<p><strong>ವಿಜಯಪುರ</strong>: ವಿಜಯಪುರ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದೆ. 5ನೇ ವಾರ್ಡ್ನ ಬಿಜೆಪಿ ಸದಸ್ಯ ಎಂ.ಎಸ್.ಕರಡಿ ಅವರು ಮೇಯರ್ ಮತ್ತು 17 ವಾರ್ಡ್ನ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಉಪಮೇಯರ್ ಆಗಿ ಆಯ್ಕೆ ಆಗಿದ್ದಾರೆ.</p>.<p>ಇಬ್ಬರೂ ತಲಾ 24 ಮತ ಗಳಿಸಿದರು. ಮೇಯರ್ ಸ್ಥಾನಕ್ಕೆ ಜನವರಿಯಲ್ಲಿಉಪಮೇಯರ್ ಸ್ಥಾನಕ್ಕೆ ಇದೇ ಫೆಬ್ರುವರಿಯಲ್ಲಿ ಚುನಾವಣೆ ನಡೆದಿತ್ತು. ಕೋರ್ಟ್ ಆದೇಶದ ಮೇರೆಗೆ ಸೋಮವಾರ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಫಲಿತಾಂಶ ಪ್ರಕಟಿಸಿದರು.</p>.<p>ಆಸ್ತಿ ವಿವರ ಸಲ್ಲಿಸದ ಕಾರಣ ಬಿಜೆಪಿಯ 18, ಕಾಂಗ್ರೆಸ್ನ 10, ಎಐಎಂಐಎಂ 2, ಜೆಡಿಎಸ್ 1 ಹಾಗೂ ಪಕ್ಷೇತರ 5 ಸದಸ್ಯರು ಸೇರಿ ಎಲ್ಲ 35 ಸದಸ್ಯರನ್ನು ರಾಜ್ಯ ಸರ್ಕಾರ ಅನರ್ಹಗೊಳಿಸಿ ಫೆಬ್ರುವರಿಯಲ್ಲಿ ಆದೇಶ ಹೊರಡಿಸಿತ್ತು. ಆಗ ನಡೆದಿದ್ದ ಚುನಾವಣೆ ಫಲಿತಾಂಶ ತಡೆ ಹಿಡಿಯಲಾಗಿತ್ತು. </p>.<h2>ಯತ್ನಾಳ ಬೆಂಬಲಿಗರು:</h2>.<p>ನೂತನ ಮೇಯರ್, ಉಪ ಮೇಯರ್ ಇಬ್ಬರೂ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಟ್ಟಾ ಬೆಂಬಲಿಗರು. ಸೋಮವಾರ ಯತ್ನಾಳ ಅವರೊಂದಿಗೆ ಪಾಲಿಕೆಗೆ ಬಂದು, ಅಧಿಕಾರ ಸ್ವೀಕರಿಸಿದರು. ಬಳಿಕ ಯತ್ನಾಳ ಅವರೊಂದಿಗೆ ವಿಜಯೋತ್ಸವ ಆಚರಿಸಿದರು.</p>.<p>‘ಪಾಲಿಕೆಯಲ್ಲಿ ಬಿಜೆಪಿ–ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣಕ್ಕೆ ತಡೆ ಬಿದ್ದಿದೆ. ಮೊದಲ ಬಾರಿಗೆ ಹಿಂದುತ್ವಕ್ಕೆ ಜಯ ಒಲಿದಿದೆ’ ಎಂದು ಶಾಸಕ ಯತ್ನಾಳ ಇದೇ ವೇಳೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ವಿಜಯಪುರ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದೆ. 5ನೇ ವಾರ್ಡ್ನ ಬಿಜೆಪಿ ಸದಸ್ಯ ಎಂ.ಎಸ್.ಕರಡಿ ಅವರು ಮೇಯರ್ ಮತ್ತು 17 ವಾರ್ಡ್ನ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಉಪಮೇಯರ್ ಆಗಿ ಆಯ್ಕೆ ಆಗಿದ್ದಾರೆ.</p>.<p>ಇಬ್ಬರೂ ತಲಾ 24 ಮತ ಗಳಿಸಿದರು. ಮೇಯರ್ ಸ್ಥಾನಕ್ಕೆ ಜನವರಿಯಲ್ಲಿಉಪಮೇಯರ್ ಸ್ಥಾನಕ್ಕೆ ಇದೇ ಫೆಬ್ರುವರಿಯಲ್ಲಿ ಚುನಾವಣೆ ನಡೆದಿತ್ತು. ಕೋರ್ಟ್ ಆದೇಶದ ಮೇರೆಗೆ ಸೋಮವಾರ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಫಲಿತಾಂಶ ಪ್ರಕಟಿಸಿದರು.</p>.<p>ಆಸ್ತಿ ವಿವರ ಸಲ್ಲಿಸದ ಕಾರಣ ಬಿಜೆಪಿಯ 18, ಕಾಂಗ್ರೆಸ್ನ 10, ಎಐಎಂಐಎಂ 2, ಜೆಡಿಎಸ್ 1 ಹಾಗೂ ಪಕ್ಷೇತರ 5 ಸದಸ್ಯರು ಸೇರಿ ಎಲ್ಲ 35 ಸದಸ್ಯರನ್ನು ರಾಜ್ಯ ಸರ್ಕಾರ ಅನರ್ಹಗೊಳಿಸಿ ಫೆಬ್ರುವರಿಯಲ್ಲಿ ಆದೇಶ ಹೊರಡಿಸಿತ್ತು. ಆಗ ನಡೆದಿದ್ದ ಚುನಾವಣೆ ಫಲಿತಾಂಶ ತಡೆ ಹಿಡಿಯಲಾಗಿತ್ತು. </p>.<h2>ಯತ್ನಾಳ ಬೆಂಬಲಿಗರು:</h2>.<p>ನೂತನ ಮೇಯರ್, ಉಪ ಮೇಯರ್ ಇಬ್ಬರೂ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಟ್ಟಾ ಬೆಂಬಲಿಗರು. ಸೋಮವಾರ ಯತ್ನಾಳ ಅವರೊಂದಿಗೆ ಪಾಲಿಕೆಗೆ ಬಂದು, ಅಧಿಕಾರ ಸ್ವೀಕರಿಸಿದರು. ಬಳಿಕ ಯತ್ನಾಳ ಅವರೊಂದಿಗೆ ವಿಜಯೋತ್ಸವ ಆಚರಿಸಿದರು.</p>.<p>‘ಪಾಲಿಕೆಯಲ್ಲಿ ಬಿಜೆಪಿ–ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣಕ್ಕೆ ತಡೆ ಬಿದ್ದಿದೆ. ಮೊದಲ ಬಾರಿಗೆ ಹಿಂದುತ್ವಕ್ಕೆ ಜಯ ಒಲಿದಿದೆ’ ಎಂದು ಶಾಸಕ ಯತ್ನಾಳ ಇದೇ ವೇಳೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>