<p><strong>ವಿಜಯಪುರ:</strong> ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಗಳ ಪಟ್ಟಿಯನ್ನು ತಯಾರಿಸಿದ್ದು, ಅದರೊಂದಿಗೆ ಗಾಂಧಿ ಭವನವನ್ನು ಸೇರಿಸಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರು ಗಾಂಧಿ ಭವನ ವೀಕ್ಷಣೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು. </p>.<p>ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ಸಭೆ ಮಾತನಾಡಿದ ಅವರು, ನಗರದ ಜಿಲ್ಲಾ ಪಂಚಾಯಿತಿ ರಸ್ತೆಯಲ್ಲಿರುವ ಗಾಂಧಿ ಭವನಕ್ಕೆ ಅಗತ್ಯ ಇರುವ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗಾಂಧಿ ಭವನವು ಗಾಂಧೀಜಿಯವರ ತತ್ವಗಳ ಪ್ರಚಾರ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ವಹಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗಾಂಧೀಜಿಯವರ ಜೀವನ ಆಧಾರಿತ ಪುಸ್ತಕಗಳನ್ನು ಪಟ್ಟಿ ಮಾಡಿ, ಖರೀದಿಸಿ ಗಾಂಧಿ ಭವನದ ಗ್ರಂಥಾಲಯದಲ್ಲಿರುವಂತೆ ಕ್ರಮ ವಹಿಸಬೇಕು ಈ ಕುರಿತು ವಾರ್ತಾಧಿಕಾರಿಗಳು ಹಾಗೂ ನೇತಾಜಿ ಗಾಂಧಿ ಅವರು ಸಮನ್ವಯ ಸಾಧಿಸಿ ಒಂದು ವಾರದೊಳಗೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.</p>.<p>ಮಹಾತ್ಮ ಗಾಂಧಿ ಅವರ ಜೀವನ ಆಧಾರಿತ ಕಿರುಚಿತ್ರಗಳನ್ನು ಪಡೆದು ಭವನಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಕಿರುಚಿತ್ರ ಪ್ರದರ್ಶಿಸುವ ಮೂಲಕ ಮಕ್ಕಳಲ್ಲಿ ಗಾಂಧೀಜಿಯವರ ಕುರಿತು ಅರಿವು ಮೂಡಿದಂತಾಗುತ್ತದೆ ಎಂದು ಸಭೆಗೆ ತಿಳಿಸಿದರು.</p>.<p>ಗಾಂಧಿ ಭವನದಲ್ಲಿ ಸದಭಿರುಚಿ ಬಿಂಬಿಸುವಂತಹ ಸಂಘ ಸಂಸ್ಥೆಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮುಖ್ಯಸ್ಥರಿಂದ ಅನುಮತಿ ಪಡೆದು ಅವರ ಇಲಾಖೆಯ ಪತ್ರಗಳ ಮೂಲಕ ಕಾರ್ಯಕ್ರಮ ಆಯೋಜಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.</p>.<p>ಗಾಂಧೀಜಿಯವರ ವಿಚಾರಾಧಾರೆಗಳು ಅರಿತುಕೊಳ್ಳಲು ಶಿಕ್ಷಣ ಇಲಾಖೆಯು ಸಮನ್ವಯ ಸಾಧಿಸಿ ಅಗಸ್ತ್ಯ ಪೌಂಡೇಷನ್ದೊಂದಿಗೆ ಸಹಯೋಗದೊಂದಿಗೆ ಮಕ್ಕಳಿಗೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.</p>.<p>ಭವನದ ಸುರಕ್ಷತೆ ದೃಷ್ಟಿಯಿಂದ ಸುತ್ತಲೂ ಎತ್ತರದ ಗೋಡೆಯನ್ನು ನಿರ್ಮಿಸುವುದರೊಂದಿಗೆ ತಂತಿ ಬೇಲಿಯನ್ನು ಅಳವಡಿವಂತೆ ಕ್ರಮ ವಹಿಸಬೇಕು ಈ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಭವನದಲ್ಲಿ ಗಾಂಧೀಜಿಯವರ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಗುಣಮಟ್ಟವುಳ್ಳ ಪ್ರದರ್ಶಕ ಯಂತ್ರ (ಪ್ರೊಜೆಕ್ಟರ್) ಹಾಗೂ ಪೂರಕವಾಗಿ ಪರದೆ ಅಳವಡಿಸಲು ಕ್ರಮ ವಹಿಸುವಂತೆ ಅದರೊಂದಿಗೆ ಧ್ವನಿವರ್ಧಕ ವ್ಯವಸ್ಥೆ ಕೂಡ ಪರಿಶೀಲಿಸಿ ದುರಸ್ತಿಗೊಳಿಸುವಂತೆ ಪಂಚಾಯತ್ ರಾಜ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಭವನದಲ್ಲಿರುವ ಶೌಚಾಲಯ ದುರಸ್ತಿ ಜೊತೆಗೆ ಇನ್ನೂ ಹೆಚ್ಚಿನ ಶೌಚಾಲಯ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕರಿಗಳಿಗೆ ಹೇಳಿದರು.</p>.<p>ಭವನದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಒಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದು, ಒಬ್ಬ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಕೋರಲಾಯಿತು.</p>.<p>ಭವನದ ಮುಂದೆ ಕೈ ಪಂಪು ಇದ್ದು, ಅದಕ್ಕೆ ಮೋಟಾರು ಅಳವಡಿಸಿ ಭವನಕ್ಕೆ ಉಪಯೋಗಿಸಿಕೊಳ್ಳಬಹುದಾಗಿದೆ ಅದರೊಂದಿಗೆ ನೀರಿನ ಟ್ಯಾಂಕನ್ನು ಅಳವಡಿಸಿದಲ್ಲಿ ಈ ಭವನಕ್ಕೆ ನೀರಿನ ಕೊರತೆಯನ್ನು ನೀಗಿಸಬಹುದಾಗಿದೆ. ಈ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಿದರು.</p>.<p>ಭವನಕ್ಕೆ ಸಿ.ಸಿ ಕ್ಯಾಮೆರಾ ಅಳವಡಿಸುವ ಕ್ರಮಕ್ಕಾಗಿ ಸೂಚನೆ ನೀಡಲಾಯಿತು. </p>.<p>ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ಸಿ.ಎಸ್ ಪೊಲೀಸ್ ಪಾಟೀಲ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಭೂಮಾಪನ ಇಲಾಖೆಯ ಉಪ ನಿರ್ದೇಶಕ ಎಂ.ಎನ್ ಮುಳಗುಂದ, ವಾರ್ತಾಧಿಕಾರಿ ಅಮರೇಶ ದೊಡಮನಿ, ಎನ್.ಟಿ.ಪಿ.ಸಿ ಡಿಜಿಎಂ ಬದ್ರುದ್ದಿನ್ ಅನ್ಸಾರಿ ಹಾಗೂ ಎನ್.ಟಿ.ಪಿ.ಸಿ ಡಿಜಿಎಂ ಅಜಯ ಕುಮಾರ, ಪಾಲಿಕೆಯ ಅಧೀಕ್ಷಕ ಎಂಜಿನಿಯರ್ ತಿಮ್ಮಪ್ಪ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿ ವಿಜಯಕುಮಾರ ಹತ್ತಿ, ಕೆಆರ್ಈಡಿಎಲ್ನ ಸಹಾಯಕ ಎಂಜಿನಿಯರ್ ಸಾಳುಂಕೆ, ಜಲಮಂಡಳಿ ಎಇಇ ಕೋರೆಪ್ಪ ಹಾಗೂ ಮಹೇಶ ಹೊನ್ನಕಟ್ಟಿ, ಗೋಪಾಲ ನಾಯಕ, ಫಿರೋಜ್ ರೋಜಿನದಾರ, ಪೀಟರ್ ಅಲೆಕ್ಸಾಂಡರ್, ಸುರೇಶ ಘೊಣಸಗಿ, ಬಿ.ಬಿ ಪಾಟೀಲ, ಬಾಪುಗೌಡ ಪಾಟೀಲ ಉಪಸ್ಥಿತರಿದ್ದರು.</p>.<p><strong>‘ಗಾಂಧಿ ಭವನ’ಕ್ಕೆ ಸೌಕರ್ಯ ಒದಗಿಸಿ ಗಾಂಧಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ವ್ಯವಸ್ಥೆ ಭವನಕ್ಕೆ ಸಿ.ಸಿ ಕ್ಯಾಮೆರಾ ಅಳವಡಿಕೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಗಳ ಪಟ್ಟಿಯನ್ನು ತಯಾರಿಸಿದ್ದು, ಅದರೊಂದಿಗೆ ಗಾಂಧಿ ಭವನವನ್ನು ಸೇರಿಸಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರು ಗಾಂಧಿ ಭವನ ವೀಕ್ಷಣೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು. </p>.<p>ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ಸಭೆ ಮಾತನಾಡಿದ ಅವರು, ನಗರದ ಜಿಲ್ಲಾ ಪಂಚಾಯಿತಿ ರಸ್ತೆಯಲ್ಲಿರುವ ಗಾಂಧಿ ಭವನಕ್ಕೆ ಅಗತ್ಯ ಇರುವ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗಾಂಧಿ ಭವನವು ಗಾಂಧೀಜಿಯವರ ತತ್ವಗಳ ಪ್ರಚಾರ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ವಹಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗಾಂಧೀಜಿಯವರ ಜೀವನ ಆಧಾರಿತ ಪುಸ್ತಕಗಳನ್ನು ಪಟ್ಟಿ ಮಾಡಿ, ಖರೀದಿಸಿ ಗಾಂಧಿ ಭವನದ ಗ್ರಂಥಾಲಯದಲ್ಲಿರುವಂತೆ ಕ್ರಮ ವಹಿಸಬೇಕು ಈ ಕುರಿತು ವಾರ್ತಾಧಿಕಾರಿಗಳು ಹಾಗೂ ನೇತಾಜಿ ಗಾಂಧಿ ಅವರು ಸಮನ್ವಯ ಸಾಧಿಸಿ ಒಂದು ವಾರದೊಳಗೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.</p>.<p>ಮಹಾತ್ಮ ಗಾಂಧಿ ಅವರ ಜೀವನ ಆಧಾರಿತ ಕಿರುಚಿತ್ರಗಳನ್ನು ಪಡೆದು ಭವನಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಕಿರುಚಿತ್ರ ಪ್ರದರ್ಶಿಸುವ ಮೂಲಕ ಮಕ್ಕಳಲ್ಲಿ ಗಾಂಧೀಜಿಯವರ ಕುರಿತು ಅರಿವು ಮೂಡಿದಂತಾಗುತ್ತದೆ ಎಂದು ಸಭೆಗೆ ತಿಳಿಸಿದರು.</p>.<p>ಗಾಂಧಿ ಭವನದಲ್ಲಿ ಸದಭಿರುಚಿ ಬಿಂಬಿಸುವಂತಹ ಸಂಘ ಸಂಸ್ಥೆಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮುಖ್ಯಸ್ಥರಿಂದ ಅನುಮತಿ ಪಡೆದು ಅವರ ಇಲಾಖೆಯ ಪತ್ರಗಳ ಮೂಲಕ ಕಾರ್ಯಕ್ರಮ ಆಯೋಜಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.</p>.<p>ಗಾಂಧೀಜಿಯವರ ವಿಚಾರಾಧಾರೆಗಳು ಅರಿತುಕೊಳ್ಳಲು ಶಿಕ್ಷಣ ಇಲಾಖೆಯು ಸಮನ್ವಯ ಸಾಧಿಸಿ ಅಗಸ್ತ್ಯ ಪೌಂಡೇಷನ್ದೊಂದಿಗೆ ಸಹಯೋಗದೊಂದಿಗೆ ಮಕ್ಕಳಿಗೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.</p>.<p>ಭವನದ ಸುರಕ್ಷತೆ ದೃಷ್ಟಿಯಿಂದ ಸುತ್ತಲೂ ಎತ್ತರದ ಗೋಡೆಯನ್ನು ನಿರ್ಮಿಸುವುದರೊಂದಿಗೆ ತಂತಿ ಬೇಲಿಯನ್ನು ಅಳವಡಿವಂತೆ ಕ್ರಮ ವಹಿಸಬೇಕು ಈ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಭವನದಲ್ಲಿ ಗಾಂಧೀಜಿಯವರ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಗುಣಮಟ್ಟವುಳ್ಳ ಪ್ರದರ್ಶಕ ಯಂತ್ರ (ಪ್ರೊಜೆಕ್ಟರ್) ಹಾಗೂ ಪೂರಕವಾಗಿ ಪರದೆ ಅಳವಡಿಸಲು ಕ್ರಮ ವಹಿಸುವಂತೆ ಅದರೊಂದಿಗೆ ಧ್ವನಿವರ್ಧಕ ವ್ಯವಸ್ಥೆ ಕೂಡ ಪರಿಶೀಲಿಸಿ ದುರಸ್ತಿಗೊಳಿಸುವಂತೆ ಪಂಚಾಯತ್ ರಾಜ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಭವನದಲ್ಲಿರುವ ಶೌಚಾಲಯ ದುರಸ್ತಿ ಜೊತೆಗೆ ಇನ್ನೂ ಹೆಚ್ಚಿನ ಶೌಚಾಲಯ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕರಿಗಳಿಗೆ ಹೇಳಿದರು.</p>.<p>ಭವನದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಒಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದು, ಒಬ್ಬ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಕೋರಲಾಯಿತು.</p>.<p>ಭವನದ ಮುಂದೆ ಕೈ ಪಂಪು ಇದ್ದು, ಅದಕ್ಕೆ ಮೋಟಾರು ಅಳವಡಿಸಿ ಭವನಕ್ಕೆ ಉಪಯೋಗಿಸಿಕೊಳ್ಳಬಹುದಾಗಿದೆ ಅದರೊಂದಿಗೆ ನೀರಿನ ಟ್ಯಾಂಕನ್ನು ಅಳವಡಿಸಿದಲ್ಲಿ ಈ ಭವನಕ್ಕೆ ನೀರಿನ ಕೊರತೆಯನ್ನು ನೀಗಿಸಬಹುದಾಗಿದೆ. ಈ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಿದರು.</p>.<p>ಭವನಕ್ಕೆ ಸಿ.ಸಿ ಕ್ಯಾಮೆರಾ ಅಳವಡಿಸುವ ಕ್ರಮಕ್ಕಾಗಿ ಸೂಚನೆ ನೀಡಲಾಯಿತು. </p>.<p>ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ಸಿ.ಎಸ್ ಪೊಲೀಸ್ ಪಾಟೀಲ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಭೂಮಾಪನ ಇಲಾಖೆಯ ಉಪ ನಿರ್ದೇಶಕ ಎಂ.ಎನ್ ಮುಳಗುಂದ, ವಾರ್ತಾಧಿಕಾರಿ ಅಮರೇಶ ದೊಡಮನಿ, ಎನ್.ಟಿ.ಪಿ.ಸಿ ಡಿಜಿಎಂ ಬದ್ರುದ್ದಿನ್ ಅನ್ಸಾರಿ ಹಾಗೂ ಎನ್.ಟಿ.ಪಿ.ಸಿ ಡಿಜಿಎಂ ಅಜಯ ಕುಮಾರ, ಪಾಲಿಕೆಯ ಅಧೀಕ್ಷಕ ಎಂಜಿನಿಯರ್ ತಿಮ್ಮಪ್ಪ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿ ವಿಜಯಕುಮಾರ ಹತ್ತಿ, ಕೆಆರ್ಈಡಿಎಲ್ನ ಸಹಾಯಕ ಎಂಜಿನಿಯರ್ ಸಾಳುಂಕೆ, ಜಲಮಂಡಳಿ ಎಇಇ ಕೋರೆಪ್ಪ ಹಾಗೂ ಮಹೇಶ ಹೊನ್ನಕಟ್ಟಿ, ಗೋಪಾಲ ನಾಯಕ, ಫಿರೋಜ್ ರೋಜಿನದಾರ, ಪೀಟರ್ ಅಲೆಕ್ಸಾಂಡರ್, ಸುರೇಶ ಘೊಣಸಗಿ, ಬಿ.ಬಿ ಪಾಟೀಲ, ಬಾಪುಗೌಡ ಪಾಟೀಲ ಉಪಸ್ಥಿತರಿದ್ದರು.</p>.<p><strong>‘ಗಾಂಧಿ ಭವನ’ಕ್ಕೆ ಸೌಕರ್ಯ ಒದಗಿಸಿ ಗಾಂಧಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ವ್ಯವಸ್ಥೆ ಭವನಕ್ಕೆ ಸಿ.ಸಿ ಕ್ಯಾಮೆರಾ ಅಳವಡಿಕೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>