<p><strong>ವಿಜಯಪುರ:</strong> ‘ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ 40 ದಿನಗಳಿಂದ ನಡೆದಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಶೀಘ್ರವೇ ಬೆಂಗಳೂರಿಗೆ ಹೋರಾಟ ವಿಸ್ತರಿಸಲಾಗುವುದು. ನಿರ್ಲಕ್ಷ್ಯ ತೋರಿದ್ದಲ್ಲಿ, ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಲಾಗುವುದು’ ಎಂದು ಚಿಂತಕ ಸಿದ್ದನಗೌಡ ಪಾಟೀಲ ತಿಳಿಸಿದರು.</p>.<p>‘ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸಾಧ್ಯವಾಗುವುದಾದರೆ, ವಿಜಯಪುರದಲ್ಲಿ ಯಾಕೆ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು? ಜಿಲ್ಲೆಯ ಶಾಸಕರೊಬ್ಬರಿಗೆ ರಾಜಕೀಯ ಲಾಭಕ್ಕಾಗಿ ಮಾತು ಕೊಟ್ಟಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಜನರೇ ಹೋರಾಟ ನಡೆಸಿದ್ದು, ಇದರಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ. ಎಲ್ಲ ಪಕ್ಷದವರು ಜೊತೆಗೂಡಿ ಸರ್ಕಾರದ ಮೇಲೆ ಒತ್ತಡ ಹೇರಿ, ಸರ್ಕಾರಿ ಕಾಲೇಜು ಸ್ಥಾಪನೆಗೆ ಆಗ್ರಹಿಸಬೇಕು’ ಎಂದರು.</p>.<p>‘ವಿಜಯಪುರ ಜಿಲ್ಲೆಯಲ್ಲಿ ನವಜಾತ ಶಿಶು, ತಾಯಿ ಮರಣ, ಅಪೌಷ್ಟಿಕತೆ, ಬಡತನ ಹೆಚ್ಚಿದೆ. ಶೈಕ್ಷಣಿಕವಾಗಿ ಜಿಲ್ಲೆ ಹಿಂದುಳಿದಿದೆ. ಕಾರಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿದರೆ, ಈ ಭಾಗದ ಜನರಿಗೆ ಅನುಕೂಲವಾಗಲಿದೆ’ ಎಂದರು. </p>.<p>ಪ್ರಮುಖರಾದ ಅರವಿಂದ ಮಾಲಗತ್ತಿ, ಬಸವರಾಜ ಸೂಳಿಬಾವಿ, ಜಿ.ಬಿ.ಪಾಟೀಲ, ವಿದ್ಯಾವತಿ ಅಂಕಲಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ 40 ದಿನಗಳಿಂದ ನಡೆದಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಶೀಘ್ರವೇ ಬೆಂಗಳೂರಿಗೆ ಹೋರಾಟ ವಿಸ್ತರಿಸಲಾಗುವುದು. ನಿರ್ಲಕ್ಷ್ಯ ತೋರಿದ್ದಲ್ಲಿ, ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಲಾಗುವುದು’ ಎಂದು ಚಿಂತಕ ಸಿದ್ದನಗೌಡ ಪಾಟೀಲ ತಿಳಿಸಿದರು.</p>.<p>‘ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸಾಧ್ಯವಾಗುವುದಾದರೆ, ವಿಜಯಪುರದಲ್ಲಿ ಯಾಕೆ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು? ಜಿಲ್ಲೆಯ ಶಾಸಕರೊಬ್ಬರಿಗೆ ರಾಜಕೀಯ ಲಾಭಕ್ಕಾಗಿ ಮಾತು ಕೊಟ್ಟಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಜನರೇ ಹೋರಾಟ ನಡೆಸಿದ್ದು, ಇದರಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ. ಎಲ್ಲ ಪಕ್ಷದವರು ಜೊತೆಗೂಡಿ ಸರ್ಕಾರದ ಮೇಲೆ ಒತ್ತಡ ಹೇರಿ, ಸರ್ಕಾರಿ ಕಾಲೇಜು ಸ್ಥಾಪನೆಗೆ ಆಗ್ರಹಿಸಬೇಕು’ ಎಂದರು.</p>.<p>‘ವಿಜಯಪುರ ಜಿಲ್ಲೆಯಲ್ಲಿ ನವಜಾತ ಶಿಶು, ತಾಯಿ ಮರಣ, ಅಪೌಷ್ಟಿಕತೆ, ಬಡತನ ಹೆಚ್ಚಿದೆ. ಶೈಕ್ಷಣಿಕವಾಗಿ ಜಿಲ್ಲೆ ಹಿಂದುಳಿದಿದೆ. ಕಾರಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿದರೆ, ಈ ಭಾಗದ ಜನರಿಗೆ ಅನುಕೂಲವಾಗಲಿದೆ’ ಎಂದರು. </p>.<p>ಪ್ರಮುಖರಾದ ಅರವಿಂದ ಮಾಲಗತ್ತಿ, ಬಸವರಾಜ ಸೂಳಿಬಾವಿ, ಜಿ.ಬಿ.ಪಾಟೀಲ, ವಿದ್ಯಾವತಿ ಅಂಕಲಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>