<p><strong>ವಿಜಯಪುರ</strong>: ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸೋಮವಾರ 47 ದಿನ ಪೂರೈಸಿತು.</p>.<p>ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಜೈ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ದಾಶ್ಯಾಳ, ‘ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುತ್ತದೆ. ಸರ್ಕಾರ ಎಲ್ಲಾ ಕ್ಷೇತ್ರದಲ್ಲಿಯೂ ಕೂಡ ಖಾಸಗೀಕರಣ ಮಾಡಲು ಹೊರಟಿರುವುದು ಖಂಡನೀಯ’ ಎಂದರು.</p>.<p>‘ಒಂದು ವೇಳೆ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ಬೆಳೆಸಬೇಕಾಗುತ್ತದೆ’ ಎಂದರು.</p>.<p>ಜೈ ಕರ್ನಾಟಕ ಸಂಘಟನೆಯ ಕಾಸಪ್ಪ ಈಳಗೇರ, ಲಕ್ಷ್ಮಿಕಾಂತ ಗೊಬ್ಬೂರ, ಗಿರೀಶ್ ಇಟ್ಟಂಗಿ, ವೆಂಕಟೇಶ ಕಂಬಾರ, ಸೋಮಲಿಂಗ ಕಂಬಾರ, ಶಂಕರ ಈಳಗೇರ, ಬಸವರಾಜ ದಾಶ್ಯಾಳ, ಅಶೋಕ ರಾಥೋಡ, ಅಮೀರ ಸೋಯಲ್ ಪಟೇಲ್, ರಾಜಶ್ರೀ ತೆಗ್ಗಿ ಹಾಗೂ ಹೋರಾಟ ಸಮಿತಿಯ ಎಲ್ಲಾ ಪದಾಧಿಕಾರಿಗಳು ಇದ್ದರು.</p>.<div><blockquote>ವಿಜಯಪುರ ಅತಿ ಹಿಂದುಳಿದ ಜಿಲ್ಲೆಯಾಗಿದ್ದು ಸರ್ಕಾರಿ ವೈದ್ಯಕೀಯ ಕಾಲೇಜು ಅವಶ್ಯಕತೆ ಇದ. ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಜಿಲ್ಲಾ ಆಸ್ಪತ್ರೆಯನ್ನು ಬಿಟ್ಟುಕೊಡಬಾರದು.</blockquote><span class="attribution">-ಕವಿತ ಹಿರೇಮಠ, ಜೈ ಕರ್ನಾಟಕ ಸಂಘದ ಮಹಿಳಾ ಮುಖಂಡರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸೋಮವಾರ 47 ದಿನ ಪೂರೈಸಿತು.</p>.<p>ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಜೈ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ದಾಶ್ಯಾಳ, ‘ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುತ್ತದೆ. ಸರ್ಕಾರ ಎಲ್ಲಾ ಕ್ಷೇತ್ರದಲ್ಲಿಯೂ ಕೂಡ ಖಾಸಗೀಕರಣ ಮಾಡಲು ಹೊರಟಿರುವುದು ಖಂಡನೀಯ’ ಎಂದರು.</p>.<p>‘ಒಂದು ವೇಳೆ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ಬೆಳೆಸಬೇಕಾಗುತ್ತದೆ’ ಎಂದರು.</p>.<p>ಜೈ ಕರ್ನಾಟಕ ಸಂಘಟನೆಯ ಕಾಸಪ್ಪ ಈಳಗೇರ, ಲಕ್ಷ್ಮಿಕಾಂತ ಗೊಬ್ಬೂರ, ಗಿರೀಶ್ ಇಟ್ಟಂಗಿ, ವೆಂಕಟೇಶ ಕಂಬಾರ, ಸೋಮಲಿಂಗ ಕಂಬಾರ, ಶಂಕರ ಈಳಗೇರ, ಬಸವರಾಜ ದಾಶ್ಯಾಳ, ಅಶೋಕ ರಾಥೋಡ, ಅಮೀರ ಸೋಯಲ್ ಪಟೇಲ್, ರಾಜಶ್ರೀ ತೆಗ್ಗಿ ಹಾಗೂ ಹೋರಾಟ ಸಮಿತಿಯ ಎಲ್ಲಾ ಪದಾಧಿಕಾರಿಗಳು ಇದ್ದರು.</p>.<div><blockquote>ವಿಜಯಪುರ ಅತಿ ಹಿಂದುಳಿದ ಜಿಲ್ಲೆಯಾಗಿದ್ದು ಸರ್ಕಾರಿ ವೈದ್ಯಕೀಯ ಕಾಲೇಜು ಅವಶ್ಯಕತೆ ಇದ. ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಜಿಲ್ಲಾ ಆಸ್ಪತ್ರೆಯನ್ನು ಬಿಟ್ಟುಕೊಡಬಾರದು.</blockquote><span class="attribution">-ಕವಿತ ಹಿರೇಮಠ, ಜೈ ಕರ್ನಾಟಕ ಸಂಘದ ಮಹಿಳಾ ಮುಖಂಡರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>