<p>ವಿಜಯಪುರ (ದೇವನಹಳ್ಳಿ): ವಿಜಯಪುರ ಪುರಸಭೆ 2026-27ನೇ ಸಾಲಿನ ಬಜೆಟ್ ಮಂಡನೆ ಸಭೆಯನ್ನು ಎರಡು ಬಾರಿ ಮುಂದೂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.</p>.<p>ಕಳೆದ ಮಾರ್ಚ್ನಲ್ಲಿ ಬಜೆಟ್ ಮಂಡನೆಗೆ ಸಂಬಂಧಿಸಿದಂತೆ ಪುರಸಭೆ ಅಧ್ಯಕ್ಷೆ ಎಸ್.ಭವ್ಯಾ ಮಹೇಶ್ ನೇತೃತ್ವದಲ್ಲಿ ಸಾರ್ವಜನಿಕರು, ಸಂಘ-ಸಂಸ್ಥೆಗಳು ಹಾಗೂ ಪುರಸಭೆ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅಜೆಂಡಾ ಪುಸ್ತಕ ತಯಾರಿಸಲಾಗಿತ್ತು.</p>.<p>ಬಜೆಟ್ ಮಂಡನೆಗೆ ದಿನಾಂಕ ನಿಗದಿಪಡಿಸುವಷ್ಟರಲ್ಲಿ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಬೆಂಬಲಿಸಿದ ಏಳು ಮಂದಿ ಜೆಡಿಎಸ್ ಸದಸ್ಯರು ಅನರ್ಹಗೊಂಡಿದ್ದು ಒಂದು ಕಾರಣವಾಗಿದೆ. ಇದರೊಂದಿಗೆ, ಕಾಂಗ್ರೆಸ್ನಲ್ಲಿ ಗುಂಪುಗಾರಿಕೆ ಮತ್ತು ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತೊಂದು ಕಾರಣ ಎನ್ನಲಾಗಿದೆ.</p>.<p>ಅನರ್ಹಗೊಂಡ ಏಳು ಮಂದಿ ಜೆಡಿಎಸ್ ಸದಸ್ಯರು ತಮ್ಮ ಸದಸ್ಯತ್ವ ಉಳಿಸಿಕೊಳ್ಳಲು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಕರಣ ನ್ಯಾಯಾಲಯದ ಹಂತದಲ್ಲಿರುವುದರಿಂದ ಬಜೆಟ್ ಮಂಡಿಸಲೇಬೇಕಾದ ಅನಿವಾರ್ಯತೆ ಪುರಸಭೆ ಅಧ್ಯಕ್ಷರಿಗೆ ಎದುರಾಗಿದೆ.</p>.<p>ಏಳು ಮಂದಿ ಅನರ್ಹ ಸದಸ್ಯರನ್ನು ಹೊರತುಪಡಿಸಿ ಉಳಿದ 16 ಸದಸ್ಯರಿಗೆ ಎರಡು ಬಾರಿ ಬಜೆಟ್ ಮಂಡನೆಗೆ ದಿನಾಂಕ ನಿಗದಿಪಡಿಸಿ ಮುಂದೂಡಲಾಗಿದೆ. ಏಪ್ರಿಲ್ 6 ಮತ್ತು 16ರಂದು ನಿಗದಿಯಾಗಿದ್ದ ಸಭೆಯನ್ನು ಮುಂದೂಡಿರುವ ಅಧ್ಯಕ್ಷರು, ಸದಸ್ಯರಿಗೆ ಸೂಚನಾ ಪತ್ರ ಹಾಗೂ ಅಜೆಂಡಾ ಪುಸ್ತಕ ಕಳುಹಿಸಿಕೊಟ್ಟಿದ್ದಾರೆ. ಮುಂದಿನ ದಿನಾಂಕ ಪ್ರಕಟಿಸುವುದಾಗಿ ಸೂಚನಾ ಪತ್ರದಲ್ಲಿ ತಿಳಿಸಲಾಗಿದೆ.</p>.<p>ಪ್ರಸ್ತುತ ಆರರಿಂದ ಒಂಬತ್ತು ಮಂದಿ ಸದಸ್ಯರು ಹಾಜರಿದ್ದರೆ ಕೋರಂ ಪೂರ್ತಿಯಾಗಲಿದೆ. ಒಬ್ಬ ಪಕ್ಷೇತರ ಸದಸ್ಯ ಸೇರಿದಂತೆ ಕಾಂಗ್ರೆಸ್ ಒಂಬತ್ತು ಮಂದಿ ಸದಸ್ಯರಿದ್ದರೂ ಪಕ್ಷದೊಳಗಿನ ಗುಂಪುಗಾರಿಕೆಯೇ ಬಜೆಟ್ ಮಂಡನೆಗೆ ಅಡ್ಡಿಯಾಗಿದೆ. ಇದು ವಿರೋಧ ಪಕ್ಷದ ಸದಸ್ಯರಿಗೆ ಆಹಾರವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-15-1118413125</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ (ದೇವನಹಳ್ಳಿ): ವಿಜಯಪುರ ಪುರಸಭೆ 2026-27ನೇ ಸಾಲಿನ ಬಜೆಟ್ ಮಂಡನೆ ಸಭೆಯನ್ನು ಎರಡು ಬಾರಿ ಮುಂದೂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.</p>.<p>ಕಳೆದ ಮಾರ್ಚ್ನಲ್ಲಿ ಬಜೆಟ್ ಮಂಡನೆಗೆ ಸಂಬಂಧಿಸಿದಂತೆ ಪುರಸಭೆ ಅಧ್ಯಕ್ಷೆ ಎಸ್.ಭವ್ಯಾ ಮಹೇಶ್ ನೇತೃತ್ವದಲ್ಲಿ ಸಾರ್ವಜನಿಕರು, ಸಂಘ-ಸಂಸ್ಥೆಗಳು ಹಾಗೂ ಪುರಸಭೆ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅಜೆಂಡಾ ಪುಸ್ತಕ ತಯಾರಿಸಲಾಗಿತ್ತು.</p>.<p>ಬಜೆಟ್ ಮಂಡನೆಗೆ ದಿನಾಂಕ ನಿಗದಿಪಡಿಸುವಷ್ಟರಲ್ಲಿ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಬೆಂಬಲಿಸಿದ ಏಳು ಮಂದಿ ಜೆಡಿಎಸ್ ಸದಸ್ಯರು ಅನರ್ಹಗೊಂಡಿದ್ದು ಒಂದು ಕಾರಣವಾಗಿದೆ. ಇದರೊಂದಿಗೆ, ಕಾಂಗ್ರೆಸ್ನಲ್ಲಿ ಗುಂಪುಗಾರಿಕೆ ಮತ್ತು ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತೊಂದು ಕಾರಣ ಎನ್ನಲಾಗಿದೆ.</p>.<p>ಅನರ್ಹಗೊಂಡ ಏಳು ಮಂದಿ ಜೆಡಿಎಸ್ ಸದಸ್ಯರು ತಮ್ಮ ಸದಸ್ಯತ್ವ ಉಳಿಸಿಕೊಳ್ಳಲು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಕರಣ ನ್ಯಾಯಾಲಯದ ಹಂತದಲ್ಲಿರುವುದರಿಂದ ಬಜೆಟ್ ಮಂಡಿಸಲೇಬೇಕಾದ ಅನಿವಾರ್ಯತೆ ಪುರಸಭೆ ಅಧ್ಯಕ್ಷರಿಗೆ ಎದುರಾಗಿದೆ.</p>.<p>ಏಳು ಮಂದಿ ಅನರ್ಹ ಸದಸ್ಯರನ್ನು ಹೊರತುಪಡಿಸಿ ಉಳಿದ 16 ಸದಸ್ಯರಿಗೆ ಎರಡು ಬಾರಿ ಬಜೆಟ್ ಮಂಡನೆಗೆ ದಿನಾಂಕ ನಿಗದಿಪಡಿಸಿ ಮುಂದೂಡಲಾಗಿದೆ. ಏಪ್ರಿಲ್ 6 ಮತ್ತು 16ರಂದು ನಿಗದಿಯಾಗಿದ್ದ ಸಭೆಯನ್ನು ಮುಂದೂಡಿರುವ ಅಧ್ಯಕ್ಷರು, ಸದಸ್ಯರಿಗೆ ಸೂಚನಾ ಪತ್ರ ಹಾಗೂ ಅಜೆಂಡಾ ಪುಸ್ತಕ ಕಳುಹಿಸಿಕೊಟ್ಟಿದ್ದಾರೆ. ಮುಂದಿನ ದಿನಾಂಕ ಪ್ರಕಟಿಸುವುದಾಗಿ ಸೂಚನಾ ಪತ್ರದಲ್ಲಿ ತಿಳಿಸಲಾಗಿದೆ.</p>.<p>ಪ್ರಸ್ತುತ ಆರರಿಂದ ಒಂಬತ್ತು ಮಂದಿ ಸದಸ್ಯರು ಹಾಜರಿದ್ದರೆ ಕೋರಂ ಪೂರ್ತಿಯಾಗಲಿದೆ. ಒಬ್ಬ ಪಕ್ಷೇತರ ಸದಸ್ಯ ಸೇರಿದಂತೆ ಕಾಂಗ್ರೆಸ್ ಒಂಬತ್ತು ಮಂದಿ ಸದಸ್ಯರಿದ್ದರೂ ಪಕ್ಷದೊಳಗಿನ ಗುಂಪುಗಾರಿಕೆಯೇ ಬಜೆಟ್ ಮಂಡನೆಗೆ ಅಡ್ಡಿಯಾಗಿದೆ. ಇದು ವಿರೋಧ ಪಕ್ಷದ ಸದಸ್ಯರಿಗೆ ಆಹಾರವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-15-1118413125</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>