<p>ವಿಜಯಪುರ: ನಗರದ ಪ್ರಮುಖ ರಾಜಕಾಲುವೆಗಳು, ಒಳಚರಂಡಿಗಳು ಹಾಗೂ ಮಳೆ ನೀರು ಹರಿವಿನ ಮಾರ್ಗಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರ ವ್ಯಾಪ್ತಿಯಲ್ಲಿ ಮುಂಗಾರು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಪಾಲಿಕೆಯ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನೀರು ನಿಲ್ಲುವ ಪ್ರದೇಶಗಳಲ್ಲಿ ಅಗತ್ಯ ಪಂಪ್ ಸೆಟ್ ಗಳನ್ನು ಸಿದ್ಧವಾಗಿಡಬೇಕು. ತುರ್ತು ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು’ ಎಂದು ಸೂಚಿಸಿದರು.</p>.<p>‘ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ವಿದ್ಯುತ್ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಿ’ ಎಂದು ಸೂಚಿಸಿದರು.</p>.<p>‘ಸಾರ್ವಜನಿಕರು ಮಳೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ: 08352-222474 ಸಂಪರ್ಕಿಸಬೇಕು’ ಎಂದು ಮೇಯರ್ ಮನವಿ ಮಾಡಲಾಯಿತು.</p>.<p>ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಜಲಾವೃತ ಪ್ರದೇಶಗಳು, ಮಳೆ ನೀರಿನ ಹರಿವು, ಚರಂಡಿ ಸ್ವಚ್ಛತೆ, ರಸ್ತೆ ಹಾನಿ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.</p>.<p>ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-26-680200167</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ನಗರದ ಪ್ರಮುಖ ರಾಜಕಾಲುವೆಗಳು, ಒಳಚರಂಡಿಗಳು ಹಾಗೂ ಮಳೆ ನೀರು ಹರಿವಿನ ಮಾರ್ಗಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್. ಕರಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರ ವ್ಯಾಪ್ತಿಯಲ್ಲಿ ಮುಂಗಾರು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಪಾಲಿಕೆಯ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನೀರು ನಿಲ್ಲುವ ಪ್ರದೇಶಗಳಲ್ಲಿ ಅಗತ್ಯ ಪಂಪ್ ಸೆಟ್ ಗಳನ್ನು ಸಿದ್ಧವಾಗಿಡಬೇಕು. ತುರ್ತು ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು’ ಎಂದು ಸೂಚಿಸಿದರು.</p>.<p>‘ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ವಿದ್ಯುತ್ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಿ’ ಎಂದು ಸೂಚಿಸಿದರು.</p>.<p>‘ಸಾರ್ವಜನಿಕರು ಮಳೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ: 08352-222474 ಸಂಪರ್ಕಿಸಬೇಕು’ ಎಂದು ಮೇಯರ್ ಮನವಿ ಮಾಡಲಾಯಿತು.</p>.<p>ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಜಲಾವೃತ ಪ್ರದೇಶಗಳು, ಮಳೆ ನೀರಿನ ಹರಿವು, ಚರಂಡಿ ಸ್ವಚ್ಛತೆ, ರಸ್ತೆ ಹಾನಿ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.</p>.<p>ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-26-680200167</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>