‘ಸದ್ಯ, ಪ್ರತಿನಿತ್ಯ 233 ಬಸ್ಗಳು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡುತ್ತಿವೆ. ಮಿರಜ್, ಸಾಂಗಲಿ, ಕೊಲ್ಲಾಪುರ, ಸಾತಾರ, ಪುಣೆ, ಮುಂಬಯಿ, ಜತ್ತ, ಚಿಕ್ಕೋಡಿ, ಬೆಳಗಾವಿ ಮಾರ್ಗಗಳಿಂದ ಬರುವ ಮತ್ತು ಹೋಗುವ ಬಸ್ಗಳು ಇಲ್ಲಿಗೇ ಬರುತ್ತವೆ. ಹೀಗಾಗಿ, ನಗರ ಕೇಂದ್ರ ಬಸ್ ನಿಲ್ದಾಣದ ಮೇಲಿನ ಒತ್ತಡ ಕಡಿಮೆಯಾಗಿದೆ. ಅಲ್ಲದೆ, ನಗರ ಪ್ರದೇಶದಲ್ಲಿ ಸಂಚಾರ ದಟ್ಟಣೆ ತಗ್ಗಿದೆ’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಜಿ.ಗಂಗಾಧರ ‘ಪ್ರಜಾವಾಣಿ’ಗೆ ತಿಳಿಸಿದರು.