<p><strong>ವಿಜಯಪುರ:</strong> ಇವತ್ತಿನ ನನ್ನ ಗೆಲುವು ಅವಳಿ ಜಿಲ್ಲೆಯ ಪಕ್ಷದ ಕಾರ್ಯಕರ್ತರು, ನಾಯಕರು, ಹಾಲಿ ಮಾಜಿ ಶಾಸಕರು, ಮಾಜಿ ಸಚಿವರ ಗೆಲುವಾಗಿದೆ ಎಂದು ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ ಹೇಳಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಧ್ವನಿಯಾಗಿ ಕೆಲಸ ಮಾಡುವೆ ಎಂದರು. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಗೌರವಧನ ಹೆಚ್ಚಳಕ್ಕೆ, ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು, ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ ಎಂದರು.</p>.<p>15ನೇ ಹಣಕಾಸು ಯೋಜನೆಯಡಿ ಅನುದಾನ ಬಳಕೆಗೆ ಗ್ರಾಮ ಪಂಚಾಯಿತಿಗಳಿಗೆ ಪೂರ್ಣಾಧಿಕಾರ ನೀಡಬೇಕು. ಪ್ರತಿ ಗ್ರಾ.ಪಂ.ಗಳಿಗೆ ವಸತಿ ಯೋಜನೆಯಡಿ ಕನಿಷ್ಟ 50 ಮನೆಗಳನ್ನು ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.</p>.<p>ಅವಳಿ ಜಿಲ್ಲೆಯ 6500 ಗ್ರಾಮ ಪಂಚಾಯಿತಿ ಸದಸ್ಯರ ನಡುವೆ ನಿರಂತರ ಸಂಪರ್ಕದಲ್ಲಿ ಇದ್ದೇನೆ. ಅವರ ಕುಂದುಕೊರತೆ ಗಳಿಗೆ ಸ್ಪಂದಿಸಿದ್ದೇನೆ. ಹೀಗಾಗಿ ಗೆಲುವು ಸುಲಭವಾಗಿದೆ ಎಂದರು.</p>.<p><strong>ಇದನ್ನೂ ಓದಿ– </strong><a href="https://www.prajavani.net/karnataka-news/karnataka-mlc-election-results-2021-party-majority-892365.html" target="_blank">ಫಲಿತಾಂಶ | ಪಕ್ಷಗಳ ಬಲಾಬಲ: ಬಿಜೆಪಿ–11, ಕಾಂಗ್ರೆಸ್–06, ಜೆಡಿಎಸ್–01, ಇತರೆ–01</a></p>.<p>ಬಾದಾಮಿ ಶಾಸಕ ಸಿದ್ದರಾಮಯ್ಯ, ಇಂಡಿ ಶಾಸಕ ಯಶವಂತ ರಾಯಗೌಡ ಪಾಟೀಲ, ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಅವರು ತಮ್ಮ ಕ್ಷೇತ್ರಗಳಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮತದಾರರು ಮೆಚ್ಚಿದ್ದಾರೆ. ನನ್ನ ದುಡುಮೆಗೆ ಪಗಾರ ನೀಡಿದ್ದಾರೆ ಎಂದರು.</p>.<p>ಮುಖಂಡರಾದ ಹಮೀದ್ ಮುಶ್ರಫ್, ಡಾ. ಮಹಾಂತೇಶ ಬಿರಾದಾರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಇವತ್ತಿನ ನನ್ನ ಗೆಲುವು ಅವಳಿ ಜಿಲ್ಲೆಯ ಪಕ್ಷದ ಕಾರ್ಯಕರ್ತರು, ನಾಯಕರು, ಹಾಲಿ ಮಾಜಿ ಶಾಸಕರು, ಮಾಜಿ ಸಚಿವರ ಗೆಲುವಾಗಿದೆ ಎಂದು ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ ಹೇಳಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಧ್ವನಿಯಾಗಿ ಕೆಲಸ ಮಾಡುವೆ ಎಂದರು. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಗೌರವಧನ ಹೆಚ್ಚಳಕ್ಕೆ, ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲು, ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ ಎಂದರು.</p>.<p>15ನೇ ಹಣಕಾಸು ಯೋಜನೆಯಡಿ ಅನುದಾನ ಬಳಕೆಗೆ ಗ್ರಾಮ ಪಂಚಾಯಿತಿಗಳಿಗೆ ಪೂರ್ಣಾಧಿಕಾರ ನೀಡಬೇಕು. ಪ್ರತಿ ಗ್ರಾ.ಪಂ.ಗಳಿಗೆ ವಸತಿ ಯೋಜನೆಯಡಿ ಕನಿಷ್ಟ 50 ಮನೆಗಳನ್ನು ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.</p>.<p>ಅವಳಿ ಜಿಲ್ಲೆಯ 6500 ಗ್ರಾಮ ಪಂಚಾಯಿತಿ ಸದಸ್ಯರ ನಡುವೆ ನಿರಂತರ ಸಂಪರ್ಕದಲ್ಲಿ ಇದ್ದೇನೆ. ಅವರ ಕುಂದುಕೊರತೆ ಗಳಿಗೆ ಸ್ಪಂದಿಸಿದ್ದೇನೆ. ಹೀಗಾಗಿ ಗೆಲುವು ಸುಲಭವಾಗಿದೆ ಎಂದರು.</p>.<p><strong>ಇದನ್ನೂ ಓದಿ– </strong><a href="https://www.prajavani.net/karnataka-news/karnataka-mlc-election-results-2021-party-majority-892365.html" target="_blank">ಫಲಿತಾಂಶ | ಪಕ್ಷಗಳ ಬಲಾಬಲ: ಬಿಜೆಪಿ–11, ಕಾಂಗ್ರೆಸ್–06, ಜೆಡಿಎಸ್–01, ಇತರೆ–01</a></p>.<p>ಬಾದಾಮಿ ಶಾಸಕ ಸಿದ್ದರಾಮಯ್ಯ, ಇಂಡಿ ಶಾಸಕ ಯಶವಂತ ರಾಯಗೌಡ ಪಾಟೀಲ, ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಅವರು ತಮ್ಮ ಕ್ಷೇತ್ರಗಳಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮತದಾರರು ಮೆಚ್ಚಿದ್ದಾರೆ. ನನ್ನ ದುಡುಮೆಗೆ ಪಗಾರ ನೀಡಿದ್ದಾರೆ ಎಂದರು.</p>.<p>ಮುಖಂಡರಾದ ಹಮೀದ್ ಮುಶ್ರಫ್, ಡಾ. ಮಹಾಂತೇಶ ಬಿರಾದಾರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>