<p><strong>ವಿಜಯಪುರ</strong>: ರಿಯಲ್ ಎಸ್ಟೇಟ್ ಉದ್ಯಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಲಿಸುತ್ತಿದ್ದ ಜೀಪಿಗೆ ಟಿಪ್ಪರ್ ಡಿಕ್ಕಿ ಹೊಡೆಸಿ, ಬಳಿಕ ಗುಂಡು ಹೊಡೆದು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರ ಹೊರ ವಲಯದ ಅಲಿಯಾಬಾದ್ನಲ್ಲಿ ಮಂಗಳವಾರ ನಡೆದಿದೆ.</p><p>ಅಲಿಯಬಾದ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರೆ (48) ದುಷ್ಕರ್ಮಿಗಳಿಂದ ಹತ್ಯೆಯಾದವರು ಎಂದು ಪೊಲೀಸರು ಗುರುತಿಸಿದ್ದಾರೆ. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p><p>ಘಟನೆ ವಿವರ:</p><p>ರಾಜು ಖರೆ ಅವರು ತಮ್ಮ ಥಾರ್ ಜೀಪಿನಲ್ಲಿ ತೆರಳುತ್ತಿರುವಾಗ ದುಷ್ಕರ್ಮಿಗಳು ಟಿಪ್ಪರ್ ಮೂಲಕ ಮುಖಾಮುಖಿ ಡಿಕ್ಕಿ ಹೊಡೆಸಿದ್ದಾರೆ. ಬಳಿಕ ಕಲ್ಲಿನಿಂದ ಜಜ್ಜಿ ಜೀಪಿನ ಡೋರ್ ಒಡೆದು ಆ ನಂತರ ನಾಲ್ಕೈದು ಬಾರಿ ಗುಂಡು ಹಾರಿಸಿ ಕೊಲೆಗೈದಿದ್ದಾರೆ ಎಂದು ಅವರು ಹೇಳಿದರು.</p><p>ರಾಜು ಖರೆ ರಿಯಲ್ ಎಸ್ಟೇಟ್ ದಂದೆ ಮಾಡುತ್ತಿದ್ದರು. ಜೊತೆಗೆ ದ್ರಾಕ್ಷಿ ಕೃಷಿಕರಾಗಿದ್ದರು. ಕೌಟುಂಬಿಕ ಆಸ್ತಿ ವಿವಾದ ಇತ್ತು ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದರ ಕುರಿತು ತನಿಖೆಯಿಂದ ತಿಳಿಯಬೇಕಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದರು.</p><p>ಕೊಲೆಯಾದ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಮತ್ತು ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ರಿಯಲ್ ಎಸ್ಟೇಟ್ ಉದ್ಯಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಲಿಸುತ್ತಿದ್ದ ಜೀಪಿಗೆ ಟಿಪ್ಪರ್ ಡಿಕ್ಕಿ ಹೊಡೆಸಿ, ಬಳಿಕ ಗುಂಡು ಹೊಡೆದು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರ ಹೊರ ವಲಯದ ಅಲಿಯಾಬಾದ್ನಲ್ಲಿ ಮಂಗಳವಾರ ನಡೆದಿದೆ.</p><p>ಅಲಿಯಬಾದ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರೆ (48) ದುಷ್ಕರ್ಮಿಗಳಿಂದ ಹತ್ಯೆಯಾದವರು ಎಂದು ಪೊಲೀಸರು ಗುರುತಿಸಿದ್ದಾರೆ. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p><p>ಘಟನೆ ವಿವರ:</p><p>ರಾಜು ಖರೆ ಅವರು ತಮ್ಮ ಥಾರ್ ಜೀಪಿನಲ್ಲಿ ತೆರಳುತ್ತಿರುವಾಗ ದುಷ್ಕರ್ಮಿಗಳು ಟಿಪ್ಪರ್ ಮೂಲಕ ಮುಖಾಮುಖಿ ಡಿಕ್ಕಿ ಹೊಡೆಸಿದ್ದಾರೆ. ಬಳಿಕ ಕಲ್ಲಿನಿಂದ ಜಜ್ಜಿ ಜೀಪಿನ ಡೋರ್ ಒಡೆದು ಆ ನಂತರ ನಾಲ್ಕೈದು ಬಾರಿ ಗುಂಡು ಹಾರಿಸಿ ಕೊಲೆಗೈದಿದ್ದಾರೆ ಎಂದು ಅವರು ಹೇಳಿದರು.</p><p>ರಾಜು ಖರೆ ರಿಯಲ್ ಎಸ್ಟೇಟ್ ದಂದೆ ಮಾಡುತ್ತಿದ್ದರು. ಜೊತೆಗೆ ದ್ರಾಕ್ಷಿ ಕೃಷಿಕರಾಗಿದ್ದರು. ಕೌಟುಂಬಿಕ ಆಸ್ತಿ ವಿವಾದ ಇತ್ತು ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದರ ಕುರಿತು ತನಿಖೆಯಿಂದ ತಿಳಿಯಬೇಕಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದರು.</p><p>ಕೊಲೆಯಾದ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಮತ್ತು ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>