<p><strong>ವಿಜಯಪುರ</strong>: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದ್ದು, 59 ಕೆ.ಜಿ. ಚಿನ್ನಾಭರಣ ಹಾಗೂ ₹5.20 ಲಕ್ಷ ನಗದು ಕಳವು ಮಾಡಲಾಗಿದೆ.</p><p>ಮೇ 23ರಿಂದ 25ರ ನಡುವೆ ಬ್ಯಾಂಕಿನ ದರೋಡೆ ನಡೆದಿದ್ದು ಮೇ 26ರಂದು ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಕಲ್ಮೇಶ ಪೂಜಾರಿ ದೂರು ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. </p><p>ಬ್ಯಾಂಕಿನ ಮುಖ್ಯ ದ್ವಾರದ ಶೆಟರ್ಸ್ ಗೆ ಹಾಕಿದ ಕೀಲಿ ಮತ್ತು ಕಿಟಕಿಯ ಸರಳುಗಳನ್ನು ಮುರಿದು ಒಳಗೆ ಪ್ರವೇಶಿಸಿದ ದರೋಡೆಕೋರರು, ಬಂಗಾರದ ಆಭರಣ ಮತ್ತು ನಗದು ಇಟ್ಟಿದ್ದ ಸೇಪ್ ಲಾಕರ್ ನ ಕೀಲಿ ತೆಗೆದು ಅದರ ಒಳಗೆ ಇರುವ ಕಬ್ಬಿಣದ ಬಾಗಿಲಿನ ಸರಳುಗಳನ್ನು ಕಟ್ ಮಾಡಿ ಒಳ ಹೊಕ್ಕು, ಕಬ್ಬಿಣದ ಟ್ರಜರಿಯಲ್ಲಿ ಇದ್ದ ಚಿನ್ನಾಭರಣ, ನಗದು ಹೊತ್ತೊಯ್ದಿದ್ದಾರೆ ಎಂದು ತಿಳಿಸಿದ್ದಾರೆ.</p><p>ಅಲ್ಲದೇ, ತಮ್ಮ ಗುರುತು ಸಿಗದಂತೆ ಮಾಡಲು ಬ್ಯಾಂಕಿನಲ್ಲಿ ಅಳವಡಿಸಿದ್ದ ಸಿ.ಸಿ.ಟಿವಿ ಕ್ಯಾಮೆರಾದ ಎನ್.ವಿ.ಆರ್. ಅನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.</p><p>ದರೋಡೆಕೋರರ ಪತ್ತೆಗಾಗಿ ಎಂಟು ತಂಡಗಳನ್ನು ರಚಿಸಲಾಗಿದೆ. ವಿವಿಧ ಆಯಾಮಗಳಲ್ಲಿ ತನಿಖೆ ಮತ್ತು ಪತ್ತೆ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದ್ದು, 59 ಕೆ.ಜಿ. ಚಿನ್ನಾಭರಣ ಹಾಗೂ ₹5.20 ಲಕ್ಷ ನಗದು ಕಳವು ಮಾಡಲಾಗಿದೆ.</p><p>ಮೇ 23ರಿಂದ 25ರ ನಡುವೆ ಬ್ಯಾಂಕಿನ ದರೋಡೆ ನಡೆದಿದ್ದು ಮೇ 26ರಂದು ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಕಲ್ಮೇಶ ಪೂಜಾರಿ ದೂರು ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. </p><p>ಬ್ಯಾಂಕಿನ ಮುಖ್ಯ ದ್ವಾರದ ಶೆಟರ್ಸ್ ಗೆ ಹಾಕಿದ ಕೀಲಿ ಮತ್ತು ಕಿಟಕಿಯ ಸರಳುಗಳನ್ನು ಮುರಿದು ಒಳಗೆ ಪ್ರವೇಶಿಸಿದ ದರೋಡೆಕೋರರು, ಬಂಗಾರದ ಆಭರಣ ಮತ್ತು ನಗದು ಇಟ್ಟಿದ್ದ ಸೇಪ್ ಲಾಕರ್ ನ ಕೀಲಿ ತೆಗೆದು ಅದರ ಒಳಗೆ ಇರುವ ಕಬ್ಬಿಣದ ಬಾಗಿಲಿನ ಸರಳುಗಳನ್ನು ಕಟ್ ಮಾಡಿ ಒಳ ಹೊಕ್ಕು, ಕಬ್ಬಿಣದ ಟ್ರಜರಿಯಲ್ಲಿ ಇದ್ದ ಚಿನ್ನಾಭರಣ, ನಗದು ಹೊತ್ತೊಯ್ದಿದ್ದಾರೆ ಎಂದು ತಿಳಿಸಿದ್ದಾರೆ.</p><p>ಅಲ್ಲದೇ, ತಮ್ಮ ಗುರುತು ಸಿಗದಂತೆ ಮಾಡಲು ಬ್ಯಾಂಕಿನಲ್ಲಿ ಅಳವಡಿಸಿದ್ದ ಸಿ.ಸಿ.ಟಿವಿ ಕ್ಯಾಮೆರಾದ ಎನ್.ವಿ.ಆರ್. ಅನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.</p><p>ದರೋಡೆಕೋರರ ಪತ್ತೆಗಾಗಿ ಎಂಟು ತಂಡಗಳನ್ನು ರಚಿಸಲಾಗಿದೆ. ವಿವಿಧ ಆಯಾಮಗಳಲ್ಲಿ ತನಿಖೆ ಮತ್ತು ಪತ್ತೆ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>