<p><strong>ವಿಜಯಪುರ</strong>: ‘ಯಾವ ಸಮಾಜದ ರಾಜಕೀಯೇತರ ಸಂಘಟನೆಯ ಬೇರು ಗಟ್ಟಿಯಾಗಿರುತ್ತೊ, ಆ ಸಮುದಾಯ ರಾಜಕೀಯ ಅಧಿಕಾರವನ್ನು ಪಡೆದು ಆಳುವ ವರ್ಗವಾಗುತ್ತದೆ’ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಹೇಳಿದರು.</p>.<p>ನಗರದ ದಲಿತ ವಿದ್ಯಾರ್ಥಿ ಪರಿಷತ್ತಿನ ಕಛೇರಿಯಲ್ಲಿ ಆಯೋಜಿಸಿದ್ದ ದಾದಾಸಾಹೇಬ್ ಕಾನ್ಷಿರಾಮ್ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಶೋಷಿತ ಸಮುದಾಯಗಳ ಸಮಗ್ರ ಅಭಿವೃದ್ಧಿಯು ಅವರ ರಾಜಕೀಯ ಅಧಿಕಾರದಿಂದ ಮಾತ್ರ ಸಾಧ್ಯ ಎಂದು ಪ್ರಯೋಗಾರ್ಥವಾಗಿ ದೇಶದ ಬಹುದೊಡ್ಡ ರಾಜ್ಯವಾದ ಉತ್ತರಪ್ರದೇಶದಲ್ಲಿ ಸಾಧಿಸಿ ತೋರಿಸಿದ್ದು ಮಾದರಿಯಾಗಿದೆ’ ಎಂದರು.</p>.<p>ಪರಿಷತ್ತಿನ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ ಮಾತನಾಡಿದರು. ಮುಖಂಡರಾದ ಮಹಾದೇವ ಚಲವಾದಿ, ಪ್ರೇಮಾ ಕೋಳಿ, ದಾವಲ್ ನಾಯ್ಕೋಡಿ, ಸಂದೇಶ್ ಕುಮಟಗಿ, ಹುಚ್ಚಪ್ಪ ಭಾವಿಮನಿ, ವಿರೇಶ ಪೂಜಾ, ಭಾಗ್ಯಶ್ರೀ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-26-1681921821</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಯಾವ ಸಮಾಜದ ರಾಜಕೀಯೇತರ ಸಂಘಟನೆಯ ಬೇರು ಗಟ್ಟಿಯಾಗಿರುತ್ತೊ, ಆ ಸಮುದಾಯ ರಾಜಕೀಯ ಅಧಿಕಾರವನ್ನು ಪಡೆದು ಆಳುವ ವರ್ಗವಾಗುತ್ತದೆ’ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಹೇಳಿದರು.</p>.<p>ನಗರದ ದಲಿತ ವಿದ್ಯಾರ್ಥಿ ಪರಿಷತ್ತಿನ ಕಛೇರಿಯಲ್ಲಿ ಆಯೋಜಿಸಿದ್ದ ದಾದಾಸಾಹೇಬ್ ಕಾನ್ಷಿರಾಮ್ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಶೋಷಿತ ಸಮುದಾಯಗಳ ಸಮಗ್ರ ಅಭಿವೃದ್ಧಿಯು ಅವರ ರಾಜಕೀಯ ಅಧಿಕಾರದಿಂದ ಮಾತ್ರ ಸಾಧ್ಯ ಎಂದು ಪ್ರಯೋಗಾರ್ಥವಾಗಿ ದೇಶದ ಬಹುದೊಡ್ಡ ರಾಜ್ಯವಾದ ಉತ್ತರಪ್ರದೇಶದಲ್ಲಿ ಸಾಧಿಸಿ ತೋರಿಸಿದ್ದು ಮಾದರಿಯಾಗಿದೆ’ ಎಂದರು.</p>.<p>ಪರಿಷತ್ತಿನ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ ಮಾತನಾಡಿದರು. ಮುಖಂಡರಾದ ಮಹಾದೇವ ಚಲವಾದಿ, ಪ್ರೇಮಾ ಕೋಳಿ, ದಾವಲ್ ನಾಯ್ಕೋಡಿ, ಸಂದೇಶ್ ಕುಮಟಗಿ, ಹುಚ್ಚಪ್ಪ ಭಾವಿಮನಿ, ವಿರೇಶ ಪೂಜಾ, ಭಾಗ್ಯಶ್ರೀ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-26-1681921821</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>