<p><strong>ವಿಜಯಪುರ:</strong> ಭೀಮಾ ನದಿಯ ಪ್ರವಾಹದಿಂದ ಸಂತ್ರಸ್ತರಾದವರಿಗೆ ಆಲಮೇಲ ತಾಲ್ಲೂಕಿನ ದೇವರನಾವದಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಸಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆದ ಕಾಳಜಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭಾನುವಾರ ಭೇಟಿ ನೀಡಿ, ಪರಿಶೀಲಿಸಿದರು.</p>.<p>ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಪರಿಶೀಲನೆ ನಡೆಸಿದ ಅವರು, ಸಂತ್ರಸ್ಥರೊಂದಿಗೆ ಮಾತನಾಡಿದರು.</p>.<p>‘ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಯಾರೂ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ ನಿಮ್ಮ ಜೊತೆಗಿದ್ದು, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧವಾಗಿದೆ. ಜನ, ಜಾನುವಾರಗಳ ಪ್ರಾಣ ಹಾನಿಯಾಗದಂತೆ ಸಕಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಸಚಿವರು ಹೇಳಿದರು.</p>.<p>ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ‘ಕಾಳಜಿ ಕೇಂದ್ರಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿದ್ದಾರೆ’ ಎಂದು ಸಂತ್ರಸ್ತ ಕುಟುಂಬದರು ಹೇಳಿದರು.</p>.<p>ಕುಮಸಗಿ ಗ್ರಾಮದ ಹತ್ತಿರ ಹರಿಯುವ ಭೀಮಾ ನದಿ ತೀರಕ್ಕೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯ ಕುರಿತು ಅವಲೋಕಿಸಿದರು. ದೇವರ ನಾವದಗಿ ಗ್ರಾಮದ ಶರಣಪ್ಪ ಯರಗಲ್ ಅವರ ಕಬ್ಬಿನ ತೋಟಕ್ಕೆ ಭೇಟಿ ನೀಡಿ, ಬೆಳೆ ಹಾನಿ ವೀಕ್ಷಿಸಿದರು.</p>.<p>ಸೇತುವೆ ದುರಸ್ತಿಗೆ ಕ್ರಮ: ‘ದೇವಣಗಾಂವ ಸೇತುವೆ ದುರಸ್ತಿ ಬಗ್ಗೆ ಅಲ್ಲಿನ ಜನರು ಆಗ್ರಹಿಸಿದ್ದು, ಇದನ್ನು ದುರಸ್ತಿಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ನಿರಾಶ್ರಿತರಿಗೆ ಸೂರು ಕಲ್ಪಿಸಲು ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ಅಗತ್ಯ ಕ್ರಮ ವಹಿಸುತ್ತೇವೆ’ ಎಂದು ಸಚಿವರು ಭರವಸೆ ನೀಡಿದರು.</p>.<p>‘ಪುನರ್ವಸತಿ ಕೇಂದ್ರಕ್ಕೆ ಎಲ್ಲರೂ ಕಡ್ಡಾಯವಾಗಿ ಬರಲು ಒಪ್ಪಿದರೆ ಮಾತ್ರ ಹೊಸ ವ್ಯವಸ್ಥೆ ಮಾಡಲಾಗುವುದು. ತಾರಾಪುರ ಮತ್ತು ತಾವರಖೇಡ ಗ್ರಾಮಗಳಲ್ಲಿನ ಪುನರ್ವಸತಿ ಕೇಂದ್ರಗಳಿಗೆ ಅರ್ಧಕ್ಕೂ ಹೆಚ್ಚು ಜನರು ಹೋಗಿಯೇ ಇಲ್ಲ. ಹೊಸದಾಗಿ ಮಾಡುವ ಪುನರ್ವಸತಿ ಕೇಂದ್ರದಲ್ಲಿ ಎಲ್ಲರೂ ಬರಬೇಕು’ ಎಂದಾಗ ಸಂತ್ರಸ್ತರು ಒಪ್ಪಿಕೊಂಡರು.</p>.<p>ಶಾಸಕ ಅಶೋಕ ಮನಗೂಳಿ, ಜಿಲ್ಲಾಧಿಕಾರಿ ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇದ್ದರು. </p>.<p><strong>ದೇವಣಗಾಂವ ಸೇತುವೆ ದುರಸ್ತಿಗೆ ಕ್ರಮ ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸೂಚನೆ ಪುನರ್ವಸತಿ ಕೇಂದ್ರಕ್ಕೆ ಬರಲು ಸಂತ್ರಸ್ತರು ಒಪ್ಪಿಗೆ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಭೀಮಾ ನದಿಯ ಪ್ರವಾಹದಿಂದ ಸಂತ್ರಸ್ತರಾದವರಿಗೆ ಆಲಮೇಲ ತಾಲ್ಲೂಕಿನ ದೇವರನಾವದಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಸಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆದ ಕಾಳಜಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭಾನುವಾರ ಭೇಟಿ ನೀಡಿ, ಪರಿಶೀಲಿಸಿದರು.</p>.<p>ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಪರಿಶೀಲನೆ ನಡೆಸಿದ ಅವರು, ಸಂತ್ರಸ್ಥರೊಂದಿಗೆ ಮಾತನಾಡಿದರು.</p>.<p>‘ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಯಾರೂ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ ನಿಮ್ಮ ಜೊತೆಗಿದ್ದು, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧವಾಗಿದೆ. ಜನ, ಜಾನುವಾರಗಳ ಪ್ರಾಣ ಹಾನಿಯಾಗದಂತೆ ಸಕಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಸಚಿವರು ಹೇಳಿದರು.</p>.<p>ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ‘ಕಾಳಜಿ ಕೇಂದ್ರಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿದ್ದಾರೆ’ ಎಂದು ಸಂತ್ರಸ್ತ ಕುಟುಂಬದರು ಹೇಳಿದರು.</p>.<p>ಕುಮಸಗಿ ಗ್ರಾಮದ ಹತ್ತಿರ ಹರಿಯುವ ಭೀಮಾ ನದಿ ತೀರಕ್ಕೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯ ಕುರಿತು ಅವಲೋಕಿಸಿದರು. ದೇವರ ನಾವದಗಿ ಗ್ರಾಮದ ಶರಣಪ್ಪ ಯರಗಲ್ ಅವರ ಕಬ್ಬಿನ ತೋಟಕ್ಕೆ ಭೇಟಿ ನೀಡಿ, ಬೆಳೆ ಹಾನಿ ವೀಕ್ಷಿಸಿದರು.</p>.<p>ಸೇತುವೆ ದುರಸ್ತಿಗೆ ಕ್ರಮ: ‘ದೇವಣಗಾಂವ ಸೇತುವೆ ದುರಸ್ತಿ ಬಗ್ಗೆ ಅಲ್ಲಿನ ಜನರು ಆಗ್ರಹಿಸಿದ್ದು, ಇದನ್ನು ದುರಸ್ತಿಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ನಿರಾಶ್ರಿತರಿಗೆ ಸೂರು ಕಲ್ಪಿಸಲು ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ಅಗತ್ಯ ಕ್ರಮ ವಹಿಸುತ್ತೇವೆ’ ಎಂದು ಸಚಿವರು ಭರವಸೆ ನೀಡಿದರು.</p>.<p>‘ಪುನರ್ವಸತಿ ಕೇಂದ್ರಕ್ಕೆ ಎಲ್ಲರೂ ಕಡ್ಡಾಯವಾಗಿ ಬರಲು ಒಪ್ಪಿದರೆ ಮಾತ್ರ ಹೊಸ ವ್ಯವಸ್ಥೆ ಮಾಡಲಾಗುವುದು. ತಾರಾಪುರ ಮತ್ತು ತಾವರಖೇಡ ಗ್ರಾಮಗಳಲ್ಲಿನ ಪುನರ್ವಸತಿ ಕೇಂದ್ರಗಳಿಗೆ ಅರ್ಧಕ್ಕೂ ಹೆಚ್ಚು ಜನರು ಹೋಗಿಯೇ ಇಲ್ಲ. ಹೊಸದಾಗಿ ಮಾಡುವ ಪುನರ್ವಸತಿ ಕೇಂದ್ರದಲ್ಲಿ ಎಲ್ಲರೂ ಬರಬೇಕು’ ಎಂದಾಗ ಸಂತ್ರಸ್ತರು ಒಪ್ಪಿಕೊಂಡರು.</p>.<p>ಶಾಸಕ ಅಶೋಕ ಮನಗೂಳಿ, ಜಿಲ್ಲಾಧಿಕಾರಿ ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇದ್ದರು. </p>.<p><strong>ದೇವಣಗಾಂವ ಸೇತುವೆ ದುರಸ್ತಿಗೆ ಕ್ರಮ ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸೂಚನೆ ಪುನರ್ವಸತಿ ಕೇಂದ್ರಕ್ಕೆ ಬರಲು ಸಂತ್ರಸ್ತರು ಒಪ್ಪಿಗೆ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>