<p><strong>ಕೊಲ್ಹಾರ</strong>: ‘ಮುಳವಾಡ ಏತ ನೀರಾವರಿ ಸ್ಕೀಮ್ 1 ಮತ್ತು 2ನ್ನು ಪ್ರಾರಂಭಿಸಿ ಕೂಡಲೇ ಕಾಲುವೆಗಳಿಗೆ ನೀರು ಹರಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತಾಲ್ಲೂಕಿನ ಮಟ್ಟಿಹಾಳ ಕ್ರಾಸ್ ಹತ್ತಿರದ ಕೃಷ್ಣ ಭಾಗ್ಯ ಜಲನಿಗಮದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.</p>.<p>ಸಂಘದ ಕೊಲ್ಹಾರ ತಾಲ್ಲೂಕು ಅಧ್ಯಕ್ಷ ಸೋಮು ಬಿರಾದರ್ ಮಾತನಾಡಿ, ‘ರೈತರ ಜಮೀನುಗಳಿಗೆ ನೀರಿನ ಅಭಾವವಿದ್ದು, ಜನ– ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗುತ್ತಿದೆ. ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಬಸವನಬಾಗೇವಾಡಿ, ಬಬಲೇಶ್ವರ, ಕೊಲ್ಹಾರ ತಾಲ್ಲೂಕಿನಲ್ಲಿ ಸಮಸ್ಯೆ ಆಗುತ್ತಿದೆ’ ಎಂದರು.</p>.<p>‘ಆಲಮಟ್ಟಿ ಅಣೆಕಟ್ಟೆಯಲ್ಲಿ ಸಾಕಷ್ಟು ನೀರು ಸಂಗ್ರಹವಿದ್ದು, ಅದರ ಸಮರ್ಪಕ ಬಳಕೆಗಾಗಿ ಮುಳವಾಡ ಏತ ನೀರಾವರಿಯ ಹಂತ 1 ಮತ್ತು 2ಕ್ಕೆ ನೀರು ಹರಿಸಿ ಕೆರೆ, ಹಳ್ಳಕೊಳ್ಳಗಳನ್ನು ತುಂಬಿಸಬೇಕು’ ಎಂದು ಹೇಳಿದರು.</p>.<p>ಕೆಬಿಜೆಎನ್ಎಲ್ ಅಧಿಕಾರಿ ಗೋವಿಂದ ರಾಠೋಡ, ತಹಶೀಲ್ದಾರ್ ಸಂತೋಷ್ ಮ್ಯಾಗೇರಿ, ಪಿಎಸ್ಐ ಅಶೋಕ್ ನಾಯಕ್, ರೈತ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-26-1686045946</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ</strong>: ‘ಮುಳವಾಡ ಏತ ನೀರಾವರಿ ಸ್ಕೀಮ್ 1 ಮತ್ತು 2ನ್ನು ಪ್ರಾರಂಭಿಸಿ ಕೂಡಲೇ ಕಾಲುವೆಗಳಿಗೆ ನೀರು ಹರಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತಾಲ್ಲೂಕಿನ ಮಟ್ಟಿಹಾಳ ಕ್ರಾಸ್ ಹತ್ತಿರದ ಕೃಷ್ಣ ಭಾಗ್ಯ ಜಲನಿಗಮದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.</p>.<p>ಸಂಘದ ಕೊಲ್ಹಾರ ತಾಲ್ಲೂಕು ಅಧ್ಯಕ್ಷ ಸೋಮು ಬಿರಾದರ್ ಮಾತನಾಡಿ, ‘ರೈತರ ಜಮೀನುಗಳಿಗೆ ನೀರಿನ ಅಭಾವವಿದ್ದು, ಜನ– ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗುತ್ತಿದೆ. ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಬಸವನಬಾಗೇವಾಡಿ, ಬಬಲೇಶ್ವರ, ಕೊಲ್ಹಾರ ತಾಲ್ಲೂಕಿನಲ್ಲಿ ಸಮಸ್ಯೆ ಆಗುತ್ತಿದೆ’ ಎಂದರು.</p>.<p>‘ಆಲಮಟ್ಟಿ ಅಣೆಕಟ್ಟೆಯಲ್ಲಿ ಸಾಕಷ್ಟು ನೀರು ಸಂಗ್ರಹವಿದ್ದು, ಅದರ ಸಮರ್ಪಕ ಬಳಕೆಗಾಗಿ ಮುಳವಾಡ ಏತ ನೀರಾವರಿಯ ಹಂತ 1 ಮತ್ತು 2ಕ್ಕೆ ನೀರು ಹರಿಸಿ ಕೆರೆ, ಹಳ್ಳಕೊಳ್ಳಗಳನ್ನು ತುಂಬಿಸಬೇಕು’ ಎಂದು ಹೇಳಿದರು.</p>.<p>ಕೆಬಿಜೆಎನ್ಎಲ್ ಅಧಿಕಾರಿ ಗೋವಿಂದ ರಾಠೋಡ, ತಹಶೀಲ್ದಾರ್ ಸಂತೋಷ್ ಮ್ಯಾಗೇರಿ, ಪಿಎಸ್ಐ ಅಶೋಕ್ ನಾಯಕ್, ರೈತ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-26-1686045946</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>