<p>ವಿಜಯಪುರ: ರಾಮನವಮಿ ಅಂಗವಾಗಿ ಶ್ರೀರಾಮ ನವಮಿ ಉತ್ಸವ ಸಮಿತಿಯು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಶೋಭಾಯಾತ್ರೆ ಸಂಭ್ರಮದಿಂದ ನಡೆಯಿತು.</p>.<p>ಮೆರವಣಿಗೆಗೆ ಬುರಾಣಪೂರ ಆರೂಢಾಶ್ರಮದ ಮಾತೋಶ್ರೀ ಯೋಗೇಶ್ವರಿ ಮಾತಾ ಚಾಲನೆ ನೀಡಿದರು. ‘ಜೈ ಶ್ರೀರಾಮ’ ಎಂಬ ಉದ್ಘೋಷಗಳು ಮುಗಿಲು ಮುಟ್ಟಿದವು. ಭಗವಾ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಭಕ್ತರು ರಾಮನ ಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದರು.</p>.<p>ವಿವಿಧ ಪುಷ್ಪಗಳಿಂದ ಅಲಂಕೃತ ವಾಹನದಲ್ಲಿದ್ದ ಶ್ರೀರಾಮನ ಭವ್ಯ ಪ್ರತಿಮೆಯನ್ನು ಕಂಡು ದಾರಿಯುದ್ದಕ್ಕೂ ಜನರು ನಮಿಸಿದರು. ಶ್ರೀರಾಮ ಮಂದಿರದಿಂದ ಆರಂಭಗೊಂಡ ಭವ್ಯ ಶೋಭಾಯಾತ್ರೆ ಸಿದ್ಧೇಶ್ವರ ದೇವಾಲಯ, ಗಾಂಧಿ ವೃತ್ತ, ಶಿವಾಜಿ ಮಹಾರಾಜ ವೃತ್ತ ಮೊದಲಾದ ಮಾರ್ಗಗಳಲ್ಲಿ ಸಂಚರಿಸಿ ಅಂಭಾಭವಾನಿ ದೇವಾಲಯಕ್ಕೆ ತಲುಪಿ ಸಂಪನ್ನಗೊಂಡಿತು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ, ಉಮೇಶ್ ವಂದಾಲ, ಶಿವಾನಂದ ಭುಯ್ಯಾರ, ಶರಣು ಸಬರದ, ರಾಜು ಹಿರೇಮಠ್ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-26-598835423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ರಾಮನವಮಿ ಅಂಗವಾಗಿ ಶ್ರೀರಾಮ ನವಮಿ ಉತ್ಸವ ಸಮಿತಿಯು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಶೋಭಾಯಾತ್ರೆ ಸಂಭ್ರಮದಿಂದ ನಡೆಯಿತು.</p>.<p>ಮೆರವಣಿಗೆಗೆ ಬುರಾಣಪೂರ ಆರೂಢಾಶ್ರಮದ ಮಾತೋಶ್ರೀ ಯೋಗೇಶ್ವರಿ ಮಾತಾ ಚಾಲನೆ ನೀಡಿದರು. ‘ಜೈ ಶ್ರೀರಾಮ’ ಎಂಬ ಉದ್ಘೋಷಗಳು ಮುಗಿಲು ಮುಟ್ಟಿದವು. ಭಗವಾ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಭಕ್ತರು ರಾಮನ ಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದರು.</p>.<p>ವಿವಿಧ ಪುಷ್ಪಗಳಿಂದ ಅಲಂಕೃತ ವಾಹನದಲ್ಲಿದ್ದ ಶ್ರೀರಾಮನ ಭವ್ಯ ಪ್ರತಿಮೆಯನ್ನು ಕಂಡು ದಾರಿಯುದ್ದಕ್ಕೂ ಜನರು ನಮಿಸಿದರು. ಶ್ರೀರಾಮ ಮಂದಿರದಿಂದ ಆರಂಭಗೊಂಡ ಭವ್ಯ ಶೋಭಾಯಾತ್ರೆ ಸಿದ್ಧೇಶ್ವರ ದೇವಾಲಯ, ಗಾಂಧಿ ವೃತ್ತ, ಶಿವಾಜಿ ಮಹಾರಾಜ ವೃತ್ತ ಮೊದಲಾದ ಮಾರ್ಗಗಳಲ್ಲಿ ಸಂಚರಿಸಿ ಅಂಭಾಭವಾನಿ ದೇವಾಲಯಕ್ಕೆ ತಲುಪಿ ಸಂಪನ್ನಗೊಂಡಿತು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ, ಉಮೇಶ್ ವಂದಾಲ, ಶಿವಾನಂದ ಭುಯ್ಯಾರ, ಶರಣು ಸಬರದ, ರಾಜು ಹಿರೇಮಠ್ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-26-598835423</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>