<p><strong>ವಿಜಯಪುರ</strong>: ನೀಟ್ ಯುಜಿ 2026 ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ನಡೆದಿರುವುದನ್ನು ಖಂಡಿಸಿ ಭೀಮ್ ರಾಜ್ಯ ದಲಿತ ಸೇವಾ ಸಮೀತಿ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಕಬಾಡೆ ಮಾತನಾಡಿ, ‘ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷೆಯ ಸೋರಿಕೆಯಲ್ಲ, ಸಂಪೂರ್ಣ ಶಿಕ್ಷಣ ವ್ಯವಸ್ಥೆಯ ಮೇಲಿನ ದೊಡ್ಡ ದಾಳಿ. 23 ಲಕ್ಷ ವಿದ್ಯಾರ್ಥಿಗಳು ಮೇ 3 ರಂದು ಬರೆದಿದ್ದ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇವರೆಲ್ಲ ಮುಂದೆ ವೈದ್ಯರಾಗುವ ಅಪಾರ ಕನಸಿನೊಂದಿಗೆ ಹಗಲು ರಾತ್ರಿ ಓದಿ ನೀಟ್ ಪರೀಕ್ಷೆ ಬರೆಯಲು ತಯಾರಾಗಿದ್ದವರು. ಆದರೆ, ಯಾವುದೇ ಅಕ್ರಮಗಳಿಲ್ಲದೆ ಒಂದು ಪರೀಕ್ಷೆಯನ್ನು ಮಾಡಲಾಗದಷ್ಟು ನಮ್ಮ ವ್ಯವಸ್ಥೆ ಅಪರಾಧಿಗಳ ಮೈದಾನವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಅಪ್ಪುರಾಜ್ ನಿಮಾದಾರ, ನೀಲಾಂಬಿಕ ಕಟ್ಟಿಮನಿ, ಸೋಮಶೇಖರ ಕಬಾಡೆ, ರವಿ ರಾಠೋಡ, ವಿಜಯಕುಮಾರ ನಿಮಾದಾರ, ಚಂದ್ರಶೇಖರ ಕಟ್ಟಿಮನಿ, ಪ್ರಿಯಾಂಕಾ ನಿಮಾದಾರ, ಕವಿತಾ ಹೊಸಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-26-2021609270</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನೀಟ್ ಯುಜಿ 2026 ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ನಡೆದಿರುವುದನ್ನು ಖಂಡಿಸಿ ಭೀಮ್ ರಾಜ್ಯ ದಲಿತ ಸೇವಾ ಸಮೀತಿ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಕಬಾಡೆ ಮಾತನಾಡಿ, ‘ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷೆಯ ಸೋರಿಕೆಯಲ್ಲ, ಸಂಪೂರ್ಣ ಶಿಕ್ಷಣ ವ್ಯವಸ್ಥೆಯ ಮೇಲಿನ ದೊಡ್ಡ ದಾಳಿ. 23 ಲಕ್ಷ ವಿದ್ಯಾರ್ಥಿಗಳು ಮೇ 3 ರಂದು ಬರೆದಿದ್ದ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇವರೆಲ್ಲ ಮುಂದೆ ವೈದ್ಯರಾಗುವ ಅಪಾರ ಕನಸಿನೊಂದಿಗೆ ಹಗಲು ರಾತ್ರಿ ಓದಿ ನೀಟ್ ಪರೀಕ್ಷೆ ಬರೆಯಲು ತಯಾರಾಗಿದ್ದವರು. ಆದರೆ, ಯಾವುದೇ ಅಕ್ರಮಗಳಿಲ್ಲದೆ ಒಂದು ಪರೀಕ್ಷೆಯನ್ನು ಮಾಡಲಾಗದಷ್ಟು ನಮ್ಮ ವ್ಯವಸ್ಥೆ ಅಪರಾಧಿಗಳ ಮೈದಾನವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಅಪ್ಪುರಾಜ್ ನಿಮಾದಾರ, ನೀಲಾಂಬಿಕ ಕಟ್ಟಿಮನಿ, ಸೋಮಶೇಖರ ಕಬಾಡೆ, ರವಿ ರಾಠೋಡ, ವಿಜಯಕುಮಾರ ನಿಮಾದಾರ, ಚಂದ್ರಶೇಖರ ಕಟ್ಟಿಮನಿ, ಪ್ರಿಯಾಂಕಾ ನಿಮಾದಾರ, ಕವಿತಾ ಹೊಸಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-26-2021609270</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>