<p>ಚಡಚಣ: ಪಟ್ಟಣದ ಮಧ್ಯ ಭಾಗದಿಂದ ಹರಿದು ಹೋಗುವ ತಾಲ್ಲೂಕಿನ ಹತ್ತಳ್ಳಿ ಗ್ರಾಮದ ಬೋರಿ ಹಳ್ಳ ಬತ್ತಿದ ಪರಿಣಾಮ ನೂರಾರು ಪಕ್ಷಿಗಳು ಮತ್ತು ಕೆಲ ಕಾಡು ಪ್ರಾಣಿಗಳು ಮೃತಪಟ್ಟಿವೆ.</p>.<p>‘ಹಳ್ಳದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಸರ್ಗ ಧಾಮಗಳಲ್ಲಿ ಕುಡಿಯಲು ಹನಿ ನೀರು ಇಲ್ಲ. ಈ ಭಾಗದಲ್ಲಿ ವಾಸವಿರುವ ನವಿಲುಗಳು, ಬಾತುಕೋಳಿಗಳು ಸೇರಿ ವಿವಿಧ ವಲಸೆ ಪಕ್ಷಿಗಳು ಹಾಗೂ ಕೆಲವು ಕಾಡು ಪ್ರಾಣಿಗಳು ಸತ್ತ ಸ್ಥಿತಿಯಲ್ಲಿ ಪತ್ತೆ ಆಗುತ್ತಿವೆ. ಹಳ್ಳದಲ್ಲಿ ನಿಂತ ನೀರು ಕಲುಷಿತಗೊಂಡಿದ್ದು, ಇದೇ ಸಾವಿಗೆ ಕಾರಣವಾಗಿರಬಹುದು’ ಎಂದು ಹತ್ತಳ್ಳಿ ಗ್ರಾಮಸ್ಥರು ತಿಳಿಸಿದ್ದಾರೆ.</p>.<p>‘ಚಡಚಣ ಪಟ್ಟಣದ ಒಳಚರಂಡಿ ನೀರನ್ನು ಶುದ್ಧಗೊಳಿಸದೇ ನೇರವಾಗಿ ಹಳ್ಳಕ್ಕೆ ಬಿಡಲಾಗುತ್ತಿದೆ. ನೀರಾವರಿ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಳ್ಳದ ನಿರ್ವಹಣೆ, ಶುದ್ಧೀಕರಣ ಮತ್ತು ನೀರಿನ ಸಂರಕ್ಷಣೆ ಕುರಿತು ಯಾವುದೇ ಕ್ರಮ ಕೈಗೊಳ್ಳದಿರುವುದು ಈ ದುರಂತಕ್ಕೆ ಕಾರಣ. ಕೀಟನಾಶಕ ಔಷಧಗಳು ಮತ್ತು ಕೈಗಾರಿಕಾ ಘಟಕಗಳ ಮಾಲಿನ್ಯವೂ ಕಾರಣವಾಗಿರಬಹುದು’ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-26-1556458384</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಡಚಣ: ಪಟ್ಟಣದ ಮಧ್ಯ ಭಾಗದಿಂದ ಹರಿದು ಹೋಗುವ ತಾಲ್ಲೂಕಿನ ಹತ್ತಳ್ಳಿ ಗ್ರಾಮದ ಬೋರಿ ಹಳ್ಳ ಬತ್ತಿದ ಪರಿಣಾಮ ನೂರಾರು ಪಕ್ಷಿಗಳು ಮತ್ತು ಕೆಲ ಕಾಡು ಪ್ರಾಣಿಗಳು ಮೃತಪಟ್ಟಿವೆ.</p>.<p>‘ಹಳ್ಳದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಸರ್ಗ ಧಾಮಗಳಲ್ಲಿ ಕುಡಿಯಲು ಹನಿ ನೀರು ಇಲ್ಲ. ಈ ಭಾಗದಲ್ಲಿ ವಾಸವಿರುವ ನವಿಲುಗಳು, ಬಾತುಕೋಳಿಗಳು ಸೇರಿ ವಿವಿಧ ವಲಸೆ ಪಕ್ಷಿಗಳು ಹಾಗೂ ಕೆಲವು ಕಾಡು ಪ್ರಾಣಿಗಳು ಸತ್ತ ಸ್ಥಿತಿಯಲ್ಲಿ ಪತ್ತೆ ಆಗುತ್ತಿವೆ. ಹಳ್ಳದಲ್ಲಿ ನಿಂತ ನೀರು ಕಲುಷಿತಗೊಂಡಿದ್ದು, ಇದೇ ಸಾವಿಗೆ ಕಾರಣವಾಗಿರಬಹುದು’ ಎಂದು ಹತ್ತಳ್ಳಿ ಗ್ರಾಮಸ್ಥರು ತಿಳಿಸಿದ್ದಾರೆ.</p>.<p>‘ಚಡಚಣ ಪಟ್ಟಣದ ಒಳಚರಂಡಿ ನೀರನ್ನು ಶುದ್ಧಗೊಳಿಸದೇ ನೇರವಾಗಿ ಹಳ್ಳಕ್ಕೆ ಬಿಡಲಾಗುತ್ತಿದೆ. ನೀರಾವರಿ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಳ್ಳದ ನಿರ್ವಹಣೆ, ಶುದ್ಧೀಕರಣ ಮತ್ತು ನೀರಿನ ಸಂರಕ್ಷಣೆ ಕುರಿತು ಯಾವುದೇ ಕ್ರಮ ಕೈಗೊಳ್ಳದಿರುವುದು ಈ ದುರಂತಕ್ಕೆ ಕಾರಣ. ಕೀಟನಾಶಕ ಔಷಧಗಳು ಮತ್ತು ಕೈಗಾರಿಕಾ ಘಟಕಗಳ ಮಾಲಿನ್ಯವೂ ಕಾರಣವಾಗಿರಬಹುದು’ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-26-1556458384</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>