<p><strong>ತಾಳಿಕೋಟೆ</strong>: ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಅಂಬಲೇಶ್ವರ ಜಾತ್ರಾ ಮಹೋತ್ಸವ ಬುಧವಾರ ನಡೆಯಲಿದ್ದು, ತನ್ನಿಮಿತ್ತ ಮಂಗಳವಾರ ಸಂಜೆ ಪ್ರವಚನ ಹಾಗೂ ಧರ್ಮಸಭೆ ನಡೆಯಿತು.</p>.<p>ಚಿಕ್ಕಲಗಿ ಕ್ರಾಸ್ ತಪೋವನದ ಶಿವಾನಂದಶ್ರೀ ಸಾನ್ನಿಧ್ಯ ವಹಿಸುವರು. ಕೋರವಾರ ಚೌಕಿಮಠದ ಅಭಿನವ ಮುರುಗೇಂದ್ರ ಶ್ರೀ ನೇತೃತ್ವ ವಹಿಸುವರು.</p>.<p>ರಾತ್ರಿಯಿಂದ ಬೆಳಗಿನವರೆಗೆ ಶಿವಭಜನಾ ಕಾರ್ಯಕ್ರಮದಲ್ಲಿ ಗ್ರಾಮದ ಅಂಲೇಶ್ವರ ಭಜನಾ ಮಂಡಳಿ, ಬಸವನ ಬಾಗೇವಾಡಿ ತಾಲ್ಲೂಕಿನ ದೇಗಿನಾಳ ಗ್ರಾಮದ ಮಾರುತೇಶ್ವರ ಭಜನಾ ಮಂಡಳಿ, ಸಂಕನಾಳದ ಬಾಬಾಸಾಹೇಬ ಅಂಬೇಡ್ಕರ್ ಭಜನಾ ಮಂಡಳಿ, ಹುಲ್ಲೂರ ಭಜನಾ ಮಂಡಳಿ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ಭಜನಾ ತಂಡಗಳು ಭಾಗವಹಿಸಿದ್ದವು.</p>.<p>ಸೆ. 18ರಂದು ಬೆಳಿಗ್ಗೆ 6.30ಕ್ಕೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಾದ್ಯ ವೈಭವದೊಂದಿಗೆ ಪಲ್ಲಕ್ಕಿ ಉತ್ಸವ ಜರುಗಲಿದೆ. ಸರ್ಕಾರಿ ಪ್ರೌಢಶಾಲಾ ಮಕ್ಕಳಿಂದ ಕೋಲಾಟ ಪ್ರದರ್ಶನ ನಡೆಯಲಿದೆ.</p>.<p>ಮಧ್ಯಾಹ್ನ 12ಕ್ಕೆ ಮಹಾಪ್ರಸಾದ, ಮಧ್ಯಾಹ್ನ 2ಕ್ಕೆ ಜೋಳದ ಚೀಲ ಎತ್ತುವ ಸ್ಪರ್ಧೆ, ಗುಂಡು ಎತ್ತುವ ಸ್ಪರ್ಧೆ ನಡೆಯಲಿವೆ.</p>.<p>ಸಂಜೆ 5ಕ್ಕೆ ಮಹಾರಥೋತ್ಸವ ನಡೆಯಲಿದೆ ಎಂದು ಜಾತ್ರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ</strong>: ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಅಂಬಲೇಶ್ವರ ಜಾತ್ರಾ ಮಹೋತ್ಸವ ಬುಧವಾರ ನಡೆಯಲಿದ್ದು, ತನ್ನಿಮಿತ್ತ ಮಂಗಳವಾರ ಸಂಜೆ ಪ್ರವಚನ ಹಾಗೂ ಧರ್ಮಸಭೆ ನಡೆಯಿತು.</p>.<p>ಚಿಕ್ಕಲಗಿ ಕ್ರಾಸ್ ತಪೋವನದ ಶಿವಾನಂದಶ್ರೀ ಸಾನ್ನಿಧ್ಯ ವಹಿಸುವರು. ಕೋರವಾರ ಚೌಕಿಮಠದ ಅಭಿನವ ಮುರುಗೇಂದ್ರ ಶ್ರೀ ನೇತೃತ್ವ ವಹಿಸುವರು.</p>.<p>ರಾತ್ರಿಯಿಂದ ಬೆಳಗಿನವರೆಗೆ ಶಿವಭಜನಾ ಕಾರ್ಯಕ್ರಮದಲ್ಲಿ ಗ್ರಾಮದ ಅಂಲೇಶ್ವರ ಭಜನಾ ಮಂಡಳಿ, ಬಸವನ ಬಾಗೇವಾಡಿ ತಾಲ್ಲೂಕಿನ ದೇಗಿನಾಳ ಗ್ರಾಮದ ಮಾರುತೇಶ್ವರ ಭಜನಾ ಮಂಡಳಿ, ಸಂಕನಾಳದ ಬಾಬಾಸಾಹೇಬ ಅಂಬೇಡ್ಕರ್ ಭಜನಾ ಮಂಡಳಿ, ಹುಲ್ಲೂರ ಭಜನಾ ಮಂಡಳಿ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ಭಜನಾ ತಂಡಗಳು ಭಾಗವಹಿಸಿದ್ದವು.</p>.<p>ಸೆ. 18ರಂದು ಬೆಳಿಗ್ಗೆ 6.30ಕ್ಕೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಾದ್ಯ ವೈಭವದೊಂದಿಗೆ ಪಲ್ಲಕ್ಕಿ ಉತ್ಸವ ಜರುಗಲಿದೆ. ಸರ್ಕಾರಿ ಪ್ರೌಢಶಾಲಾ ಮಕ್ಕಳಿಂದ ಕೋಲಾಟ ಪ್ರದರ್ಶನ ನಡೆಯಲಿದೆ.</p>.<p>ಮಧ್ಯಾಹ್ನ 12ಕ್ಕೆ ಮಹಾಪ್ರಸಾದ, ಮಧ್ಯಾಹ್ನ 2ಕ್ಕೆ ಜೋಳದ ಚೀಲ ಎತ್ತುವ ಸ್ಪರ್ಧೆ, ಗುಂಡು ಎತ್ತುವ ಸ್ಪರ್ಧೆ ನಡೆಯಲಿವೆ.</p>.<p>ಸಂಜೆ 5ಕ್ಕೆ ಮಹಾರಥೋತ್ಸವ ನಡೆಯಲಿದೆ ಎಂದು ಜಾತ್ರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>