<p><strong>ಸಿಂದಗಿ:</strong> ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಧುನಿಕ ತಂತ್ರಜ್ಞಾನ ಹೊಂದಿರುವ ಡಿಜಿಟಲ್ ಪೆನಲ್ ಸ್ಕ್ರೀನ್ ಬೋರ್ಡ್ಗಳನ್ನು ಅಳವಡಿಸಲಾಗಿದೆ ಎಂದು ಮುಖ್ಯ ಶಿಕ್ಷಕ ಜಗದೀಶ ಪಾಟೀಲ ಹೇಳಿದರು. </p>.<p>ಇಲ್ಲಿನ ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಿಜಿಟಲ್ ಪೆನಲ್ ಸ್ಮಾರ್ಟ್ ಬೋರ್ಡ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಒಂದರಿಂದ ಹತ್ತನೆಯ ತರಗತಿಯ ಎಲ್ಲ ಪಠ್ಯ ವಿಷಯಗಳು ಇದರಲ್ಲಿ ಅಡಕವಾಗಿವೆ. ವಿದ್ಯಾರ್ಥಿಗಳಿಗೆ ಕಲಿಯಲು ಇನ್ನಷ್ಟು ಆಸಕ್ತಿ ಮೂಡಿಸಲು ಇದು ಸಹಕಾರಿಯಾಗಿದೆ ಎಂದು ತಿಳಿಸಿದರು.</p>.<p>ವಿಜ್ಞಾನ ಪ್ರಯೋಗ, ಇತಿಹಾಸಕಾರರ ಭಾವಚಿತ್ರಗಳು, ಕನ್ನಡ ವಿಷಯದ ಸಂಪೂರ್ಣ ಪರಿಚಯ, ಗಣಿತ ವಿಷಯಕ್ಕೆ ಸಂಬಂಧಿಸಿದ ಎಲ್ಲ ಪ್ರಮೇಯಗಳು ಈ ಬೋರ್ಡ್ ನಲ್ಲಿ 3 ಡಿಯಲ್ಲಿ ಕಾಣಬಹುದು. ಇದರಿಂದ ವಿದ್ಯಾರ್ಥಿಗಳ ಗಮನ ಪಾಠದತ್ತ ಕೇಂದ್ರೀಕರಿಸಲು ಸಹಕಾರಿಯಾಗುತ್ತದೆ.ದೃ ಶ್ಯ ಮಾದ್ಯಮದಿಂದ ಬೋಧನೆ ಅತ್ಯಂತ ಪರಿಣಾಮಕಾರಿಯಾಗುತ್ತದೆ. ಈ ಪ್ರಯೋಗ ಇಡೀ ತಾಲ್ಲೂಕಿನಲ್ಲಿಯೇ ನಮ್ಮ ಶಾಲೆ ಪ್ರಥಮ ಎಂಬುದು ನಮಗೆ ಹೆಮ್ಮೆ ಎಂದು ತಿಳಿಸಿದರು.</p>.<p>ಸಮಿತಿಯ ಆಡಳಿತ ಮಂಡಳಿಯ ಕಾರ್ಯದರ್ಶಿ ಸತೀಶ ಹಿರೇಮಠ, ನಿರ್ದೇಶಕರಾದ ರವಿ ಪೂಜಾರಿ, ಶಿವಾನಂದ ಹಿರೇಮಠ, ಮಲ್ಲಿಕಾರ್ಜುನ ಕೋಬಾಳ, ಪ್ರಾಚಾರ್ಯೆ ಜಗದೇವಿ ನಂದಿಕೋಲ, ಶಿಕ್ಷಕರಾದ ಪದ್ಮಾವತಿ, ಸಾವಿತ್ರಿ ಮೋದಿ, ಎಸ್.ಎ.ರಾಠೋಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಧುನಿಕ ತಂತ್ರಜ್ಞಾನ ಹೊಂದಿರುವ ಡಿಜಿಟಲ್ ಪೆನಲ್ ಸ್ಕ್ರೀನ್ ಬೋರ್ಡ್ಗಳನ್ನು ಅಳವಡಿಸಲಾಗಿದೆ ಎಂದು ಮುಖ್ಯ ಶಿಕ್ಷಕ ಜಗದೀಶ ಪಾಟೀಲ ಹೇಳಿದರು. </p>.<p>ಇಲ್ಲಿನ ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಿಜಿಟಲ್ ಪೆನಲ್ ಸ್ಮಾರ್ಟ್ ಬೋರ್ಡ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಒಂದರಿಂದ ಹತ್ತನೆಯ ತರಗತಿಯ ಎಲ್ಲ ಪಠ್ಯ ವಿಷಯಗಳು ಇದರಲ್ಲಿ ಅಡಕವಾಗಿವೆ. ವಿದ್ಯಾರ್ಥಿಗಳಿಗೆ ಕಲಿಯಲು ಇನ್ನಷ್ಟು ಆಸಕ್ತಿ ಮೂಡಿಸಲು ಇದು ಸಹಕಾರಿಯಾಗಿದೆ ಎಂದು ತಿಳಿಸಿದರು.</p>.<p>ವಿಜ್ಞಾನ ಪ್ರಯೋಗ, ಇತಿಹಾಸಕಾರರ ಭಾವಚಿತ್ರಗಳು, ಕನ್ನಡ ವಿಷಯದ ಸಂಪೂರ್ಣ ಪರಿಚಯ, ಗಣಿತ ವಿಷಯಕ್ಕೆ ಸಂಬಂಧಿಸಿದ ಎಲ್ಲ ಪ್ರಮೇಯಗಳು ಈ ಬೋರ್ಡ್ ನಲ್ಲಿ 3 ಡಿಯಲ್ಲಿ ಕಾಣಬಹುದು. ಇದರಿಂದ ವಿದ್ಯಾರ್ಥಿಗಳ ಗಮನ ಪಾಠದತ್ತ ಕೇಂದ್ರೀಕರಿಸಲು ಸಹಕಾರಿಯಾಗುತ್ತದೆ.ದೃ ಶ್ಯ ಮಾದ್ಯಮದಿಂದ ಬೋಧನೆ ಅತ್ಯಂತ ಪರಿಣಾಮಕಾರಿಯಾಗುತ್ತದೆ. ಈ ಪ್ರಯೋಗ ಇಡೀ ತಾಲ್ಲೂಕಿನಲ್ಲಿಯೇ ನಮ್ಮ ಶಾಲೆ ಪ್ರಥಮ ಎಂಬುದು ನಮಗೆ ಹೆಮ್ಮೆ ಎಂದು ತಿಳಿಸಿದರು.</p>.<p>ಸಮಿತಿಯ ಆಡಳಿತ ಮಂಡಳಿಯ ಕಾರ್ಯದರ್ಶಿ ಸತೀಶ ಹಿರೇಮಠ, ನಿರ್ದೇಶಕರಾದ ರವಿ ಪೂಜಾರಿ, ಶಿವಾನಂದ ಹಿರೇಮಠ, ಮಲ್ಲಿಕಾರ್ಜುನ ಕೋಬಾಳ, ಪ್ರಾಚಾರ್ಯೆ ಜಗದೇವಿ ನಂದಿಕೋಲ, ಶಿಕ್ಷಕರಾದ ಪದ್ಮಾವತಿ, ಸಾವಿತ್ರಿ ಮೋದಿ, ಎಸ್.ಎ.ರಾಠೋಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>