<p><strong>ವಿಜಯಪುರ</strong>: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿಗೆ ಶುಕ್ರವಾರ 100 ನೇ ದಿನ ತುಂಬಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.</p>.<p>ನಗರದ ಗಾಂಧಿವೃತ್ತದಲ್ಲಿ 20 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಿಜಯಪುರದ ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಕಾರ್ಮಿಕರು, ರೈತರು, ಅಂಗವಿಕಲರು, ಮಕ್ಕಳು ಸಹಿ ಹಾಕಿದರು.</p>.<p>ಸರ್ಕಾರದ ಪಿಪಿಪಿ ನೀತಿಯನ್ನು ಖಂಡಿಸಿ, ಕಳೆದ ನೂರು ದಿನಗಳಿಂದ ಅನಿರ್ದಿಷ್ಟ ಧರಣಿ ಹಾಗೂ 8 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದ್ದು, ಸರ್ಕಾರ ಇನ್ನು ಜನಗಳ ಹೋರಾಟಕ್ಕೆ ಸ್ಪಂದಿಸದಿದ್ದಕ್ಕಾಗಿ ಜಿಲ್ಲೆಯ ಜನ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ 100 ಮೀಟರ್ ಬ್ಯಾನರ್ ಮೇಲೆ ಸಾವಿರಾರು ಸಹಿಯನ್ನು ದಿನವಿಡಿ ಸಹಿ ಸಂಗ್ರಹ ಮಾಡಲಾಯಿತು.</p>.<p>100 ಮೀಟರ್ ಬ್ಯಾನರ್ ಅನ್ನು ಹಿಡಿದು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯ ಮೂಲಕ ಗಾಂಧಿವೃತ್ತಕ್ಕೆ ಆಗಮಿಸಿದರು.</p>.<p>ನೂರು ದಿನದ ಸಂಗ್ರಹಣ ಅಭಿಯಾನವನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಯು. ಬಸವರಾಜ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲವನ್ನು ಖಾಸಗೀಕರಣ ಮಾಡಲು ಹೊರಟಿದೆ. ಜನ ಜಾಗೃತ ಆಗಬೇಕು. ಈ ಐತಿಹಾಸಿಕ ಹೋರಾಟ ಎಲ್ಲಾ ಜನರಿಗೆ ಮಾದರಿಯಾಗಲಿ ಎಂದು ಹೇಳಿದರು.</p>.<p>ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿಗೆ ಶುಕ್ರವಾರ 100 ನೇ ದಿನ ತುಂಬಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.</p>.<p>ನಗರದ ಗಾಂಧಿವೃತ್ತದಲ್ಲಿ 20 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಿಜಯಪುರದ ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಕಾರ್ಮಿಕರು, ರೈತರು, ಅಂಗವಿಕಲರು, ಮಕ್ಕಳು ಸಹಿ ಹಾಕಿದರು.</p>.<p>ಸರ್ಕಾರದ ಪಿಪಿಪಿ ನೀತಿಯನ್ನು ಖಂಡಿಸಿ, ಕಳೆದ ನೂರು ದಿನಗಳಿಂದ ಅನಿರ್ದಿಷ್ಟ ಧರಣಿ ಹಾಗೂ 8 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದ್ದು, ಸರ್ಕಾರ ಇನ್ನು ಜನಗಳ ಹೋರಾಟಕ್ಕೆ ಸ್ಪಂದಿಸದಿದ್ದಕ್ಕಾಗಿ ಜಿಲ್ಲೆಯ ಜನ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ 100 ಮೀಟರ್ ಬ್ಯಾನರ್ ಮೇಲೆ ಸಾವಿರಾರು ಸಹಿಯನ್ನು ದಿನವಿಡಿ ಸಹಿ ಸಂಗ್ರಹ ಮಾಡಲಾಯಿತು.</p>.<p>100 ಮೀಟರ್ ಬ್ಯಾನರ್ ಅನ್ನು ಹಿಡಿದು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯ ಮೂಲಕ ಗಾಂಧಿವೃತ್ತಕ್ಕೆ ಆಗಮಿಸಿದರು.</p>.<p>ನೂರು ದಿನದ ಸಂಗ್ರಹಣ ಅಭಿಯಾನವನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಯು. ಬಸವರಾಜ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲವನ್ನು ಖಾಸಗೀಕರಣ ಮಾಡಲು ಹೊರಟಿದೆ. ಜನ ಜಾಗೃತ ಆಗಬೇಕು. ಈ ಐತಿಹಾಸಿಕ ಹೋರಾಟ ಎಲ್ಲಾ ಜನರಿಗೆ ಮಾದರಿಯಾಗಲಿ ಎಂದು ಹೇಳಿದರು.</p>.<p>ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>