<p><strong>ವಿಜಯಪುರ: </strong>ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ಬರುತ್ತಿರುವ ವಾಟಾಳ್ ನಾಗರಾಜ್ ವಿಜಯಪುರ ಪ್ರವೇಶಿಸದಂತೆ ತಡೆಯಲು ಬಸವನಬಾಗೇವಾಡಿ ಡಿವೈಎಸ್ಪಿ ಈ. ಶಾಂತವೀರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರು ಆಲಮಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಯಲಗೂರ ಕ್ರಾಸ್ ಬಳಿ ಮಂಗಳವಾರ ಬೆಳಿಗ್ಗೆ 8.30ರಿಂದ ಕಾಯುತ್ತಿದ್ದಾರೆ.</p>.<p>ಮರಾಠಾ ನಿಗಮ ಸ್ಥಾಪನೆ ವಿರೋಧಿಸಿ ಕರ್ನಾಟಕ ಬಂದ್ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳನ್ನು ಹಾಗೂ ಹೋರಾಟಗಾರರನ್ನು ರೋಲ್ಕಾಲ್ ಹೋರಾಟಗಾರರು ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲು ವಾಟಾಳ್ ನಾಗರಾಜ್ ಬರುತ್ತಿದ್ದಾರೆ.</p>.<p>ಆಲಮಟ್ಟಿಯಲ್ಲೇ ಅವರನ್ನು ವಶಕ್ಕೆ ಪಡೆದು ಇಡೀ ದಿನ ಅವರನ್ನು ಅಲ್ಲಿಯ ಪ್ರವಾಸಿ ಮಂದಿರದಲ್ಲಿ ಇಡುವ ಸಾಧ್ಯತೆಯಿದೆ.</p>.<p>ಮರಾಠಾ ನಿಗಮ ಸ್ಥಾಪನೆ ವಿರೋಧಿಸಿ ವಿಜಯಪುರದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ಹೇಗೆ ಪ್ರತಿಭಟನೆ ಮಾಡುತ್ತಾರೆ ನೋಡುತ್ತೇನೆ ಎಂಬ ಯತ್ನಾಳ ಅವರ ಧಮಕಿಗೆ ಉತ್ತರ ನೀಡಲು ವಿಜಯಪುರದಲ್ಲೇ ಪ್ರತಿಭಟನೆ ನಡೆಸಲು ವಾಟಾಳ್ ಮತ್ತು ಅವರ ಬೆಂಬಲಿಗರು ನಿರ್ಧರಿಸಿದ್ದಾರೆ.</p>.<p>ವಾಟಾಳ್ ವಿಜಯಪುರಕ್ಕೆ ಬಂದರೆ ಯತ್ನಾಳ ಬೆಂಬಲಿಗರೊಂದಿಗೆ ಘರ್ಷಣೆಯಾಗಬಹುದು.ಕಾನೂನು ಸುವ್ಯವಸ್ಥೆ ಹದಗೆಡಬಹುದು ಎಂಬ ಕಾರಣಕ್ಕೆ ಅವರನ್ನು ಜಿಲ್ಲೆ ಪ್ರವೇಶಿಸದಂತೆ ತಡೆಗಟ್ಟಲು ಪೊಲೀಸರು ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ಬರುತ್ತಿರುವ ವಾಟಾಳ್ ನಾಗರಾಜ್ ವಿಜಯಪುರ ಪ್ರವೇಶಿಸದಂತೆ ತಡೆಯಲು ಬಸವನಬಾಗೇವಾಡಿ ಡಿವೈಎಸ್ಪಿ ಈ. ಶಾಂತವೀರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರು ಆಲಮಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಯಲಗೂರ ಕ್ರಾಸ್ ಬಳಿ ಮಂಗಳವಾರ ಬೆಳಿಗ್ಗೆ 8.30ರಿಂದ ಕಾಯುತ್ತಿದ್ದಾರೆ.</p>.<p>ಮರಾಠಾ ನಿಗಮ ಸ್ಥಾಪನೆ ವಿರೋಧಿಸಿ ಕರ್ನಾಟಕ ಬಂದ್ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳನ್ನು ಹಾಗೂ ಹೋರಾಟಗಾರರನ್ನು ರೋಲ್ಕಾಲ್ ಹೋರಾಟಗಾರರು ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲು ವಾಟಾಳ್ ನಾಗರಾಜ್ ಬರುತ್ತಿದ್ದಾರೆ.</p>.<p>ಆಲಮಟ್ಟಿಯಲ್ಲೇ ಅವರನ್ನು ವಶಕ್ಕೆ ಪಡೆದು ಇಡೀ ದಿನ ಅವರನ್ನು ಅಲ್ಲಿಯ ಪ್ರವಾಸಿ ಮಂದಿರದಲ್ಲಿ ಇಡುವ ಸಾಧ್ಯತೆಯಿದೆ.</p>.<p>ಮರಾಠಾ ನಿಗಮ ಸ್ಥಾಪನೆ ವಿರೋಧಿಸಿ ವಿಜಯಪುರದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ಹೇಗೆ ಪ್ರತಿಭಟನೆ ಮಾಡುತ್ತಾರೆ ನೋಡುತ್ತೇನೆ ಎಂಬ ಯತ್ನಾಳ ಅವರ ಧಮಕಿಗೆ ಉತ್ತರ ನೀಡಲು ವಿಜಯಪುರದಲ್ಲೇ ಪ್ರತಿಭಟನೆ ನಡೆಸಲು ವಾಟಾಳ್ ಮತ್ತು ಅವರ ಬೆಂಬಲಿಗರು ನಿರ್ಧರಿಸಿದ್ದಾರೆ.</p>.<p>ವಾಟಾಳ್ ವಿಜಯಪುರಕ್ಕೆ ಬಂದರೆ ಯತ್ನಾಳ ಬೆಂಬಲಿಗರೊಂದಿಗೆ ಘರ್ಷಣೆಯಾಗಬಹುದು.ಕಾನೂನು ಸುವ್ಯವಸ್ಥೆ ಹದಗೆಡಬಹುದು ಎಂಬ ಕಾರಣಕ್ಕೆ ಅವರನ್ನು ಜಿಲ್ಲೆ ಪ್ರವೇಶಿಸದಂತೆ ತಡೆಗಟ್ಟಲು ಪೊಲೀಸರು ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>