟ ನಡೆಸಿದರು.</p>.<p>ಯಾವುದೇ ರೈತರಿಗೆ ಅನ್ಯಾಯ ಮಾಡಬಾರದು ಹಾಗೂ ಮರ್ಯಾದೆ ಕೊಟ್ಟು ಮಾತನಾಡಬೇಕು, ರೈತರ ಜೀವನದ ಜೊತೆ ಚಲ್ಲಾಟ ಮಾಡಬಾರದು. ತೂಕದಲ್ಲಿ ಮೋಸ ಮಾಡದೇ ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡಬೇಕು ಎಂದು ರೈತ ಮುಖಂಡರು ಅಗ್ರಹಿಸಿದರು.</p>.<p>ರೈತರ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಅವರು, ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆಯಿಸಿ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದರು.</p>.<p>ರೈತ ಮುಖಂಡರಾದ ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಸಗರ ಸೇರಿದಂತೆ ಹಲವಾರು ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>