<p><strong>ವಿಜಯಪುರ:</strong> ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರವೇಶಾತಿ, ಮಾರ್ಗದರ್ಶನ ಮತ್ತು ಪದವಿ ಪ್ರದಾನ ಪ್ರಕ್ರಿಯೆಯಲ್ಲಿ ನಡೆದಿರುವ ಯುಜಿಸಿ ನಿಯಮ ಉಲ್ಲಂಘನೆ, ಅಕ್ರಮ ಮತ್ತು ಭ್ರಷ್ಟಾಚಾರ ಆರೋಪ ಪರಿಶೀಲನೆಗಾಗಿ ಸಮಿತಿ ರಚನೆಯಾಗಿದೆ.</p>.<p>‘ಪಿಎಚ್.ಡಿ ಅಧ್ಯಯನ: ನಿಯಮ ಉಲ್ಲಂಘನೆ, ಅಕ್ರಮ ಆರೋಪ’ ಎಂಬ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ಯಲ್ಲಿ2026ರ ಏ.21ರಂದು ಪ್ರಕಟವಾದ ವಿಶೇಷ ವರದಿ ಆಧರಿಸಿ ಅಕ್ಕಮಹಾದೇವಿವಿ.ವಿ ಕುಲಪತಿ ಪ್ರೊ. ವಿಜಯಾಕೋರಿಶೆಟ್ಟಿ ಅವರು ವಿಶ್ವವಿದ್ಯಾಲಯದಉನ್ನತಾಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಿದ್ದಾರೆ.</p>.<p>ಯಾರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದೆ? ಸಮಿತಿಯಲ್ಲಿ ಯಾರ್ಯಾರು ಇದ್ದಾರೆ? ಸಮಿತಿಗೆ ವರದಿ ನೀಡಲು ನೀಡಿರುವ ಕಾಲಾವಕಾಶ ಎಷ್ಟು? ಎಂಬ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಲು ಕುಲಪತಿಗಳು ನಿರಾಕರಿಸಿದರು.</p>.<p>ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದ ಅಧ್ಯಕ್ಷ ಭೋಗೇಶ್ ಸೊಲ್ಲಾಪುರ, ‘ಪರಿಶೀಲನಾ ಸಮಿತಿಯನ್ನು ಕಾಟಾಚಾರಕ್ಕೆ ನೇಮಕ ಮಾಡಲಾಗಿದೆ. ಸಮಿತಿಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ಅಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿ ಮಾತ್ರ ಇದ್ದಾರೆ. ಹೊರಗಿನವರು ಏಕಿಲ್ಲ ಎಂಬುದಕ್ಕೆ ಕುಲಪತಿಗಳು ಉತ್ತರಿಸಬೇಕು. ನಾಮ್ಕೇವಾಸ್ತೆ ಪರಿಶೀಲನಾ ಸಮಿತಿಯಿಂದ ನೊಂದ, ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿನಿಯರಿಗೆ ನ್ಯಾಯ ಸಿಗುವುದು ಮರೀಚಿಕೆಯಾಗಿದೆ’ ಎಂದು ಹೇಳಿದ್ದಾರೆ.</p>.<p>ವಿರೋಧ, ಪ್ರತಿಭಟನೆ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರವೇಶಾತಿ, ಮಾರ್ಗದರ್ಶನ ಮತ್ತು ಪದವಿ ಪ್ರದಾನ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ, ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿರುವ ಕುರಿತು ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾದ ಬಳಿಕ ಆಮ್ ಆದ್ಮಿ ಪಾರ್ಟಿ, ದ್ರಾವಿಡ ವಿದ್ಯಾರ್ಥಿ ಪರಿಷತ್ ಸೇರಿದಂತೆ ಅನೇಕ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಹಾಗೂ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಸಿದ್ದವು.</p>.<p>‘ಪಿಎಚ್.ಡಿ. ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಬೇಕು, ಯು.ಜಿ.ಸಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ವಿದ್ಯಾರ್ಥಿನಿಯರ ಮೇಲಿನ ಶೋಷಣೆಯನ್ನು ತಡೆಯಲು ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು, ದೂರುಗಳಿಗೆ ತ್ವರಿತ ಪರಿಹಾರ ಒದಗಿಸಬೇಕು. ಅನರ್ಹ ಅಭ್ಯರ್ಥಿಗಳಿಗೆ ನೀಡಲಾದ ಪಿಎಚ್.ಡಿ. ಪದವಿಗಳನ್ನು ಪರಿಶೀಲಿಸಿ, ಅಕ್ರಮಗಳಿದ್ದಲ್ಲಿ ಅಂತಹ ಪದವಿಗಳನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದ್ದರು.</p>.<p>‘ಪ್ರಜಾವಾಣಿ’ ವರದಿ ಮತ್ತು ವಿವಿಧ ಸಂಘಟನೆ, ಪಕ್ಷಗಳ ಪ್ರತಿಭಟನೆಯಿಂದ ಎಚ್ಚೆತ್ತ ವಿಶ್ವವಿದ್ಯಾಲಯವು ಪರಿಶೀಲನೆಗೆ ಸಮಿತಿ ನೇಮಕ ಮಾಡಿರುವುದನ್ನು ವಿದ್ಯಾರ್ಥಿ ಸಂಘಟನೆಗಳು ಸ್ವಾಗತಿಸಿವೆ.</p>.<div><blockquote>ಈ ವಿಶ್ವವಿದ್ಯಾಲಯದಲ್ಲಿ ಆರಂಭದಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಪಿಎಚ್.ಡಿಪ್ರಕ್ರಿಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇಲ್ಲ. ಒಂದು ವೇಳೆ ನಡೆದಿರುವುದು ಸಾಬೀತಾದರೆ ಕಾನೂನು ಕ್ರಮಕೈಗೊಳ್ಳಲಾಗುವುದು </blockquote><span class="attribution">ಪ್ರೊ.ವಿಜಯಾ ಕೋರಿಶೆಟ್ಟಿ ಕುಲಪತಿ, ಮಹಿಳಾ ವಿವಿ, ವಿಜಯಪುರ</span></div>.<p><strong>ವರದಿ ಬಂದ ಬಳಿಕ ಕ್ರಮ: ಪ್ರೊ.ವಿಜಯಾ</strong></p><p>'ಪಿಎಚ್.ಡಿ ಅಧ್ಯಯನದಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿರುವುದರಿಂದ ಅದರ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಸಮಿತಿ ರಚನೆ ಮಾಡಲಾಗಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.</p><p>'ಮಹಿಳಾ ವಿ.ವಿ.ಯಲ್ಲಿ ಪಿಎಚ್.ಡಿ ಅಧ್ಯಯನಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದರೆ ವಿದ್ಯಾರ್ಥಿನಿಯರು ನೇರವಾಗಿ ನನ್ನ ಸಂಪರ್ಕಿಸಿ, ಗಮನಕ್ಕೆ ತಂದರೆ ಸೂಕ್ತ ಕ್ರಮಕೈಗೊಳ್ಳುತ್ತೇನೆ ಎಂದು ಈ ಮೊದಲೇ ಹೇಳಿದ್ದೇನೆ. ಈಗಲೂ ಅನ್ಯಾಯಕ್ಕೆ ಒಳಗಾದವರು, ನೋಂದ ವಿದ್ಯಾರ್ಥಿನಿಯರು ನನಗೆ ಅಥವಾ ಸಮಿತಿ ಎದುರು ತಮಗೆ ಆದ ತೊಂದರೆ, ಶೋಷಣೆ ಕುರಿತು ಧೈರ್ಯವಾಗಿ ಮಾಹಿತಿ ನೀಡಬಹುದಾಗಿದೆ' ಎಂದು ಮನವಿ ಮಾಡಿದರು.</p><p>'ಪಿಎಚ್.ಡಿ ಅಧ್ಯಯನದಲ್ಲಿ ಆಗಿರುವ ಅನ್ಯಾಯ, ಶೋಷಣೆ ಕುರಿತು ದೂರು ನೀಡುವ ಯಾವೊಬ್ಬ ವಿದ್ಯಾರ್ಥಿನಿಯರ ಹೆಸರನ್ನು ಬಹಿರಂಗಪಡಿಸುವುದಿಲ್ಲ, ಗೌಪ್ಯವಾಗಿ ಇಡಲಾಗುವುದು. ಜೊತೆಗೆ ಅವರ ವಿದ್ಯಾಭ್ಯಾಸಕ್ಕೆ ಅಡಚಣೆಆಗದಂತೆ ನೋಡಿಕೊಳ್ಳಲಾಗುವುದು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರವೇಶಾತಿ, ಮಾರ್ಗದರ್ಶನ ಮತ್ತು ಪದವಿ ಪ್ರದಾನ ಪ್ರಕ್ರಿಯೆಯಲ್ಲಿ ನಡೆದಿರುವ ಯುಜಿಸಿ ನಿಯಮ ಉಲ್ಲಂಘನೆ, ಅಕ್ರಮ ಮತ್ತು ಭ್ರಷ್ಟಾಚಾರ ಆರೋಪ ಪರಿಶೀಲನೆಗಾಗಿ ಸಮಿತಿ ರಚನೆಯಾಗಿದೆ.</p>.<p>‘ಪಿಎಚ್.ಡಿ ಅಧ್ಯಯನ: ನಿಯಮ ಉಲ್ಲಂಘನೆ, ಅಕ್ರಮ ಆರೋಪ’ ಎಂಬ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ಯಲ್ಲಿ2026ರ ಏ.21ರಂದು ಪ್ರಕಟವಾದ ವಿಶೇಷ ವರದಿ ಆಧರಿಸಿ ಅಕ್ಕಮಹಾದೇವಿವಿ.ವಿ ಕುಲಪತಿ ಪ್ರೊ. ವಿಜಯಾಕೋರಿಶೆಟ್ಟಿ ಅವರು ವಿಶ್ವವಿದ್ಯಾಲಯದಉನ್ನತಾಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಿದ್ದಾರೆ.</p>.<p>ಯಾರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದೆ? ಸಮಿತಿಯಲ್ಲಿ ಯಾರ್ಯಾರು ಇದ್ದಾರೆ? ಸಮಿತಿಗೆ ವರದಿ ನೀಡಲು ನೀಡಿರುವ ಕಾಲಾವಕಾಶ ಎಷ್ಟು? ಎಂಬ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಲು ಕುಲಪತಿಗಳು ನಿರಾಕರಿಸಿದರು.</p>.<p>ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದ ಅಧ್ಯಕ್ಷ ಭೋಗೇಶ್ ಸೊಲ್ಲಾಪುರ, ‘ಪರಿಶೀಲನಾ ಸಮಿತಿಯನ್ನು ಕಾಟಾಚಾರಕ್ಕೆ ನೇಮಕ ಮಾಡಲಾಗಿದೆ. ಸಮಿತಿಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ಅಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿ ಮಾತ್ರ ಇದ್ದಾರೆ. ಹೊರಗಿನವರು ಏಕಿಲ್ಲ ಎಂಬುದಕ್ಕೆ ಕುಲಪತಿಗಳು ಉತ್ತರಿಸಬೇಕು. ನಾಮ್ಕೇವಾಸ್ತೆ ಪರಿಶೀಲನಾ ಸಮಿತಿಯಿಂದ ನೊಂದ, ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿನಿಯರಿಗೆ ನ್ಯಾಯ ಸಿಗುವುದು ಮರೀಚಿಕೆಯಾಗಿದೆ’ ಎಂದು ಹೇಳಿದ್ದಾರೆ.</p>.<p>ವಿರೋಧ, ಪ್ರತಿಭಟನೆ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರವೇಶಾತಿ, ಮಾರ್ಗದರ್ಶನ ಮತ್ತು ಪದವಿ ಪ್ರದಾನ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ, ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿರುವ ಕುರಿತು ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾದ ಬಳಿಕ ಆಮ್ ಆದ್ಮಿ ಪಾರ್ಟಿ, ದ್ರಾವಿಡ ವಿದ್ಯಾರ್ಥಿ ಪರಿಷತ್ ಸೇರಿದಂತೆ ಅನೇಕ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಹಾಗೂ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಸಿದ್ದವು.</p>.<p>‘ಪಿಎಚ್.ಡಿ. ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಬೇಕು, ಯು.ಜಿ.ಸಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ವಿದ್ಯಾರ್ಥಿನಿಯರ ಮೇಲಿನ ಶೋಷಣೆಯನ್ನು ತಡೆಯಲು ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು, ದೂರುಗಳಿಗೆ ತ್ವರಿತ ಪರಿಹಾರ ಒದಗಿಸಬೇಕು. ಅನರ್ಹ ಅಭ್ಯರ್ಥಿಗಳಿಗೆ ನೀಡಲಾದ ಪಿಎಚ್.ಡಿ. ಪದವಿಗಳನ್ನು ಪರಿಶೀಲಿಸಿ, ಅಕ್ರಮಗಳಿದ್ದಲ್ಲಿ ಅಂತಹ ಪದವಿಗಳನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದ್ದರು.</p>.<p>‘ಪ್ರಜಾವಾಣಿ’ ವರದಿ ಮತ್ತು ವಿವಿಧ ಸಂಘಟನೆ, ಪಕ್ಷಗಳ ಪ್ರತಿಭಟನೆಯಿಂದ ಎಚ್ಚೆತ್ತ ವಿಶ್ವವಿದ್ಯಾಲಯವು ಪರಿಶೀಲನೆಗೆ ಸಮಿತಿ ನೇಮಕ ಮಾಡಿರುವುದನ್ನು ವಿದ್ಯಾರ್ಥಿ ಸಂಘಟನೆಗಳು ಸ್ವಾಗತಿಸಿವೆ.</p>.<div><blockquote>ಈ ವಿಶ್ವವಿದ್ಯಾಲಯದಲ್ಲಿ ಆರಂಭದಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಪಿಎಚ್.ಡಿಪ್ರಕ್ರಿಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇಲ್ಲ. ಒಂದು ವೇಳೆ ನಡೆದಿರುವುದು ಸಾಬೀತಾದರೆ ಕಾನೂನು ಕ್ರಮಕೈಗೊಳ್ಳಲಾಗುವುದು </blockquote><span class="attribution">ಪ್ರೊ.ವಿಜಯಾ ಕೋರಿಶೆಟ್ಟಿ ಕುಲಪತಿ, ಮಹಿಳಾ ವಿವಿ, ವಿಜಯಪುರ</span></div>.<p><strong>ವರದಿ ಬಂದ ಬಳಿಕ ಕ್ರಮ: ಪ್ರೊ.ವಿಜಯಾ</strong></p><p>'ಪಿಎಚ್.ಡಿ ಅಧ್ಯಯನದಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿರುವುದರಿಂದ ಅದರ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಸಮಿತಿ ರಚನೆ ಮಾಡಲಾಗಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.</p><p>'ಮಹಿಳಾ ವಿ.ವಿ.ಯಲ್ಲಿ ಪಿಎಚ್.ಡಿ ಅಧ್ಯಯನಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದರೆ ವಿದ್ಯಾರ್ಥಿನಿಯರು ನೇರವಾಗಿ ನನ್ನ ಸಂಪರ್ಕಿಸಿ, ಗಮನಕ್ಕೆ ತಂದರೆ ಸೂಕ್ತ ಕ್ರಮಕೈಗೊಳ್ಳುತ್ತೇನೆ ಎಂದು ಈ ಮೊದಲೇ ಹೇಳಿದ್ದೇನೆ. ಈಗಲೂ ಅನ್ಯಾಯಕ್ಕೆ ಒಳಗಾದವರು, ನೋಂದ ವಿದ್ಯಾರ್ಥಿನಿಯರು ನನಗೆ ಅಥವಾ ಸಮಿತಿ ಎದುರು ತಮಗೆ ಆದ ತೊಂದರೆ, ಶೋಷಣೆ ಕುರಿತು ಧೈರ್ಯವಾಗಿ ಮಾಹಿತಿ ನೀಡಬಹುದಾಗಿದೆ' ಎಂದು ಮನವಿ ಮಾಡಿದರು.</p><p>'ಪಿಎಚ್.ಡಿ ಅಧ್ಯಯನದಲ್ಲಿ ಆಗಿರುವ ಅನ್ಯಾಯ, ಶೋಷಣೆ ಕುರಿತು ದೂರು ನೀಡುವ ಯಾವೊಬ್ಬ ವಿದ್ಯಾರ್ಥಿನಿಯರ ಹೆಸರನ್ನು ಬಹಿರಂಗಪಡಿಸುವುದಿಲ್ಲ, ಗೌಪ್ಯವಾಗಿ ಇಡಲಾಗುವುದು. ಜೊತೆಗೆ ಅವರ ವಿದ್ಯಾಭ್ಯಾಸಕ್ಕೆ ಅಡಚಣೆಆಗದಂತೆ ನೋಡಿಕೊಳ್ಳಲಾಗುವುದು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>