<p><strong>ವಿಜಯಪುರ</strong>: ನಮ್ಮ ಸರ್ಕಾರ ನೀರಾವರಿಯಷ್ಟೇ ವಿದ್ಯುತ್ತಿಗೂ ಪ್ರಾಮುಖ್ಯತೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಿಂದ ನಗರದಲ್ಲಿ ನಿರ್ಮಿಸಲಾದ ವಿಜಯಪುರದ ಕಾರ್ಯ ಮತ್ತು ಪಾಲನೆ ವಿಭಾಗೀಯ ಕಚೇರಿಯ ನೂತನ ಕಟ್ಟಡವನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.</p>.<p>ಟಿಸಿ ದುರಸ್ತಿ ಸಕಾಲದಲ್ಲಿ ಆಗಬೇಕು. ಅಚ್ಚುಕಟ್ಟಾಗಿ ಕಟ್ಟಿರುವ ಈ ಕಟ್ಟಡ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಟ್ಟಡವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಿವಿಲ್ ಆಸ್ಪತ್ರೆಯಲ್ಲಿ ವಿದ್ಯುತ್ ಉಪ ಕೇಂದ್ರವಾಗಬೇಕು. ಜಾಗ ಖರೀದಿಸಿ ಕೇಂದ್ರ ಆರಂಭಿಸಲಾಗುವುದು ಎಂದರು.</p>.<p>ವಿಜಯಪುರದ ವಿಮಾನ ನಿಲ್ದಾಣದ ಹತ್ತಿರದ ಐನಾಪುರದಲ್ಲಿ 110 ಕೆವಿ ಸ್ಟೇಶನ್ ನಿರ್ಮಾಣಕ್ಕಾಗಿ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಐನಾಪುರದಲ್ಲಿ ಈ ವಿದ್ಯುತ್ ಉಪ ಕೇಂದ್ರದಿಂದ ವಿಜಯಪುರ ಏರ್ ಫೋರ್ಟ್, ಮದಭಾವಿ ಹಾಗೂ ಸುತ್ತಲಿನ ಹಳ್ಳಿಗಳಿಗೆ ಅನುಕೂಲವಾಗುತ್ತದೆ ಎಂದರು.</p>.<p>ನಮ್ಮ ಸರ್ಕಾರ ಜಿಲ್ಲೆಯಲ್ಲಿ 110 ಕೆವಿ ಸ್ಟೇಶನ್ ಗಳನ್ನು ನಿರ್ಮಿಸುತ್ತಿದೆ. ಈ ಪೈಕಿ 8 ಕಾಮಗಾರಿಗಳು ಪ್ರಗತಿಯಲ್ಲಿವೆ. 24 ಕಾಮಗಾರಿಗಳು ಅನುಮೋದನೆಗೊಂಡು ವಿವಿಧ ಹಂತದಲ್ಲಿವೆ ಎಂದರು.</p>.<p>2016-2017ರಲ್ಲಿ ದೇವರಹಿಪ್ಪರಗಿಯಲ್ಲಿ 400 ಕೆವಿ ಸ್ಟೇಶನ್ ನಿರ್ಮಾಣಕ್ಕೆ ಈ ಮೊದಲು ಪ್ರಯತ್ನ ಮಾಡಿದ್ದೆವು. ಆದರೆ, ಸರ್ಕಾರಿ ಜಮೀನು ಭೂಸ್ವಾಧೀನ ವೆಚ್ಚ ಬಹಳಷ್ಟಾಗಿದ್ದರಿಂದ ಕಷ್ಟವಾಯಿತು. ಹಾಗಾಗಿ ಸರ್ಕಾರಿ ಜಮೀನು ಹಡಗಲಿಯಲ್ಲಿದ್ದುದನ್ನು ಗಮನಿಸಿ, ಅಲ್ಲಿ ₹ 800 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ ಎಂದರು.</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ನಗರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನೀರಾವರಿ, ಕೆರೆ ತುಂಬುವ, ವಿದ್ಯುತ್ ಸರಬರಾಜಿನ ಉನ್ನತೀಕರಣ, ಸರ್ಕಾರಿ ಕಟ್ಟಡ, ಸಿಟಿ ಅಂಡರ್ ಗ್ರೌಂಡ್ ಕೇಬಲ್ ಕಾರ್ಯಗಳು ನಡೆದಿವೆ ಎಂದರು.</p>.<p>ಇಂಧನ ಇಲಾಖೆ ನೇರವಾಗಿ ಜನರನ್ನು ಒಳಗೊಂಡ ಇಲಾಖೆ. ಹಾಗಾಗಿ ಇಲಾಖೆ ಅಧಿಕಾರಿಗಳು ಜನರಿಗೆ ವೃಥಾ ತೊಂದರೆ ನೀಡದೇ, ಅವರ ಅರ್ಜಿ ಹಾಗೂ ಕೆಲಸ ಕಾರ್ಯಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಹೆಸ್ಕಾಂನ ಅಧೀಕ್ಷಕ ಎಂಜಿನಿಯರ್ ಸಿದ್ದಪ್ಪ ಬಿಂಜಗೇರಿ, 1964ರಲ್ಲಿ ಆಗಿನ ಮೈಸೂರು ರಾಜ್ಯ ಎಲೆಕ್ಟ್ರಿಸಿಟಿ ಮಂಡಳಿಯಿಂದ ನಿರ್ಮಾಣಗೊಂಡ ಈ ಕಟ್ಟಡವು ಸುದೀರ್ಘ 62 ವರ್ಷಗಳ ಬಳಿಕ ಶಿಥಿಲಾವಸ್ಥೆಗೊಂಡಿದ್ದರಿಂದ ಹೆಸ್ಕಾಂನಿಂದ ಹೊಸ ಕಟ್ಟಡವನ್ನು 2024ರಲ್ಲಿ ₹6.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡು, ಲೋಕಾರ್ಪಣೆಗೊಡಿದೆ ಎಂದರು.</p>.<p>ಶಾಸಕ ವಿಠ್ಠಲ ಕಟಕದೊಂಡ, ಪಾಲಿಕೆ ಮೇಯರ್ ಎಂ.ಎಸ್. ಕರಡಿ, ವಿಡಿಎ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಪಂಚ ಗ್ಯಾರಂಟಿ ನಗರ ಘಟಕದ ಅಧ್ಯಕ್ಷ ಶಬ್ಬೀರ ಜಾಗೀರದಾರ, ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ, ಸಿವಿಲ್ ಅಧಿಕ್ಷಕ ಎಂಜಿನಿಯರ್ ತಿಪ್ಪಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-26-1422073220</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಮ್ಮ ಸರ್ಕಾರ ನೀರಾವರಿಯಷ್ಟೇ ವಿದ್ಯುತ್ತಿಗೂ ಪ್ರಾಮುಖ್ಯತೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಿಂದ ನಗರದಲ್ಲಿ ನಿರ್ಮಿಸಲಾದ ವಿಜಯಪುರದ ಕಾರ್ಯ ಮತ್ತು ಪಾಲನೆ ವಿಭಾಗೀಯ ಕಚೇರಿಯ ನೂತನ ಕಟ್ಟಡವನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.</p>.<p>ಟಿಸಿ ದುರಸ್ತಿ ಸಕಾಲದಲ್ಲಿ ಆಗಬೇಕು. ಅಚ್ಚುಕಟ್ಟಾಗಿ ಕಟ್ಟಿರುವ ಈ ಕಟ್ಟಡ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಟ್ಟಡವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಿವಿಲ್ ಆಸ್ಪತ್ರೆಯಲ್ಲಿ ವಿದ್ಯುತ್ ಉಪ ಕೇಂದ್ರವಾಗಬೇಕು. ಜಾಗ ಖರೀದಿಸಿ ಕೇಂದ್ರ ಆರಂಭಿಸಲಾಗುವುದು ಎಂದರು.</p>.<p>ವಿಜಯಪುರದ ವಿಮಾನ ನಿಲ್ದಾಣದ ಹತ್ತಿರದ ಐನಾಪುರದಲ್ಲಿ 110 ಕೆವಿ ಸ್ಟೇಶನ್ ನಿರ್ಮಾಣಕ್ಕಾಗಿ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಐನಾಪುರದಲ್ಲಿ ಈ ವಿದ್ಯುತ್ ಉಪ ಕೇಂದ್ರದಿಂದ ವಿಜಯಪುರ ಏರ್ ಫೋರ್ಟ್, ಮದಭಾವಿ ಹಾಗೂ ಸುತ್ತಲಿನ ಹಳ್ಳಿಗಳಿಗೆ ಅನುಕೂಲವಾಗುತ್ತದೆ ಎಂದರು.</p>.<p>ನಮ್ಮ ಸರ್ಕಾರ ಜಿಲ್ಲೆಯಲ್ಲಿ 110 ಕೆವಿ ಸ್ಟೇಶನ್ ಗಳನ್ನು ನಿರ್ಮಿಸುತ್ತಿದೆ. ಈ ಪೈಕಿ 8 ಕಾಮಗಾರಿಗಳು ಪ್ರಗತಿಯಲ್ಲಿವೆ. 24 ಕಾಮಗಾರಿಗಳು ಅನುಮೋದನೆಗೊಂಡು ವಿವಿಧ ಹಂತದಲ್ಲಿವೆ ಎಂದರು.</p>.<p>2016-2017ರಲ್ಲಿ ದೇವರಹಿಪ್ಪರಗಿಯಲ್ಲಿ 400 ಕೆವಿ ಸ್ಟೇಶನ್ ನಿರ್ಮಾಣಕ್ಕೆ ಈ ಮೊದಲು ಪ್ರಯತ್ನ ಮಾಡಿದ್ದೆವು. ಆದರೆ, ಸರ್ಕಾರಿ ಜಮೀನು ಭೂಸ್ವಾಧೀನ ವೆಚ್ಚ ಬಹಳಷ್ಟಾಗಿದ್ದರಿಂದ ಕಷ್ಟವಾಯಿತು. ಹಾಗಾಗಿ ಸರ್ಕಾರಿ ಜಮೀನು ಹಡಗಲಿಯಲ್ಲಿದ್ದುದನ್ನು ಗಮನಿಸಿ, ಅಲ್ಲಿ ₹ 800 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ ಎಂದರು.</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ನಗರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನೀರಾವರಿ, ಕೆರೆ ತುಂಬುವ, ವಿದ್ಯುತ್ ಸರಬರಾಜಿನ ಉನ್ನತೀಕರಣ, ಸರ್ಕಾರಿ ಕಟ್ಟಡ, ಸಿಟಿ ಅಂಡರ್ ಗ್ರೌಂಡ್ ಕೇಬಲ್ ಕಾರ್ಯಗಳು ನಡೆದಿವೆ ಎಂದರು.</p>.<p>ಇಂಧನ ಇಲಾಖೆ ನೇರವಾಗಿ ಜನರನ್ನು ಒಳಗೊಂಡ ಇಲಾಖೆ. ಹಾಗಾಗಿ ಇಲಾಖೆ ಅಧಿಕಾರಿಗಳು ಜನರಿಗೆ ವೃಥಾ ತೊಂದರೆ ನೀಡದೇ, ಅವರ ಅರ್ಜಿ ಹಾಗೂ ಕೆಲಸ ಕಾರ್ಯಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಹೆಸ್ಕಾಂನ ಅಧೀಕ್ಷಕ ಎಂಜಿನಿಯರ್ ಸಿದ್ದಪ್ಪ ಬಿಂಜಗೇರಿ, 1964ರಲ್ಲಿ ಆಗಿನ ಮೈಸೂರು ರಾಜ್ಯ ಎಲೆಕ್ಟ್ರಿಸಿಟಿ ಮಂಡಳಿಯಿಂದ ನಿರ್ಮಾಣಗೊಂಡ ಈ ಕಟ್ಟಡವು ಸುದೀರ್ಘ 62 ವರ್ಷಗಳ ಬಳಿಕ ಶಿಥಿಲಾವಸ್ಥೆಗೊಂಡಿದ್ದರಿಂದ ಹೆಸ್ಕಾಂನಿಂದ ಹೊಸ ಕಟ್ಟಡವನ್ನು 2024ರಲ್ಲಿ ₹6.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡು, ಲೋಕಾರ್ಪಣೆಗೊಡಿದೆ ಎಂದರು.</p>.<p>ಶಾಸಕ ವಿಠ್ಠಲ ಕಟಕದೊಂಡ, ಪಾಲಿಕೆ ಮೇಯರ್ ಎಂ.ಎಸ್. ಕರಡಿ, ವಿಡಿಎ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಪಂಚ ಗ್ಯಾರಂಟಿ ನಗರ ಘಟಕದ ಅಧ್ಯಕ್ಷ ಶಬ್ಬೀರ ಜಾಗೀರದಾರ, ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ, ಸಿವಿಲ್ ಅಧಿಕ್ಷಕ ಎಂಜಿನಿಯರ್ ತಿಪ್ಪಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-26-1422073220</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>